ತಿರುಪತಿ ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು : ನಾಲ್ವರನ್ನು ಬಂಧಿಸಿದ ಸಿಬಿಐ

ತಿರುಪತಿ ತಿಮ್ಮಪ್ಪನಿಗೆ ಕೋಟ್ಯಾಂತರ ಭಕ್ತರಿದ್ದಾರೆ. ತಿಮ್ಮಪ್ಪನ ಪ್ರಸಾದ ಅಂದ್ರೆ ಅದು ಲಡ್ಡು. ತಿರುಪತಿಗೆ ಹೋದ ಭಕ್ತರೆಲ್ಲ ಪ್ರಸಾದದ ರೂಪದಲ್ಲಿ ಲಡ್ಡು ತಂದು ಹಂಚುತ್ತಿದ್ದರು. ಆದರೆ ಇತ್ತೀಚೆಗೆ ಲಡ್ಡುವಿನಲ್ಲಿ ಪ್ರಾಣಿಯ ಕೊಬ್ಬನ್ನ ಬಳಸುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಕೇಸನ್ನ ಸಿಬಿಐ ವಹಿಸಿಕೊಂಡು ತನಿಖೆ ನಡೆಸುತ್ತಿತ್ತು. ಇದೀಗ ಆ ಕೇಸಿಗೆ ಬಿಗ್ ಟ್ವಿಸ್ಟ್ ನೀಡಿದ್ದು, ಸಿಬಿಐ ನಾಲ್ವರನ್ನು ಅರೆಸ್ಟ್ ಮಾಡಿದೆ.

ಉತ್ತರಕಾಂಡ್ ರಾಜ್ಯದ ರೂರ್ಕಿ ಬೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕ ವಿಪಿನ್ ಜೈನ್ ಮತ್ತು ಪೊಮಿಲ್ ಜೈನ್ ಪೂನಂಭಾಕ್ಕಂನ ವೈಷ್ಣವಿ ಡೈರಿಯ ಸಿಇಓ ಅಪೂರ್ವ ಬಂಧಿತ ಆರೋಪಿಗಳು. ಟೆಂಡರ್ ಪಡೆಯುವ ಹಂತದಿಂದ ಹಿಡಿದು ಪೂರೈಕೆ ಮಾಡುವ ಹಂತದವರೆಗೂ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ತುಪ್ಪ ಪೂರೈಕೆಯ ವಿಚಾರದಲ್ಲಿ ಆರೋಪಿಗಳು ಅನೇಕ ನಿಯಮಗಳನ್ನು ಉಲ್ಲಂಘಿಸಿರುವ ಆರೋಪವಿದೆ. ತನಿಖೆ ವೇಳೆ ಆರೋಪ ಕೂಡ ದೃಢವಾಗಿದ್ದು, ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ತುಪ್ಪದ ಟೆಂಡರ್ ಪಡೆಯುವುದಕ್ಕೆ ಹಲವು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಸೀಲ್ ಬಳಕೆ ಮಾಡಿದ್ದಾರೆ. ಕೆಲವು ದಾಖಲೆಗಳನ್ನೆ ತಿರುಚಿದ್ದಾರೆ. ತುಪ್ಪದ ಪೂರೈಕೆಯಲ್ಲೂ ವ್ಯತ್ಯಾಸವಾಗಿರುವುದನ್ನು ಸಿಬಿಐ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಇದೀಗ ವಾಪಾಸ್ ಕರ್ನಾಟಕದ ಕೆಎಂಎಫ್ ತುಪ್ಪವನ್ನೇ ಪಡೆಯುತ್ತಿದೆ.

ಈ ಹಿಂದೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಲಡ್ಡು ಬಗ್ಗೆ ಆರೋಪ ಮಾಡಿದ್ದರು. ವೈಎಸ್ಸಿಆರ್ಪಿ ಸರ್ಕಾರವು ಗುಣಮಟ್ಟವಿಲ್ಲದ ಪದಾರ್ಥಗಳು ಹಾಗೂ ಪ್ರಾಣಿ ಕೊಬ್ಬನ್ನು ಬಳಕೆ ಮಾಡಿಕೊಂಡು ಲಡ್ಡು ತಯಾರಿಸುತ್ತಿದೆ ಎಂದು ಆರೋಪಿಸಿದ್ದರು. ಈ ವಿಚಾರ ದೇಶದಾದ್ಯಂತ ಬಾರೀ ಚರ್ಚೆಗೆ ಗ್ರಾಸವಾಗಿತ್ತು.

suddionenews

Recent Posts

ಈ ರಾಶಿಯವರಿಗೆ ಅದೃಷ್ಟದ ಯೋಗಗಳ ಸುರಿಮಳೆ

ಈ ರಾಶಿಯವರಿಗೆ ಅದೃಷ್ಟದ ಯೋಗಗಳ ಸುರಿಮಳೆ, ಮಂಗಳವಾರದ ರಾಶಿ ಭವಿಷ್ಯ 11 ಫೆಬ್ರವರಿ 2025 ಸೂರ್ಯೋದಯ - 6:48 AM…

3 hours ago

ಬೇಡಿಕೆ ಈಡೇರಿಕೆಗಾಗಿ ಗ್ರಾಮ ಆಡಳಿತಾಧಿಕಾರಿಗಳ ಧರಣಿ

ಹಿರಿಯೂರು : ನಗರದ ತಾಲೂಕು ಕಚೇರಿ ಮುಂಭಾಗ ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದ ವತಿಯಿಂದ ಸೋಮವಾರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ…

11 hours ago

ಸರ್ಕಾರಿ ಆಸ್ಪತ್ರೆ ವೈದ್ಯರ ಹಾದಿರಂಪ- ಬೀದಿರಂಪ : ವೀಡಿಯೋ ವೈರಲ್

ಚಿತ್ರದುರ್ಗ: ವೈದ್ಯರನ್ನು ನಂಬುವಷ್ಟು ಜನ ದೇವರನ್ನು ನಂಬುವುದಿಲ್ಲವೇನೊ.‌ ಇಂಥ ವೈದ್ಯರು ಸಾವು ಬದುಕಿನ ನಡುವೆ ಹೋರಾಡುವ ರೋಗಿಗಳ ಕಡೆ ಗಮನ…

11 hours ago

ಯತ್ನಾಳ್ ಗೆ ಶಾಕ್ ನೀಡಿದ ಹೈಕಮಾಂಡ್ : ಏನದು..?

ಬೆಂಗಳೂರು: ಮೊದಲಿನಿಂದಾನೂ ಶಾಸಕ ಯತ್ನಾಳ್, ಯಡಿಯೂರಪ್ಪ ಹಾಗೂ ಪುತ್ರರ ವಿರುದ್ಧ ವಾಗ್ದಾಳಿ ನಡೆಸುತ್ತಲೆ ಇದ್ದಾರೆ. ಇದರ ಮಧ್ಯೆ ಯಡಿಯೂರಪ್ಪ ಅವರಿಗೆ…

12 hours ago

ಫೆಬ್ರವರಿ 12ರಂದು ಶ್ರೀ ರೇಣುಕಾಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ

ಚಿತ್ರದುರ್ಗ: ನಗರದ ಹೊಳಲ್ಕೆರೆ ರಸ್ತೆಯ ಶಾರದಮ್ಮ ಆರ್.ಎಸ್.ರುದ್ರಪ್ಪ ಕಲ್ಯಾಣ ಮಂಟಪದ ಪಕ್ಕದಲ್ಲಿರುವ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಇದೇ…

12 hours ago

ಚಿತ್ರದುರ್ಗದಲ್ಲಿ ಖೋ-ಖೋ ಸಂಸ್ಥೆ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

12 hours ago