Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮತ್ತೊಂದು ಗೋದ್ರಾ ಹೇಳಿಕೆ : ಸಿಸಿಬಿ ಪೊಲೀಸರ ವಿಚಾರಣೆಗೆ ಬಿಕೆ ಹರಿಪ್ರಸಾದ್ ಆಕ್ರೋಶ

---Advertisement---

 

ಬೆಂಗಳೂರು: ಅಯೋಧ್ಯೆಗೆ ಬಹಳ ಜನ ತೆರಳಲಿದ್ದಾರೆ. ಈ ವೇಳೆ ಹೆಚ್ಚಿನ ರಕ್ಷಣೆ ಬೇಕಾಗುತ್ತದೆ‌. ಮತ್ತೊಂದು ಗೋದ್ರಾ ಘಟನೆ ನಡೆಯಬಹುದು. ರಕ್ಷಣೆ ನೀಡಿ ಎಂಬ ಹೇಳಿಕೆಯನ್ನು ಬಿಕೆ ಹರಿಪ್ರಸಾದ್ ನೀಡಿದ್ದರು. ಈ ಹೇಳಿಕೆಗೆ ಬಿಜೆಪಿ ನಾಯಕರಿಂದ ವಿರೋಧ ವ್ಯಕ್ತವಾಗಿತ್ತು. ಇದೀಗ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಕೆಕೆ ಗೆಸ್ಟ್ ಹೌಸ್ ನಲ್ಲಿ ಸಿಸಿಬಿ ಪೊಲೀಸರು, ಬಿಕೆ ಹರಿಪ್ರಸಾದ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಬಿಕೆ ಹರಿಪ್ರಸಾದ್ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯದಲ್ಲಿ ಇರುವುದು ಕಾಂಗ್ರೆಸ್ ಸರ್ಕಾರವೋ ಅಥವಾ ಆರ್ ಎಸ್ ಎಸ್ ಸರ್ಕಾರವೋ ಎಂದು ಕಿಡಿಕಾರಿದ್ದಾರೆ.

ಇದೆ ವೇಳೆ ಪೊಲೀಸರಿಗೂ ಸೂಚನೆ ನೀಡಿದ್ದಾರೆ. ನನಗೆ ಯಾವುದೇ ವಿಐಪಿ ಟ್ರೀಟ್‌ಮೆಂಟ್ ಬೇಡ. ಬೇಕಾದರೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿ. ಬಹಿರಂಗವಾಗಿಯೇ ಮಂಪರು ಪರೀಕ್ಷೆ ನಡೆಸಿ. ನನ್ನ ಜೀವನದಲ್ಲಿ ನನ್ನ ವಿರುದ್ಧ ಯಾವುದೇ ಕೇಸ್ ಇಲ್ಲ. ಕಾಂಗ್ರೆಸ್ ಸರ್ಕಾರವೇ ವಿಚಾರಣೆ ನಡೆಸಿರುವುದು ಆಶ್ಚರ್ಯ ತಂದಿದೆ ಎಂದು ಪೊಲೀಸರಿಗೆ ಹೇಳಿದ್ದಾರೆ.

ವಿಚಾರಣೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಗೋಧ್ರಾ ಹೇಳಿಕೆ ಬಗ್ಗೆ ನಾನು ಬದ್ಧನಾಗಿದ್ದೇನೆ. ಗೋಧ್ರಾ ಘಟನೆಯಂತೆ ಮತ್ತೊಂದು ಘಟನೆ ನಡೆಯುತ್ತದೆ ಎಂದು ನನಗೆ ಮಾಹಿತಿ ಬಂದಿತ್ತು. ಅದನ್ನು ಬಹಿರಂಗವಾಗಿ ತಿಳಿಸಿದ್ದೇನೆ. ಮುಸ್ಲಿಂ ಮಸೀದಿ ಒಡೆದು ಹಾಕುತ್ತೇನೆ ಎಂದಿದ್ದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಮಹಿಳೆಯ ಬಗ್ಗೆ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ. ಆದರೆ ನನ್ನ ವಿರುದ್ಧ ವಿಚಾರಣೆಗೆ ನಮ್ಮ ಸರ್ಕಾರವೇ ಪೊಲೀಸರನ್ನು ಕಳುಹಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...