Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸುಜಯೇಂದ್ರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು: ಆರೋಪವೇನು ?

---Advertisement---

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಆಪ್ತನೆಂದು ಹೇಳಿಕೊಂಡು ವಂಚನೆ ಎಸಗಿದ್ಷ  ಆರೋಪವಿರುವ ಸುಜಯೇಂದ್ರ  ವಿರುದ್ಧ ಮತ್ತೊಂದು ಎಫ್‌ಐಆರ್  ದಾಖಲಾಗಿದೆ. ರಾಜ್ಯಪಾಲರ  ಸಹಿಯನ್ನು ನಕಲು ಮಾಡಿ ಅನಧಿಕೃತವಾಗಿ ಪತ್ರ ಬರೆದ ಆರೋಪ ಕೇಳಿಬರುತ್ತಿದೆ.

ರಾಜ್ಯಪಾಲರ ಸಹಿಯನ್ನು ನಕಲಿ ಮಾಡಿ, ವಿಐಟಿಯು ಕುಲಪತಿಗಳಿಗೆ ಪತ್ರ ರಚಿಸಿ, ವಿದ್ಯಾರ್ಥಿಯೊಬ್ಬರಿಗೆ ಸೀಟ್ ಮಂಜೂರು ಮಾಡುವಂತೆ ಸೂಚನೆ ನೀಡಲಾಗಿದೆ, 2025ರಲ್ಲಿ ಈ ನಕಲಿ ಪತ್ರ ಬರೆಯಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.

ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರದೀಪ್ ಅವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಲೋಕಭವನದ ಲೆಟರ್‌ಹೆಡ್ ದುರುಪಯೋಗ ಮಾಡಿಕೊಂಡು ನಕಲಿ ಸಹಿ ಬಳಸಿರುವುದರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ. ಪ್ರಕರಣವನ್ನು ಬಳಿಕ ವಿಧಾನಸೌಧ ಠಾಣೆಯಿಂದ ವಿಜಯನಗರ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now