ಅಮರಾವತಿ: ಚುನಾವಣೆ ಹತ್ತಿರ ಬಂದಾಗ ರಾಜಕೀಯ ನಾಯಕರು ಜನರಿಗೆ ಆಶ್ವಾಸನೆ ನೀಡೋದು ಸಹಜ. ಆ ಪ್ರಣಾಳಿಕೆಯಲ್ಲಿ ಜನರಿಗೆ ಏನು ಬೇಕೋ ಆ ಅಗತ್ಯ ಸೇವೆಗಳ ಮೇಲೆ ಆಶ್ವಾಸಬೆ ನೀಡುತ್ತಾರೆ. ಅಭಿವೃದ್ಧಿ ಬಗ್ಗೆ ಹೆಚ್ಚು ರಾಜಕಾರಣಿಗಳು ಆಶ್ವಾಸನೆ ನೀಡಿದ್ರೆ, ವಿಜಯವಾಡದಲ್ಲಿ ಬಿಜೆಪಿ ಮುಖಂಡರೊಬ್ಬರು ಎಣ್ಣೆ ಪ್ರಿಯರಿಗೆ ಇಷ್ಟವಾಗುವಂತೆ ಯೋಜನೆ ತರಲು ಹೊರಟಿದ್ದಾರೆ.
ಆಂಧ್ರಪ್ರದೇಶದಲ್ಲಿ 2024ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವನ್ನ ಅಧಿಕಾರಕ್ಕೆ ತಂದರೆ ಕೇವಲ 70 ರೂಪಾಯಿಗೆ ಮದ್ಯ ಸಿಗುವಂತೆ ಮಾಡ್ತೇನೆ ಅಂತ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸೋಮು ವೀರಜ್ಜು ಆಶ್ವಾಸನೆ ನೀಡಿದ್ದಾರೆ. ಅಷ್ಟೇ ಅಲ್ಲ ರಾಜ್ಯದ ಖಜಾನೆಯಲ್ಲಿ ಸಾಕಷ್ಟು ಹಣವಿದ್ದರೆ 50 ರೂಪಾಯಿಗೆ ಸಿಗುವಂತೆ ಮಾಡುತ್ತೇವೆ ಎಂದಿದ್ದಾರೆ.
ಇದೇ ವೇಳೆ ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ ವೀರಜ್ಜು, ಅಪಾರ ಸಂಪನ್ಮೂಲ, ಸಂಪತ್ತು ಇದೆ. ಆದರೆ ಯಾವುದೇ ಅಭಿವೃದ್ಧಿಯನ್ನೂ ಕಾಣುತ್ತಿಲ್ಲ. ಇದಕ್ಕೆ ಕಾರಣ ಆಂಧ್ರವನ್ನು ಆಳಿದ ರಾಜಕೀಯ ಪಕ್ಷಗಳು ಎಂದು ವೈಎಸ್ಆರ್ ಕಾಂಗ್ರೆಸ್ ಮತ್ತು ತೆಲುಗು ದೇಸಂ ಪಕ್ಷಗಳನ್ನು ದೂಷಿಸಿದರು. ಈ ರಾಜ್ಯದಲ್ಲಿ ಕೋಟ್ಯಂತರ ಜನರು ಮದ್ಯ ಸೇವನೆ ಮಾಡುತ್ತಾರೆ ಎಂಬುದು ನನಗೆ ಗೊತ್ತು. ನೀವು ನಮ್ಮ ಬಿಜೆಪಿಗೆ ಮತ ಹಾಕಿ. ನಾವು ಸರ್ಕಾರ ರಚನೆ ಮಾಡಿದರೆ ಖಂಡಿತವಾಗಿಯೂ ಕಡಿಮೆ ಬೆಲೆಗೆ ಮದ್ಯ ಸಿಗುವಂತೆ ಮಾಡುತ್ತೇವೆ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…