Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂಸತ್ ಭವನದ ಮೇಲೆ ಅದೇ ಆರೋಪಿಗಳಿಂದ ಮರು ದಾಳಿ : ಕಾರಣವೇನು ಗೊತ್ತಾ..?

---Advertisement---

ಕಳೆದ ಎರಡು ದಿನದ ಹಿಂದೆ ಸಂಸತ್ ಭವನದ ಒಳಗೆ ಇಬ್ಬರು ನುಗ್ಗಿ ದಾಂಧಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಹಲವರನ್ನು ಅರೆಸ್ಟ್ ಮಾಡಲಾಗಿದೆ. ಸಂಸದ ಪ್ರತಾಪ್ ಸಿಂಹ ಅವರು ನೀಡಿದ ಪಾಸ್ ನಿಂದಾಗಿ ಆ ಇಬ್ಬರು ಒಳಗೆ ಪ್ರವೇಶ ಪಡೆಯುವುದಕ್ಕೆ ಸುಲಭವಾಗಿತ್ತು. ಇದೀಗ ಭದ್ರತಾ ಲೋಪದ ಬಗ್ಗೆಯೂ ಹೆಚ್ಚಿನ ಗಮನ ಹರಿಸಲಾಗುತ್ತಿದೆ.

ಸಂಸತ್ ಒಳಗೆ ನುಗ್ಗಿದ ಅದೇ ಆರೋಪಿಗಳು ಇಂದು ಕೂಡ ಸಂಸತ್ ಭವನದ ಒಳಗೆ ನುಗ್ಗಲಿದ್ದಾರೆ. ಅದಕ್ಕೆ ಕಾರಣ ಬೇರೆಯದ್ದೇ ಇದೆ‌. ಭದ್ರತಾ ಲೋಪದ ಬಗ್ಗೆ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆ ಅಂದಿನ ಘಟನೆಯನ್ನು ಮರು ಸೃಷ್ಠಿ ಮಾಡಲಾಗುತ್ತಿದೆ.

 

ಈ ಬಾರಿ ಪೊಲೀಸರ ಸಮ್ಮುಖದಲ್ಲಿ ಆರೋಪಿಗಳಾದ ಸಾಗರ್ ಹಾಗೂ ಮನೋರಂಜನ್ ವೀಕ್ಷಕರ ಗ್ಯಾಲರಿಗೆ ನುಗ್ಗಲಿದ್ದಾರೆ. ಈ ಮೂಲಕ ಅಲ್ಲಿನ ಭದ್ರತಾ ಲೋಪ ಹಾಗೂ ಕೆಲ ದೃಶ್ಯಗಳನ್ನು ಮರು ಪರಿಶೀಲನೆ ನಡೆಸುವ ಮೂಲಕ ತನಿಖೆಯನ್ನು ನಡೆಸಲಿದ್ದಾರೆ.

ಇಂದು ಕಲಾಪ ನಡೆಯುತ್ತಿರುವ ಕಾರಣ ಶನಿವಾರ ಅಥವಾ ಭಾನುವಾರ ಆರೋಪಿಗಳನ್ನು ಕರೆದೊಯ್ದು ಭದ್ರತಾ ಲೋಪದ ಪರೀಕ್ಷೆ ನಡೆಸಲಿದ್ದಾರೆ. ಯಾವುದೇ ಅಪರಾಧಗಳ ಪ್ರಕರಣಗಳು ನಡೆದಾಗ ಅದನ್ನು ಮರುಸೃಷ್ಠಿ ಮಾಡಲಾಗುತ್ತದೆ. ಈ ಮೂಲಕ ಅಲ್ಲಿ ಆಗಿರುವ ಲೋಪದೋಷಗಳು ತಿಳಿಯುತ್ತವೆ. ಅದರಂತೆ ಇಲ್ಲಿಯೂ ಮರುಸೃಷ್ಠಿ ಮಾಡಲಾಗುತ್ತಿದೆ. ಇದು ಪೊಲೀಸರಿಗೆ ಸಾಜಷ್ಟು ಸಹಾಯವಾಗಲಿದೆ. ಆರೋಪಿಗಳಿಗೆ ಸಂಬಂಧ ಪಟ್ಟ ಕಡೆಯಲ್ಲೆಲ್ಲಾ ಈಗಾಗಲೇ ತನಿಖೆ ನಡೆಸಲಾಗುತ್ತಿದೆ. ಮರುಸೃಷ್ಠಿ ಮಾಡಿದ ಬಳಿಕ ಗುರುಗ್ರಾಮಕ್ಕೂ ಕರೆದುಕೊಂಡು ಹೋಗಿ ತನಿಖೆ ನಡೆಸುತ್ತಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment