Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತುಕರಾಂ ಪತ್ನಿಗೆ ಸಂಡೂರು ಟಿಕೆಟ್ ಘೋಷಣೆ : ಸಿದ್ದರಾಮಯ್ಯ ಹೇಳಿದ್ದೇನು..?

---Advertisement---

ಮೈಸೂರು: ಉಪಚುನಾವಣೆಯ ಕಣದಲ್ಲಿ ಕಾಂಗ್ರೆಸ್ ಇದೀಗ ಸಂಡೂರು ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಶಿಗ್ಗಾಂವಿ ಹಾಗೂ ಚನ್ನಪಟ್ಟಣವನ್ನು ಬಾಕಿ ಉಳಿಸಿಕೊಂಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ಕ್ಷೇತ್ರದಿಂದ ಇ ತುಕಾರಂ ಗೆಲುವು ಸಾಧಿಸಿದ್ದರು. ಇದೀಗ ಅವರ ಪತ್ನಿಗೆ ಟಿಕೆಟ್ ನೀಡಲಾಗಿದೆ.

 

ಸಿಎಂ ಸಿದ್ದರಾಮಯ್ಯ ಅವರೇ ಟಿಕೆಟ್ ಘೋಷಣೆ ಮಾಡಿದ್ದಾರೆ‌. ಮೈಸೂರಿನಲ್ಲಿ ಈ ಹೇಳಿಕೆ ನೀಡಿದ್ದಾರೆ. ಈ ಮೊದಲೇ ತುಕಾರಂ ಅವರ ಪತ್ನಿ ಅಥವಾ ಮಗಳಿಗೆ ಟಿಕೆಟ್ ನೀಡುವುದಾಗಿ ಮಾತುಗಳು ಕೇಳಿಬಂದಿದ್ದವು. ಇದೀಗ ಅವರ ಪತ್ನಿಗೆ ಟಿಕೆಟ್ ನೀಡಲಾಗಿದೆ. ಈ ವೇಳೆ ಚನ್ನಪಟ್ಟಣದ ಅಭ್ಯರ್ಥಿ ಬಗ್ಗೆಯೂ ಮಾತನಾಡಿದ ಸಿದ್ದರಾಮಯ್ಯ ಅವರು, ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂಬ ಚರ್ಚೆಯಾಗಿದೆ‌. ಡಿಕೆ ಸುರೇಶ್ ಕೂಡ ಪ್ರಬಲ ಅಭ್ಯರ್ಥಿಯಾಗಿದ್ದಾರೆ. ಒಂದೆರಡು ದಿನದಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿಗಳ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ ಎಂದಿದ್ದಾರೆ.

ಕಾಂಗ್ರೆಸ್ಸಿನ ಸಿದ್ದಾಂತ ಹಾಗೂ ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷಕ್ಕೆ ಸ್ವಾಗತ ಎಂದು ಸಿಪಿ ಯೋಗೀಶ್ವರ್ ಕಾಂಗ್ರೆಸ್ ಗೆ ಸೇರುತ್ತಾರಾ ಎಂಬುದರ ಬಗ್ಗೆ ಮಾತನಾಡಿದ್ದಾರೆ. ಇನ್ನು ಸಿಪಿ ಯೋಗೀಶ್ವರ್ ಅವರು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಅವರು ಕಾಂಗ್ರೆಸ್ ಗೆ ಸೇರ್ಪಡೆ ಆಗುತ್ತಾರೆ ಎಂಬ ವದಂತಿಗಳು ಹಬ್ಬಿದೆ. ಆದರೆ ಸಿಪಿ ಯೋಗೀಶ್ವರ್ ಮಾತ್ರ ಯಾವುದನ್ನು ಇನ್ನು ಅಧಿಕೃತಗೊಳಿಸಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುತ್ತಾರಾ..? ಕಾಂಗ್ರೆಸ್ ಸೇರುತ್ತಾರಾ..? ಕಾಂಗ್ರೆಸ್ ಸೇರಿದರು ಅಲ್ಲಿ ಅವಕಾಶ ಸಿಗುತ್ತಾ..? ಎಂಬೆಲ್ಲಾ ವಿಚಾರಗಳಿಗೂ ಶೀಘ್ರದಲ್ಲಿಯೇ ಉತ್ತರ ಸಿಗಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment