Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮತ್ತೊಂದು ಚಿನ್ನದ ಕೇಸ್ ದಾಖಲು : ಡಿಕೆ ಸುರೇಶ್ ಧ್ವನಿಯಲ್ಲಿ ಮಾತಾಡಿದರಾ ನಟ ಧರ್ಮ.. 9 ಕೋಟಿ ವಂಚಿಸಿದ ಐಶ್ವರ್ಯಾ..!

---Advertisement---

ಬೆಂಗಳೂರು: ಗೋಲ್ಡ್ ರೇಟ್ ದಿನೇ ದಿನೇ ಜಾಸ್ತಿ ಆಗ್ತಾ ಇರೋದಕ್ಕೋ ಏನೋ ಚಿನ್ನದ ಮೇಲೆಯೇ ವಂಚನೆ ಕೇಸುಗಳು ದಾಖಲಾಗುತ್ತಿವೆ. ಇತ್ತೀಚೆಗೆ ವರ್ತೂರು ಪ್ರಕಾಶ್ ಅವರ ಆಪ್ತೆಯಿಂದ ಕೋಟಿ ಕೋಟಿ ಚಿನ್ನದ ವ್ಯಾಪಾರಿಗೆ ವಂಚನೆ ಕೇಸ್ ಬೆನ್ನಲ್ಲೇ ಇದೀಗ ಡಿಕೆ ಸುರೇಶ್ ತಂಗಿ ಅಂತ ಹೇಳಿಕೊಂಡು ಕೋಟಿ ಕೋಟಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ‌.

ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿ ವಾರಾಹಿ ಎಂಬ ಚಿನ್ನದ ಮಳಿಗೆ ಇದೆ. ವನಿತಾ ಐತಾಳ್ ಎಂಬುವವರು ಇದರ ಮಾಲೀಕರು. ಈ ಜ್ಯುವೆಲ್ಲರಿ ಶಾಪ್ ಗೆ ಐಶ್ಚರ್ಯ ಗೌಡ ಅಲಿಯಾಸ್ ನವ್ಯಶ್ರೀ ಎಂಬುವವರು 9 ಕೋಟಿ 82 ಲಕ್ಷ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಐಶ್ಚರ್ಯಾ, ತಾನು ಡಿಕೆ ಸುರೇಶ್ ತಂಗಿ ಎಂದು ನಂಬಿಸಿದ್ದಾರೆ.

ಈ ಸಂಬಂಧ ಐಶ್ವರ್ಯಾ ಹಾಗೂ ನಟ ಧರ್ಮ ಅವರ ವಿರುದ್ಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಕಳೆದ 2023ರಿಂದ 2024ರ ಏಪ್ರಿಲ್ ವರೆಗೂ ಐಶ್ಚರ್ಯಾ ಹಂತ ಹಂತವಾಗಿ ಚಿನ್ನವನ್ನು ಪಡೆದಿದ್ದಾರೆ. ಹಣ ಕೇಳಿದರೆ ಡಿಕೆ ಸುರೇಶ್ ಅವರಿಂದ ಕರೆ ಮಾಡಿಸಿ ಕಾಲಾವಕಾಶ ಕೋರಿದ್ದಾರೆ. ಒಂಭತ್ತು ಕೋಟಿ ಮೌಲ್ಯದ ಚಿನ್ನ ಖರೀದಿ ಮಾಡಿ ವಂಚನೆ ಮಾಡಲಾಗಿದೆ ಎಂದು ಎಫ್ಐಆರ್ ನಲ್ಲಿ ದಾಖಲಿಸಲಾಗಿದೆ.

ಹಾಗೇ ಡಿಕೆ ಸುರೇಶ್ ಅವರ ಧ್ವನಿಯಲ್ಲಿ ನಟ ಧರ್ಮ ಅವರಿಂದ ಕರೆ ಮಾಡಿಸಲಾಗಿದೆ. ಧರ್ಮ ಎನ್ನುವವರು ಕೊಲೆ ಮಾಡಿಸೋದಾಗಿ ಬೆದರಿಕೆ ಹಾಕಿದ್ದಾರೆಂದು ಎಫ್ಐಆರ್ ನಲ್ಲಿ ದಾಖಲಿಸಿದ್ದು, ಐಶ್ವರ್ಯಾ ಗೌಡ, ಪತಿ ಹರೀಶ್ ಕೆ.ಎನ್ ಹಾಗೂ ಸಿನಿಮಾ ನಟ ಧರ್ಮ ವಿರುದ್ಧ ಎಫ್ಐಆರ್ ದಾಖಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...