Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳಿಗಾಲದ ಅಧಿವೇಶನಕ್ಕೆ ಮೊದಲು ಹಾಜರಾಗುವ ಶಾಸಕರಿಗೆ ಬಹುಮಾನ ಘೋಷಣೆ

---Advertisement---

 

ಬೆಳಗಾವಿ: ನಾಳೆಯಿಂದ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಸುವರ್ಣ ಸೌಧದಲ್ಲಿ ನಡೆಯಲಿವೆ ಅಧಿವೇಶನಕ್ಕೆ ಮೊದಲು ಹಾಜರಾಗುವ ಶಾಸಕರಿಗೆ ವಿಶೇಷ ಬಹುಮಾನವನ್ನು ಘೋಷಣೆ ಮಾಡಲಾಗಿದೆ.

 

ಚಳಿಗಾಲದ ಅಧಿವೇಶನದ ಹಿನ್ನೆಲೆ, ಇಂದು ಸ್ಪೀಕರ್ ಯುಟಿ ಖಾದರ್ ಹಾಗೂ ಬಸವರಾಜ್ ಹೊರಟ್ಟಿ ಅವರು ಸುದ್ದಿಗೋಷ್ಟಿ ನಡೆಸಿ, ಅದರ ಮಾಹಿತಿ ಹಂಚಿಕೊಂಡಿದ್ದಾರೆ. ಡಿಸೆಂಬರ್ 4ರಿಂದ 15ರ ವರೆಗೂ ಚಳಿಗಾಲದ ಅಧಿವೇಶನ ನಿಗಧಿಯಾಗಿದೆ. ಈ ಬಾರಿಯ ಕಲಾಪದಲ್ಲಿ ಒಟ್ಟು ಮೂರು ಬಿಲ್ ಗಳ ಬಗ್ಗೆ ಚರ್ಚೆಯಾಗಲಿದೆ. ಉತ್ತರ ಕರ್ನಾಟಕದ ಮಹದಾಯಿ, ಕೃಷ್ಣಾ ಹಾಗೂ ಬರಗಾಲದ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಲಾಗುತ್ತದೆ. ಈ ಅಧಿವೇಶನದಲ್ಲಿ ಭಾಗಿಯಾಗುವ ಸಚಿವರಿ, ಶಾಸಕರಿಗೆ, ಅಧಿಕಾರಿಗಳಿಗೆ ಊಟ, ವಸತಿ ವ್ಯವಸ್ಥೆಯನ್ನು ಮಾಡಲಾಗಿದೆ. ಸುವರ್ಣ ಸೌಧಕ್ಕೆ ವರ್ಷವಿಡಿ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ.

 

ಬೆಳಗಾವಿ ಅಧಿವೇಶನ ಅಂದ್ರೆ ಬರೀ ಪ್ರತಿಭಟನೆ ಎಂಬುದನ್ನು ಹೋಗಲಾಡಿಸಲು ಚರ್ಚೆ ನಡೆಸಲಾಗುತ್ತದೆ. ಅಧಿವೇಶನ ನಡೆಯುವಾಗ ಹೊರಗಡೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಕಲಾಪ ವೀಕ್ಷಣೆಗೆ ಬರುವ ಶಾಲಾ ಮಕ್ಕಳ ಆರೋಗ್ಯದ ಬಗ್ಗೆಯೂ ಗಮನ ಹರಿಸಲಾಗುತ್ತಿದೆ. ಬಿಸಿಲಿನಲ್ಲಿ ನಿಲ್ಲದಂತೆ ವ್ಯವಸ್ಥೆ ಮಾಡಲಾಗಿದ್ದು, ತಂಪು ಪಾನೀಯಗಳನ್ನು ನೀಡಲಾಗುತ್ತಿದೆ. ಮಕ್ಕಳು ಅರ್ಧ ಗಂಟೆ ಕಲಾಪವನ್ನು ನೋಡಲು ಅವಕಾಶ ನೀಡಲಾಗಿದೆ. ಜೊತೆಗೆ ಕಲಾಪಕ್ಕೆ ಮೊದಲು ಹಾಜರಾಗುವ ಶಾಸಕರಿಗೆ ವಿಶೇಷ ಬಹುಮಾನ ನೀಡಲಾಗುತ್ತಿದೆ. ಅಶೋಕ ಚಕ್ರ ಇರುವ ಚಹಾ ಕಪ್ ಬಹುಮಾನವಾಗಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment