Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲೋಡ್ ಶೆಡ್ಡಿಂಗ್ ನಿಂದ ಬಳಲುತ್ತಿರುವ ರೈತರಿಗೆ ಸರ್ಕಾರದಿಂದ ಮತ್ತೊಂದು‌ ಶಾಕ್..!

Facebook
Twitter
Telegram
WhatsApp

ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಮಳೆಯ ಅಭಾವದಿಂದ ರೈತರು ಸಾಕಷ್ಟು ಸಮಸ್ಯೆಯನ್ನ ಎದುರಿಸುತ್ತಿದ್ದಾರೆ. ಮಳೆ ಇಲ್ಲದಂತೆ ಬೆಳೆ ನೆಲ ಕಚ್ಚುತ್ತಿದೆ. ಹೀಗಿರುವಾಗ ವಿದ್ಯುತ್ ಅಭಾವ ಬೇರೆ ಸೃಷ್ಟಿಯಾಗಿದೆ. ಇದರಿಂದಾಗಿ ರೈತರು ಮತ್ತಷ್ಟು ಕಂಗಲಾಗಿದ್ದಾರೆ. ಇದರ ಮೇಲೆ ಮತ್ತೊಂದು ಶಾಕ್ ನೀಡಿದೆ ಸರ್ಕಾರ.

ಈಗಾಗಲೇ ಕಡಿತಗೊಳ್ಳುತ್ತಿರುವ ವಿದ್ಯುತ್ ನಿಂದಾಗಿಯೇ ಸಮಸ್ಯೆ ಹಲವು ಇದೆ. ಹೀಗಿರುವಾಗ ವಾರದಲ್ಲಿ ಒಂದು ದಿನ ಪೂರ್ತಿಯಾಗಿ ವಿದ್ಯುತ್ ಕಡಿತ ಮಾಡುವ ಚರ್ಚೆ ನಡೆಯುತ್ತಿದೆ ಎನ್ನಲಾಗುತ್ತಿದೆ. ಈ ಸಂಬಂಧ ಮಾತನಾಡಿರುವ ಶಾಸಕ ಲಕ್ಷ್ಮಣ ಸವದಿ, ಒಂದು ದಿನ ಪೂರ್ತಿ ವಿದ್ಯುತ್ ಕಡಿತಗೊಳಿಸುವ ಪ್ಲ್ಯಾನ್ ನಡೆದಿದೆ. ಇದಕ್ಕೆ ರೈತರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

ಬೇಸಿಗೆ ಕಾಲದಲ್ಲಿ ನೀರು ಉಳಿವಿಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಮಳೆ ಬೆಳೆ ಸರಿಯಾಗಿ ಇದ್ದರೆ ರೈತ ಇದಕ್ಕೆಲ್ಲ ಚಿಂತೆ ಮಾಡುವಂತೆ ಇರಲಿಲ್ಲ. ಈಗ ಮಳೆಯೂ ಇಲ್ಲ, ಬೆಳೆಯೂ ಇಲ್ಲ. ಮುಂದಿನ ದಿನಗಳಲ್ಲಿ ಹೇಗಪ್ಪ ಎಂಬ ಚಿಂತೆಯಾಗಿದೆ. ಇತ್ತ ಸರ್ಕಾರ ಕೂಡ ಪರಿಹಾರದ ಬಗ್ಗೆ ಸರಿಯಾದ ನಿರ್ಧಾರ ಮಾಡಿಲ್ಲ. ಹೀಗಿರುವಾಗ ಈಗ ಲೋಡ್ ಶೆಡ್ಡಿಂಗ್ ಎಂದರೆ ರೈತನ ಬದುಕು ಮತ್ತಷ್ಟು ದುಸ್ತರವಾಗದೆ ಇರುತ್ತದೆಯೇ..? ಲಕ್ಷ್ಮಣ ಸವದಿ ಹೇಳಿದ ಮಾತಿಗೆ, ಕೃಷ್ಣಾ ನದಿ ದಂಡೆಯ ರೈತರು ಅಕ್ಷರಶಃ ಆತಂಕಕ್ಕೀಡಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

error: Content is protected !!