Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಷೇರು ಮಾರುಕಟ್ಟೆಯಿಂದ ಅನಿಲ್ ಅಂಬಾನಿ 5 ವರ್ಷ ಬ್ಯಾನ್ : ಕಾರಣವೇನು..?

Facebook
Twitter
Telegram
WhatsApp

ಈಗಾಗಲೇ ಸಾಲದ ಸುಳಿಯಲ್ಲಿ ಸಿಲುಕಿರುವ ಅನಿಲ್ ಅಂಬಾನಿಗೆ ಈಗ ಮತ್ತೊಂದು ಶಾಕಿಂಗ್ ಸುದ್ದಿ ಎದುರಾಗಿದೆ. ಇದರಿಂದ ಮತ್ತಷ್ಟು ಸಂಕಷ್ಟ ಎದುರಿಸುವಂತೆ ಆಗಿದೆ. ಷೇರು ಮಾರುಕಟ್ಟೆಯಿಂದ ಬ್ಯಾನ್ ಆಗಿದ್ದಾರೆ. ಅದರಲ್ಲೂ ಐದು ವರ್ಷಗಳ ಕಾಲ ಷೇರು ಮಾರುಕಟ್ಟೆಯಿಂದ ಬ್ಯಾನ್ ಮಾಡಲಾಗಿದೆ.

ಹಣ ದುರುಪಯೋಗ ಮಾಡಿಕೊಂಡ ಪ್ರಕರಣದಲ್ಲಿ ಅನಿಲ್ ಅಂಬಾನಿಯನ್ನು ಬ್ಯಾನ್ ಮಾಡಲಾಗಿದೆ. ರಿಲಯನ್ಸ್ ಹೋಮ್ ಫೈನಾನ್ಸ್ ನ ಮಾಜಿ ಅಧಿಕಾರಿಗಳು ಸೇರಿದಂತೆವೊಟ್ಟು 24 ಉದ್ಯಮಿಗಳನ್ನು ಸೆಕ್ಯೂರಿಟೀಸ್ ಮಾರ್ಕೆಟ್ ನಿಂದ ಐದು ವರ್ಷಗಳ ಕಾಲ ನಿಷೇಧ ಮಾಡಲಾಗಿದೆ. ಜೊತೆಗೆ ಅನಿಲ್ ಅಂಬಾನಿಗೆ 25 ಕೋಟಿ ದಂಡ ವಿಧಿಸಲಾಗಿದೆ. ರಿಲಾಯನ್ಸ್ ಹೋಮ್ ಫೈನಾನ್ಸ್ ಅನ್ನು ಆರು ತಿಂಗಳ ಕಾಲ ನಿಷೇಧಿಸಲಾಗಿದೆ. ನಿಷೇಧದ ಅವಧಿಯಲ್ಲಿ ಅವರು ಸೆಬಿಯಲ್ಲಿ ಯಾವುದೇ ಮಧ್ಯವರ್ತಿ, ನಿರ್ದೇಶಕ ಅಥವಾ ಪ್ರಮುಖ ವ್ಯವಸ್ಥಾಪಕ ಸಿಬ್ಬಂದಿಯಾಗಿ ಸೇರಲು ಸಾಧ್ಯವಾಗುವುದಿಲ್ಲ. ಈ ಘಟನೆ ನಡೆದ ಬೆನ್ನಲ್ಲೇ ಅನಿಲ್ ಅಂಬಾನಿ ಸಮೂಹ ಷೇರುಗಳಲ್ಲಿ ಭಾರೀ ಕುಸಿತ ಕಂಡಿದೆ. ಶೇಕಡ 14ರಷ್ಟು ಶೇರು ಕುಸಿತವಾಗಿದೆ.

 

ಸೆಬಿ ಹಿರಡಿಸಿರುವ ಆದೇಶದಲ್ಲಿ ಅನಿಲ್ ಅಂಬಾನಿ ಮೋಸದ ಸಂಚು ರೂಪಿಸಿದ್ದಾರೆ. ರಿಲಯನ್ಸ್ ಹೋಂ ಫೈನಾನ್ಸ್‌ನಿಂದ ಹಣವನ್ನು ದುರುಪಯೋಗಪಡಿಸಿಕೊಳ್ಳಲು ಹಿರಿಯ ಅಧಿಕಾರಿಗಳ ಸಹಾಯ ಪಡೆದಿದ್ದಾರೆ. ಇದನ್ನು ತನ್ನ ಅಂಗಸಂಸ್ಥೆಗಳಿಂದ ಸಾಲದ ರೀತಿಯಾಗಿ ತೋರಿಸಿದ್ದಾರೆ. ಕಂಪನಿಯ ಮಂಡಳಿಯು ಆ ರೀತಿಯ ಸಾಲವನ್ನು ನೀಡದಂತೆ ಸೂಚನೆ ನೀಡಿತ್ತು. ಜೊತೆಗೆ ಕಾರ್ಪೋರೇಟ್ ಸಾಲದ ಬಗ್ಗೆ ತನಿಖೆ ನಡೆದಿತ್ತು. ಆದರೆ ಕಂಪನಿಯ ಆಡಳಿತ ಮಂಡಳಿ ಈ ಆದೇಶಗಳನ್ನು ನಿರ್ಲಕ್ಷ್ಯ ಮಾಡಿದೆ. ಅನಿಲ್ ಅಂಬಾನಿ ಪ್ರಭಾವದಿಂದ ಸಂಸ್ಥೆಯ ಹಿರಿಯ ಅಧಿಕಾರಿಗಳು ದೋಷ ಮಾಡಿರುವುದು ಸಾಬೀತಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!