Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್.ಆರ್.ಎಸ್. ಹೆರಿಟೇಜ್ ಶಾಲೆಯ ಮಕುಟಕ್ಕೆ ಮತ್ತೊಂದು ಗರಿ ; ಒಂದನೇ ತರಗತಿ ವಿದ್ವತ್ ಆರಾಧ್ಯಗೆ ಮತ್ತೊಂದು ಪ್ರಶಸ್ತಿ

Facebook
Twitter
Telegram
WhatsApp

ಚಿತ್ರದುರ್ಗ, (ಮೇ. 27) :  ನಗರದ ಪ್ರತಿಷ್ಟಿತ ಶಾಲೆಯಾದ ಎಸ್.ಆರ್.ಎಸ್. ಹೆರಿಟೇಜ್ ಶಾಲೆಯ ಮುಕುಟಕ್ಕೆ ಮತ್ತೊಂದು ಹೆಮ್ಮೆಯ ಗರಿ.

ಶಾಲೆಯ ಒಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ವತ್ ಆರಾಧ್ಯ ಹೆಸರಿಗೆ ತಕ್ಕಂತೆ ವಿದ್ವತ್ ಸಂಪನ್ನ. ಕಳೆದ ವರ್ಷ ತನ್ನ ಬುದ್ಧಿ ಕೌಶಲ್ಯದಿಂದ ಈ ಮಗು ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರು ದಾಖಲಿಸಿದ್ದು ಇನ್ನೂ ಹಸಿರಾಗಿರುವಾಗಲೇ, ಈ ದೈತ್ಯ ಪ್ರತಿಭೆ ಮೇ.22 ರಂದು ಚೆನ್ನೈನಲ್ಲಿ ನಡೆದ ಕಲಾಮ್ಸ್ ವರ್ಲ್ಡ್ ರೆಕಾರ್ಡ್ ಕಾರ್ಯಕ್ರಮದಲ್ಲಿ Extraordinary Grasping Power genius kid ಪ್ರಶಸ್ತಿಗೆ ಭಾಜನನಾಗಿದ್ದಾನೆ.

ಈ ಮಗು ರಾಷ್ಟ್ರದ ಪ್ರಧಾನಮಂತ್ರಿಗಳು, ರಾಷ್ಟ್ರಪತಿಗಳ ಹೆಸರುಗಳು, ಕರ್ನಾಟಕದ ಮುಖ್ಯಮಂತ್ರಿಗಳು, ರಾಜ್ಯಪಾಲರ ಹೆಸರುಗಳನ್ನು ಹೇಳುವನು, ರಾಮಾಯಣ ಮತ್ತು ಮಹಾಭಾರತಕ್ಕೆ ಸಂಬಂಧಿಸಿದ 150 ಪ್ರಶ್ನೆಗಳಿಗೆ ಉತ್ತರಿಸುವನು.

20 ಶ್ಲೋಕಗಳು, 60 ಹಿಂದೂ ಸಂವತ್ಸರಗಳನ್ನು ಹಾಗೂ ದೇಶದ ಪ್ರಮುಖ ಜಲಪಾತಗಳು, ಅಣೆಕಟ್ಟುಗಳು, ವಿಮಾನ ನಿಲ್ದಾಣಗಳ ಹೆಸರಗಳನ್ನು ಹೇಳುವುದು, 195 ದೇಶಗಳ ಹೆಸರುಗಳು, 2 ರಿಂದ 30 ವರೆಗಿನ ಗುಣಾಕಾರ ಕೋಷ್ಟಕ, ವಿಜ್ಞಾನಿಗಳು ಮತ್ತು ಅವರ ಸಂಶೋಧನೆಗಳು, ಭಾರತದ ರಾಜ್ಯಗಳು ಮತ್ತು ಕರ್ನಾಟಕದ ಜಿಲ್ಲೆಗಳನ್ನು ಹೇಳುವ ಮೂಲಕ ಈ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದ್ದಾನೆ.

ಈ ವಿಷಯವನ್ನು ತಮ್ಮಲ್ಲಿ ಹಂಚಿಕೊಳ್ಳುವುದರ ಮೂಲಕ ಎಸ್.ಆರ್.ಎಸ್. ಶಾಲಾ ಆಡಳಿತ ಮಂಡಳಿ, ಬಿ.ಎ.ಲಿಂಗಾರೆಡ್ಡಿ ಅಧ್ಯಕ್ಷರು, ಸುಜಾತಾ ಲಿಂಗಾರೆಡ್ಡಿ ಕಾರ್ಯದರ್ಶಿಗಳು, ಬಿ.ಎಲ್ ಅಮೋಘ್ ಉಪಾಧ್ಯಕ್ಷರು, ಡಾ|| ಟಿ.ಎಸ್. ರವಿ ಆಡಳಿತಾಧಿಕಾರಿಗಳು, ಪ್ರಭಾಕರ್ ಎಮ್. ಎಸ್. ಪ್ರಾಂಶುಪಾಲರು , ಶಾಲೆಯ ಶಿಕ್ಷಕ ವೃಂದ ಹಾಗು ಮಗುವಿನ ಪೋಷಕರು ಹರ್ಷ ವ್ಯಕ್ತಪಡಿಸುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!