Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಸತ್ ಭವನದ ಮೇಲೆ ಅದೇ ಆರೋಪಿಗಳಿಂದ ಮರು ದಾಳಿ : ಕಾರಣವೇನು ಗೊತ್ತಾ..?

Facebook
Twitter
Telegram
WhatsApp

ಕಳೆದ ಎರಡು ದಿನದ ಹಿಂದೆ ಸಂಸತ್ ಭವನದ ಒಳಗೆ ಇಬ್ಬರು ನುಗ್ಗಿ ದಾಂಧಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಹಲವರನ್ನು ಅರೆಸ್ಟ್ ಮಾಡಲಾಗಿದೆ. ಸಂಸದ ಪ್ರತಾಪ್ ಸಿಂಹ ಅವರು ನೀಡಿದ ಪಾಸ್ ನಿಂದಾಗಿ ಆ ಇಬ್ಬರು ಒಳಗೆ ಪ್ರವೇಶ ಪಡೆಯುವುದಕ್ಕೆ ಸುಲಭವಾಗಿತ್ತು. ಇದೀಗ ಭದ್ರತಾ ಲೋಪದ ಬಗ್ಗೆಯೂ ಹೆಚ್ಚಿನ ಗಮನ ಹರಿಸಲಾಗುತ್ತಿದೆ.

ಸಂಸತ್ ಒಳಗೆ ನುಗ್ಗಿದ ಅದೇ ಆರೋಪಿಗಳು ಇಂದು ಕೂಡ ಸಂಸತ್ ಭವನದ ಒಳಗೆ ನುಗ್ಗಲಿದ್ದಾರೆ. ಅದಕ್ಕೆ ಕಾರಣ ಬೇರೆಯದ್ದೇ ಇದೆ‌. ಭದ್ರತಾ ಲೋಪದ ಬಗ್ಗೆ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆ ಅಂದಿನ ಘಟನೆಯನ್ನು ಮರು ಸೃಷ್ಠಿ ಮಾಡಲಾಗುತ್ತಿದೆ.

 

ಈ ಬಾರಿ ಪೊಲೀಸರ ಸಮ್ಮುಖದಲ್ಲಿ ಆರೋಪಿಗಳಾದ ಸಾಗರ್ ಹಾಗೂ ಮನೋರಂಜನ್ ವೀಕ್ಷಕರ ಗ್ಯಾಲರಿಗೆ ನುಗ್ಗಲಿದ್ದಾರೆ. ಈ ಮೂಲಕ ಅಲ್ಲಿನ ಭದ್ರತಾ ಲೋಪ ಹಾಗೂ ಕೆಲ ದೃಶ್ಯಗಳನ್ನು ಮರು ಪರಿಶೀಲನೆ ನಡೆಸುವ ಮೂಲಕ ತನಿಖೆಯನ್ನು ನಡೆಸಲಿದ್ದಾರೆ.

ಇಂದು ಕಲಾಪ ನಡೆಯುತ್ತಿರುವ ಕಾರಣ ಶನಿವಾರ ಅಥವಾ ಭಾನುವಾರ ಆರೋಪಿಗಳನ್ನು ಕರೆದೊಯ್ದು ಭದ್ರತಾ ಲೋಪದ ಪರೀಕ್ಷೆ ನಡೆಸಲಿದ್ದಾರೆ. ಯಾವುದೇ ಅಪರಾಧಗಳ ಪ್ರಕರಣಗಳು ನಡೆದಾಗ ಅದನ್ನು ಮರುಸೃಷ್ಠಿ ಮಾಡಲಾಗುತ್ತದೆ. ಈ ಮೂಲಕ ಅಲ್ಲಿ ಆಗಿರುವ ಲೋಪದೋಷಗಳು ತಿಳಿಯುತ್ತವೆ. ಅದರಂತೆ ಇಲ್ಲಿಯೂ ಮರುಸೃಷ್ಠಿ ಮಾಡಲಾಗುತ್ತಿದೆ. ಇದು ಪೊಲೀಸರಿಗೆ ಸಾಜಷ್ಟು ಸಹಾಯವಾಗಲಿದೆ. ಆರೋಪಿಗಳಿಗೆ ಸಂಬಂಧ ಪಟ್ಟ ಕಡೆಯಲ್ಲೆಲ್ಲಾ ಈಗಾಗಲೇ ತನಿಖೆ ನಡೆಸಲಾಗುತ್ತಿದೆ. ಮರುಸೃಷ್ಠಿ ಮಾಡಿದ ಬಳಿಕ ಗುರುಗ್ರಾಮಕ್ಕೂ ಕರೆದುಕೊಂಡು ಹೋಗಿ ತನಿಖೆ ನಡೆಸುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!