Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಸರ್ಕಾರ ಮರೆತಿದ್ದ ಮತ್ತೊಂದು ಗ್ಯಾರಂಟಿ ಯೋಜನೆ ನೆನಪಿಸಲು ಮುಂದಾದ ಅಂಗನವಾಡಿ ಕಾರ್ಯಕರ್ತೆಯರು..!

Facebook
Twitter
Telegram
WhatsApp

 

ಬೆಂಗಳೂರು: ಈಗಷ್ಟೇ ಕ್ಯಾಬ್, ಆಟೋ, ಬಸ್ ಚಾಲಕರ ಬೇಡಿಕೆ ಈಡೇರಿಕೆಗಳ ಪ್ರತಿಭಟನೆಯನ್ನಯ ತಣ್ಣಗೆ ಮಾಡಿ ಆಗಿದೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆ ಎದುರಾಗುತ್ತಿದೆ. ಅದುವೇ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ.

ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ಸಾಕಷ್ಟು ಭರವಸೆಗಳನ್ನು ನೀಡಿತ್ತು. ಅದರಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಯೂ ಒಂದು. ಇದೀಗ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿರುವ ಸರ್ಕಾರದ ಮುಂದೆ ತಮ್ಮ ಗ್ಯಾರಂಟಿ ಬಗ್ಗೆಯೂ ಮನವಿ ಇಡಲು ಹೊರಟಿದ್ದಾರೆ. ಸೆಪ್ಟೆಂಬರ್ 15 ರಂದು ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಮಡೆಸಲಿದ್ದಾರೆ.

ಇದರ ಜೊತೆಗೆ ಶಿಕ್ಷಣ ಇಲಾಖೆಯ ಆದೇಶದ ವಿರುದ್ಧವೂ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಗಿಳಿಯಲಿದ್ದಾರೆ. ಶಾಲೆಗಳಲ್ಲಿಯೇ ಪೂರ್ವ ಪ್ರಾಥಮಿಕ ತರಗತಿಗಳನ್ನು ತೆರೆಯಲು ಇಲಾಖೆ ಆದೇಶ ಹೊರಡಿಸಿದೆ. ಖಾಸಗಿ ಶಾಲೆಗಳಿಂದ ಸರ್ಜಾರಿ ಶಾಲೆಯತ್ತ ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆ ತರುವ ಉದ್ದೇಶದಿಂದ ಇಲಾಖೆ ಈ ಆದೇಶ ಹೊರಡಿಸಿದೆ. ಆದರೆ ಇದರಿಂದ ಅಂಗನವಾಡಿಗಳು ಮುಚ್ಚುವ ಸ್ಥಿತಿ ಬರುತ್ತೆ ಎಂದು ಕಾರ್ಯಕರ್ತೆಯರು ಬೇಸರ ಹೊರ ಹಾಕಿದ್ದಾರೆ.

ಈಗಲೇ ಅಂಗನವಾಡಿಗಳು ಅಳಿವಿನಂಚಿನಲ್ಲಿವೆ. ಇನ್ನು ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಆರಂಭವಾಗಿ ಬಿಟ್ಟರೆ, ಅಂಗನವಾಡಿಯ ಕಡೆಗೆ ಮಕ್ಕಳು ಸುಳಿಯುವುದೇ ಇಲ್ಲ. ನಂತರದ ದಿನಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೀದಿಗೆ ಬೀಳುವುದು ಗ್ಯಾರಂಟಿ ಎಂಬ ಆತಂಕ ಸಿಬ್ಬಂದಿಗಳಲ್ಲಿ ಕಾಡುತ್ತಿದೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

ಪಾಕ್ ಜಿಂದಾಬಾದ್ ಎಂದವನಿಗೆ ನಾವೇ ಗುಂಡಿಟ್ಟು ಸಾಯಿಸುತ್ತೇವೆ : ಸಚಿವ ಜಮೀರ್

ರಾಯಚೂರು: ಪಾಕಿಸ್ತಾನ ಘೋಷಣೆ ಕೂಗುವವರನ್ನು ಗುಂಡಿಟ್ಟು ಕೊಲ್ಲಬೇಕು. ಟಿಶ್ಕ್ಯಾಂ ಟಿಶ್ಕ್ಯಾಂ ಟಿಶ್ಕ್ಯಾಂ ಅಂತ ಸ್ಥಳದಲ್ಲೇ ಗುಂಡಿಟ್ಟು ಕೊಲ್ಲಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ಭರ್ಜರಿ ಪ್ರಚಾರ

error: Content is protected !!