Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಐಸಿಸಿ ಅಧ್ಯಕ್ಷ ಗಾದಿಗೆ ಮತ್ತೊಂದು ಹೆಸರು : ಮಲ್ಲಿಕಾರ್ಜುನ್ ಖರ್ಗೆ ಫೈನಲ್ ಆಗುತ್ತಾ..?

Facebook
Twitter
Telegram
WhatsApp

 

ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲು ಬಹಳ ಸಮಯವೇನು ಇಲ್ಲ. ಆದರೆ ಈ ಮಧ್ಯೆ ಅಭ್ಯರ್ಥಿಗಳ ಪಟ್ಟಿ ಕೂಡ ಬೆಳೆಯುತ್ತಿದೆ. ಯಾರ ಪಾಲಾಗಲಿದೆ ಅಧ್ಯಕ್ಷ ಸ್ಥಾನ ಎಂಬ ಕುತೂಹಲ ಸಹಜವಾಗಿಯೇ ಹುಟ್ಟಿಕೊಂಡಿದೆ. ಶಶಿ ತರೂರ್ ಮತ್ತು ಗೆಹ್ಲೋಟ್ ನಡುವೆ ಇದ್ದ ಸ್ಪರ್ಧೆ ಇದೀಗ ಮಲ್ಲಿಕಾರ್ಜುನ್ ಖರ್ಗೆ, ದಿಗ್ವಿಜಯ್ ಸಿಂಗ್ ಕೂಡ ಸೇರಿ ದೊಡ್ಡದಾಗುತ್ತಾ ಹೋಗುತ್ತಿದೆ. ಆದರೆ ಮೂಲಗಳ ಪ್ರಕಾರ ಗೆಹ್ಲೋಟ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದ್ದು, ಮಲ್ಲಿಕಾರ್ಜುನ್ ಖರ್ಗೆ ಕಡೆಗೆ ಬಹುತೇಕ ಒಲವಿದೆ ಎನ್ನಲಾಗುತ್ತಿದೆ.

ಅಶೋಕ್ ಗೆಹ್ಲೋಟ್ ಸ್ಪರ್ಧೆಯನ್ನು ರಾಜಸ್ಥಾನದಲ್ಲಿಯೇ ವಿರೋಧಿಸಲಾಗಿತ್ತು. ಅವರ ಸ್ಪರ್ಧೆ ವಿರೋಧಿಸಿ ಸುಮಾರು 90ಕ್ಕೂ ಹೆಚ್ಚು ಶಾಸಕರು ಬಂಡಾಯವೆದ್ದಿದ್ದರು. ಇದರ ನಡುವೆ ಇನ್ನೇನು ಸಿಎಂ ಸ್ಥಾನಕ್ಕೆ ಗೆಹ್ಲೋಟ್ ರಾಜೀನಾಮೆ ಸಲ್ಲಿಸುತ್ತಾರೆ, ಅಧ್ಯಕ್ಷೀಯ ಚುನವಾಣೆಯಲ್ಲಿ ಭಾಗವಹಿಸುತ್ತಾರೆ ಎನ್ನಲಾಗಿತ್ತು. ಆದರೆ ಇದೀಗ ಗೆಹ್ಲೋಟ್ ಉಲ್ಟಾ ಹೊಡೆದಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲ್ಲ ಎಂದಿದ್ದಾರೆ.

ಗೆಹ್ಲೋಟ್ ಹಿಂದೆ ಸರಿದ ಕಾರಣ ಇನ್ನಿಬ್ಬರ ಹೆಸರನ್ನು ಕಾಂಗ್ರೆಸ್ ಸೂಚಿಸಲೇಬೇಕಾಗಿತ್ತು. ಅದರಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ದಿಗ್ವಿಜಯ್ ಸಿಂಗ್ ಹೆಸರನ್ನು ಸೂಚಿಸಿದೆ. ಅಧ್ಯಕ್ಷ ಚುನಾವಣೆ ವಿಚಾರದಲ್ಲಿ ರಾಜಕೀಯ ಡ್ರಾಮಾವೇ ನಡೆದಿದೆ. ಒಂದು ಕಡೆ ಸೋನಿಯಾ ಗಾಂಧಿಗೆ ಗೆಹ್ಲೋಟ್ ಕಡೆ ಒಲವಿದ್ದರೆ ಅತ್ತ ರಾಹುಲ್ ಗಾಂಧಿಗೆ ಸಚಿನ್ ಪೈಲೆಟ್ ಕಡೆ ಒಲವಿತ್ತು. ಗೆಹ್ಲೋಟ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಆ ಸ್ಥಾನದಲ್ಲಿ ಪೈಲೆಟ್ ಕೂರಿಸುವ ಫ್ಲ್ಯಾನ್ ಆಗಿತ್ತು. ಆದರೆ ಗೆಹ್ಲೋಟ್ ಗೆ ಪೈಲೆಟ್ ಸಿಎಂ ಆಗುವುದು ಇಷ್ಟವಿರಲಿಲ್ಲ. ಹೀಗಾಗಿ ಸಿಎಂ ಆಗಿದ್ದುಕೊಂಡೆ ಅಧ್ಯಕ್ಷರಾಗುವ ಯೋಜನೆಯಲ್ಲಿದ್ದರು. ಆದರೆ ಕಾಂಗ್ರೆಸ್ ನ ಒಬ್ಬರಿಗೆ ಒಂದೇ ಹುದ್ದೆ ಇದಕ್ಕೆ ಅಡ್ಡಿಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

ಪಾಕ್ ಜಿಂದಾಬಾದ್ ಎಂದವನಿಗೆ ನಾವೇ ಗುಂಡಿಟ್ಟು ಸಾಯಿಸುತ್ತೇವೆ : ಸಚಿವ ಜಮೀರ್

ರಾಯಚೂರು: ಪಾಕಿಸ್ತಾನ ಘೋಷಣೆ ಕೂಗುವವರನ್ನು ಗುಂಡಿಟ್ಟು ಕೊಲ್ಲಬೇಕು. ಟಿಶ್ಕ್ಯಾಂ ಟಿಶ್ಕ್ಯಾಂ ಟಿಶ್ಕ್ಯಾಂ ಅಂತ ಸ್ಥಳದಲ್ಲೇ ಗುಂಡಿಟ್ಟು ಕೊಲ್ಲಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ಭರ್ಜರಿ ಪ್ರಚಾರ

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

error: Content is protected !!