Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಣ್ಣಾಮಲೈರನ್ನು ಪೊಲೀಸರಿಗೆ ಒಪ್ಪಿಸಬೇಕು : ಮತ್ತೆ ಗುಡುಗಿದ ನಟಿ ಗಾಯತ್ರಿ ರಘುರಾಮ್..!

---Advertisement---

ಅಣ್ಣಾಮಲೈ ವಿರುದ್ಧ ನಟಿ ಗಾಯತ್ರಿ ರಘುರಾಮ್ ಮತ್ತೆ ಕೆಂಡಕಾರಿದ್ದಾರೆ. ಇವರು ಇರುವ ಕಡೆ ಯಾರಿಗೂ ರಕ್ಷಣೆ ಇಲ್ಲ ಎಂದು ಕಿಡಿಕಾರಿದ್ದಾರೆ. ಹೆಣ್ಣು ಮಕ್ಕಳಿಗೆ ಮಾತ್ರವಲ್ಲ ಇವರು ಚಲಿಸುವ ವಿಮಾನದಲ್ಲಿ ಹೋದವರಿಗೂ ತೊಂದರೆಯಾಗಲಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಡಿಸೆಂಬರ್ 10ರಂದು ಅಣ್ಣಾಮಲೈ ಹಾಗೂ ಸಂಸದ ತೇಜಸ್ವಿ ಸೂರ್ಯ ಇಬ್ಬರು ಏರ್ ಇಂಡಿಗೋ ವಿಮಾನದಲ್ಲಿ ಪ್ರಯಾಣ ಮಾಡಿದ್ದರು. ಈ ವೇಳೆ ವಿಮಾನ ಸಿಬ್ಬಂದಿಗಳು ಪ್ರಯಾಣಿಕರಿಗೆ ಸೂಚನೆಗಳು ನೀಡಿದ್ದರು. ತುರ್ತು ನಿರ್ಗಮನದ ದ್ವಾರದ ಬಗ್ಗೆ ಸೂಚನೆ ನೀಡಿದ್ದರು. ಆದ್ರೆ ಅದ್ಯಾಕೋ ಸೂಚನೆಯೆಲ್ಲಾ ಕೇಳಿಸಿಕೊಂಡರು, ಸಂಸದ ತೇಜಸ್ವಿ ಸೂರ್ಯ, ದ್ವಾರವನ್ನು ತೆಗೆದಿದ್ದರು. ಇದರಿಂದ ವಿಮಾನ ತಡವಾಗಿತ್ತು.

ಈ ಬಗ್ಗೆ ಸುದ್ದಿ ಹಬ್ಬಿದ ಬಳಿಕ ನಟಿ ಗಾಯತ್ರಿ ರಘುರಾಮ್ ರಿಯಾಕ್ಟ್ ಮಾಡಿದ್ದು, ವಿಮಾನದ ಪ್ರಯಾಣಿಕ ಜೀವನವನ್ನು ಅಪಾಯಕ್ಕೆ ತಳ್ಳಿದ್ದಕ್ಕೆ ಇಂಡಿಗೋ ಕಂಪನಿ ಕ್ಷಮಾಪಣಾ ಪತ್ರವನ್ನು ಕಾನೂನು ಪ್ರಕಾರ ಸ್ವೀಕರಿಸುವಂತಿಲ್ಲ. ಪ್ರಯಾಣಿಕರ ಜೀವದ ಜೊತೆಗೆ ಆಟವಾಡಿದ ತೇಜಸ್ವಿ ಸೂರ್ಯ ಮತ್ತು ಅಣ್ಣಾಮಲೈ ವಿರುದ್ಧ ಇಂಡಿಗೋ ಏರ್ ಲೈನ್ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಪ್ರಕರಣ ದಾಖಲಿಸಿ ಪೊಲೀಸರಿಗೆ ಒಪ್ಪಿಸಬೇಕು ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...