Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಿಎಂ ಬಗ್ಗೆ ಅನಂತ್ ಕುಮಾರ್ ಹೆಗ್ಡೆ ಹೇಳಿಕೆ : ಅವನೊಬ್ಬ ಹುಚ್ಚ ಎಂದ ಸಚಿವ ಆಂಜನೇಯ

---Advertisement---

ಚಿತ್ರದುರ್ಗ : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ, ವಿಪಕ್ಷ ನಾಯಕರೆಲ್ಲಾ ಕಾಂಗ್ರೆಸ್ ಮೇಲೆ ಮುಗಿಬಿದ್ದಿದ್ದಾರೆ. ಅದರಲ್ಲೂ ಸಾಕಷ್ಟು ದಿನಗಳಿಂದ ಸೈಲೆಂಟ್ ಆಗಿದ್ದ ಅನಂತ್ ಕುಮಾರ್ ಹೆಗಡೆ ಅವರು ಕೂಡ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅನಂತ್ ಹೆಗಡೆ ಅವರ ಮಾತನ್ನು ಬಿಜೆಪಿ ನಾಯಕ ವಿ ಸೋಮಣ್ಣ ಕೂಡ ವಿರೋಧಿಸಿದ್ದಾರೆ. ಕಾಂಗ್ರೆಸ್ ನಾಯಕರು ಸಹ ಅವರ ಮಾತುಗಳನ್ನು ಖಂಡಿಸಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್ ಆಂಜನೇಯ, ಅನಂತ್ ಕುಮಾರ್ ಹೆಗ್ಡೆ ಅವನೊಬ್ಬ ಹುಚ್ಚ. ಅನಂತ ಕುಮಾರ್‌ ಒಬ್ಬ ಹುಚ್ಚ. ಹುಚ್ಚರ ಬಗ್ಗೆ ಮಾತಾಡ್ತಾರಾ?. ಅವನ ಬಗ್ಗೆ ಮಾತಾಡಲ್ಲ. ಅವನ ಬಗ್ಗೆ ಮಾತಾಡಿ ದೊಡ್ಡವನನ್ನಾಗಿಸಿದಂತೆ ಆಗುತ್ತದೆ’ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ರಾಮರಾಜ್ಯದ ಕನಸು ಅನಾವರಣ ಮಾಡಿ ಕಾರ್ಯರೂಪಕ್ಕೆ ತಂದವರು. ಜನ ಮೆಚ್ಚಿದ ಸಿದ್ಧರಾಮಯ್ಯ ಬಗ್ಗೆ ಹಗುರವಾಗಿ ಮಾತಾಡ್ತಾನಲ್ಲ, ಅವನು ಮನುಷ್ಯನಾ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದೆ ವೇಳೆ ಮುನಿಸ್ವಾಮಿ ವಿರುದ್ದವೂ ಕಿಡಿಕಾರಿದ್ದು, ಕಾಂಗ್ರೆಸ್ ಸರ್ಕಾರ ಹಿಂಧೂ ಧರ್ಮ, ಶ್ರೀರಾಮನ ವಿರೋಧಿ ಎಂಬ ಬಿಜೆಪಿ ಸಂಸದ ಮುನಿಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಬಹಳಷ್ಟು ಜನ ಹಿಂದೂಗಳಿರುವುದೇ ಕಾಂಗ್ರೆಸ್ ಪಕ್ಷದಲ್ಲಿ. ಹಿಂದೂ ಧರ್ಮ, ರಾಮ ಪೂಜೆ ಮಾಡುವವರು ಹೆಚ್ಚಿರುವುದು ಕಾಂಗ್ರೆಸ್ ಪಕ್ಷದಲ್ಲಿ. ರಾಮನ ಹೆಸರಿನಲ್ಲಿ ಮತಕ್ಕಾಗಿ ಮಾರ್ಕೆಂಟಿಂಗ್ ಮಾಡುವವರು ಕಾಂಗ್ರೆಸ್ಸಿಗರಲ್ಲ ಎಂದರು.

ಅಯೋಧ್ಯೆಯಲ್ಲಿ ಇದೇ ತಿಂಗಳ 22ಕ್ಕೆ ರಾಮಮಂದಿರ ಉದ್ಘಾಟನೆಯಾಗಲಿದೆ. ಆದರೆ ಕಾಂಗ್ರೆಸ್ ನವರು ಹೋಗುತ್ತಿಲ್ಲ. ಈ ಬಗ್ಗೆ ಮಾತನಾಡಿ, ಕೋಟ್ಯಾಂತರ ಕಾಂಗ್ರೆಸ್ಸಿಗರ ಹೃದಯದಲ್ಲಿ ರಾಮನಿದ್ದಾನೆ. ಆಂಜನೇಯನ ಹೃದಯದಲ್ಲಿ ರಾಮನಿದ್ದಂತೆ ಕಾಂಗ್ರೆಸ್ಸಿಗರ ಹೃದಯದಲ್ಲಿ ರಾಮ. ನಾವು ರಾಮನ ವಿರೋಧಿ ಅಲ್ಲ, ಹಿಂದೂಗಳ ವಿರೋಧಿ ಅಲ್ಲ. ಹಿಂದೂಗಳ ಪರ, ಮುಸ್ಲಿಂರ ಪರ ಎಲ್ಲಾ ಧರ್ಮಗಳ ಜನರ ಪರವಿದ್ದೇವೆ ಎಂದು ಮಾಜಿ ಸಚಿವ ಆಂಜನೇಯ ತಿಳಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...