Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದಲ್ಲಿ ಜೂನ್ 5 ಮತ್ತು 6 ರಂದು ವಾರ್ಷಿಕೋತ್ಸವ ಹಾಗೂ ದಶಮಾನೋತ್ಸವ ಸಮಾರಂಭ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ,(ಜೂ.04) : ನಗರದ ಭೀಮಸಮುದ್ರ ರಸ್ತೆಯ ಧವಳಗಿರಿ ಬಡಾವಣೆ ಎರಡನೇ ಹಂತದಲ್ಲಿರುವ ಶ್ರೀ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದ ವಾರ್ಷಿಕೋತ್ಸವ ಕಾರ್ಯಕ್ರಮ ಹಾಗೂ ದಶಮಾನೋತ್ಸವ ಸಮಾರಂಭ ಇದೇ ಜೂನ್ 5 ಮತ್ತು 6 ರಂದು ಹಮ್ಮಿಕೊಳ್ಳಲಾಗಿದೆ.

ಜೂನ್ 5 ರಂದು ಬೆಳಿಗ್ಗೆ 8 ರಿಂದ ಸ್ವಸ್ತಿಪುಣ್ಯಾಹವಾಚನ, ಆಚಾರ್ಯದಿ ಋತ್ವಿಗ್ವಹಣ, ಕ್ಷಿಪ್ರ ಪ್ರಸಾದ ಮಹಾ ಗಣಪತಿಗೆ ಮಹಾನ್ಯಾಸ ಪೂರ್ವಕ ಲಘು ರುದ್ರಾಭಿಷೇಕ ಮಹಾಭಿಷೇಕ ಪೂಜಾದಿಗಳು ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನಡೆಯಲಿದೆ. ಸಂಜೆ 5.30 ರಿಂದ ರಕ್ಷೋಘ್ನ ಹೋಮ ನಡೆಯಲಿದೆ. ಸಂಜೆ 7 ಗಂಟೆಗೆ  ಶ್ರೀ ಸದ್ಗುರು ಬ್ರಹ್ಮಚೈತನ್ಯ ಮಹಿಳಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ. ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನಡೆಯಲಿದೆ.

ಜೂನ್ 6ರಂದು ಬೆಳಿಗ್ಗೆ 8 ರಿಂದ ಕ್ಷಿಪ್ರ ಮಹಾಗಣಪತಿಗೆ ಪಂಚಾಮೃತ ಸಹಿತ ರುದ್ರಾಭಿಷೇಕ ಹಾಗೂ ನವಗ್ರಹ ಪುರಸ್ಪರ ಅಷ್ಟದ್ರವ್ಯ ಮಹಾಗಣಪತಿ ಹೋಮ, ಪೂರ್ಣಾಹುತಿ, ಅಲಂಕಾರ ಮಧ್ಯಾಹ್ನ 12 ರಿಂದ ಅಷ್ಠಾವದಾನ ಮಹಾಮಂಗಳಾರತಿ, ಮಧ್ಯಾಹ್ನ 1 ರಿಂದ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 6 ರಿಂದ ದವಳಗಿರಿ ಬಡಾವಣೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಹೆಸರು ನೊಂದಾಯಿಸಲು ಮೊಬೈಲ್ ಸಂಖ್ಯೆ 9945436682 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಎಸ್ ಎಲ್ ವಿ ಶಾಲೆಯಲ್ಲಿ  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಸುದ್ದಿಒನ್, ಚಿತ್ರದುರ್ಗ : ತಾಲ್ಲೂಕಿನ ಕುರುಬರಹಳ್ಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಶಾಲೆಯಲ್ಲಿ ಶುಕ್ರವಾರ ಹುಲ್ಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ನಡೆಯಿತು. ಶ್ರೀ ಬಾಲಾಜಿ ಯುವಕರ ಸಂಘ ಹಾಗೂ  ಎಸ್ ಎಲ್

BMW ನಿಂದ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ ಕೇಳಿದರೆ ಗಾಬರಿಯಾಗ್ತೀರಿ…!

ಸುದ್ದಿಒನ್ | BMW Electric Scooter:  ದ್ವಿಚಕ್ರ ವಾಹನ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಸಮಯ ಬಂದಿದೆ. BMW ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಅವರ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ BMW CE

error: Content is protected !!