ಚಿಕ್ಕೋಡಿ : ಕಳೆದ ಕೆಲವು ದಿನಗಳಿಂದ ಅದ್ಯಾಕೋ ಏನೋ ಸಿದ್ದರಾಮಯ್ಯ ಸರ್ಕಾರದಲ್ಲಿ ಇರುವವರೇ ತಿರುಗಿ ಬಿದ್ದಿದ್ದಾರೆ. ಮೊನ್ನೆಯಷ್ಟೇ ಪಾಟೀಲ್ ಅವರು ವಸತಿ ಯೋಜನೆಯ ಅವ್ಯವಹಾರದ ಬಗ್ಗೆ ಮಾತಾಡಿದ್ರು, ಈಗ ಇನ್ನೊಬ್ಬ ಶಾಸಕರು ಮಾತನಾಡಿದ್ದಾರೆ. ಅದರಲ್ಲೂ ರಾಜೀನಾಮೆ ನೀಡುವ ಬಗ್ಗೆಯೂ ಎಚ್ಚರಿಸಿದ್ದಾರೆ.
ಕಾಗವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಇದೀಗ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಎರಡು ವರ್ಷವಾದರೂ ಕಾಮಗಾರಿ ಸಂಪೂರ್ಣವಾಗಿಲ್ಲ. ವಿಳಂಬವಾಗುತ್ತಲೆ ಇದೆ. ಹೀಗಾಗಿ ತಮ್ಮದೇ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಸರ್ಕಾರದಿಂದ ಅನುದಾನ ಬಂದ್ರು ವರ್ಕ್ ಆರ್ಡರ್ ಬಂದಿಲ್ಲ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ. ನನಗೆ ಅಸಮಾಧಾನ ಆಗಿದೆ. ನನ್ನ ಮನಸ್ಸಿಗೆ ನೋವಾಗಿದೆ. ನಾನು ರಾಜೀನಾಮೆ ಕೊಡ್ತೀನಿ. ನನ್ನ ಮನಾ್ಸಿಗೆ ನೋವಾಗಿದೆ. ನಾನು ರಾಜೀನಾಮೆ ಕೊಡ್ತೀನಿ. ಎರಡು ದಿನದಲ್ಲಿ ಸಿಎಂಗೆ ರಾಜೀನಾಮೆ ಕೊಟ್ಟರು ಆಶ್ಚರ್ಯವಿಲ್ಲ. ಅಂತ ಚಿಕ್ಕೋಡಿಯಲ್ಲಿ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ನಮ್ಮ ಸರ್ಕಾರದಲ್ಲಿ ಯಾವುದೇ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಆಡಳಿತ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ.
ಶಾಸಕ ರಾಜು ಕಾಗೆ ಅಸಮಾಧಾನ ವಿಚಾರವಾಗಿ ಬೆಳಗಾವಿಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಪ್ರತಿಕ್ರಿಯಿಸಿದ್ದು, ರಾಜೀನಾಮೆ ಕೊಡಬೇಕು ಅಂತಾ ಹೇಳಿದ್ದಾರೆ. ನೀವು ರಾಜೀನಾಮೆ ಕೊಡುವುದರಿಂದ ಈ ಸಮಸ್ಯೆ ಸರಿಯಾಗಲ್ಲ. ನಿಮ್ಮ ಮುಖ್ಯಮಂತ್ರಿ ಅವರನ್ನ ರಾಜೀನಾಮೆ ಕೊಡಿಸಿ. ಜನರ ಬಳಿ ಹೋಗೋಣ ಏನು ತೀರ್ಮಾನ ಆಗುತ್ತೆ ನೋಡೋಣ. ಬಿಜೆಪಿಗೆ ಯಾರು ಬಂದರೂ ಸ್ವಾಗತ ಮಾಡುತ್ತೇವೆ ಎಂದಿದ್ದಾರೆ.






