Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನಾಲ್ಕು ವರ್ಷದ ಮಗನನ್ನು ಕೊಂದ ಬೆಂಗಳೂರು ಸ್ಟಾರ್ಟಪ್ ಸಿಇಒ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್

---Advertisement---

ಸುದ್ದಿಒನ್,ಬೆಂಗಳೂರು :  ಸ್ಟಾರ್ಟಪ್ ಕಂಪನಿಯ ಸಿಇಒ ಸುಚನಾ ಸೇಠ್ ತನ್ನ ನಾಲ್ಕು ವರ್ಷದ ಮಗನನ್ನು ಕೊಂದ ಪ್ರಕರಣದಲ್ಲಿ ಮತ್ತಷ್ಟು ವಿಷಯಗಳು ಬೆಳಕಿಗೆ ಬರುತ್ತಿವೆ. ಮೃತ ದೇಹವನ್ನು ಬಚ್ಚಿಟ್ಟಿದ್ದ ಸೂಟ್‌ಕೇಸ್‌ನಲ್ಲಿ ಸುಚನಾ ಸೇಠ್ ಬರೆದಿದ್ದ ಪತ್ರವನ್ನು ಗೋವಾ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೇಪರ್ ಬದಲು ಟಿಶ್ಯೂ ಪೇಪರ್ ನಲ್ಲಿ ಬರೆದಿದ್ದ ಸುಜನಾ ಸೇಠ್, ಪೆನ್ ಬದಲಿಗೆ ಐಲೈನರ್ ಬಳಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪತ್ರವನ್ನು ಹೆಚ್ಚಿನ ತನಿಖೆಗಾಗಿ ವಿಧಿವಿಜ್ಞಾನ ತಂಡಕ್ಕೆ ಕಳುಹಿಸಲಾಗಿದೆ. ಐಲೈನರ್‌ನಿಂದ ಬರೆದ ಆರು ಸಾಲಿನ ಪತ್ರವನ್ನು ವಿಧಿವಿಜ್ಞಾನ ತಂಡದ ಕೈಬರಹ ತಜ್ಞರು ಪರಿಶೀಲಿಸುತ್ತಿದ್ದಾರೆ.

ಆದರೆ, ‘ಕೋರ್ಟ್, ನನ್ನ ಮಾಜಿ ಪತಿ ನನ್ನ ಮಗನನ್ನು ಕಸ್ಟಡಿಗೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ.. ಇನ್ನು ಮುಂದೆ ನಾನು ಅದನ್ನು ಸಹಿಸಲಾರೆ.. ಮಾಜಿ ಪತಿ ತುಂಬಾ ಕ್ರೂರಿ,… ಅವನು (ನನ್ನ) ಮಗನಿಗೆ ಕೆಟ್ಟ ಅಭ್ಯಾಸಗಳನ್ನು ಕಲಿಸುತ್ತಾನೆ. ಅವನು ನನ್ನ ಮಗುವನ್ನು ನೋಡುವುದು ನನಗೆ ಇಷ್ಟವಿಲ್ಲ’ ಎಂದು ಅದರಲ್ಲಿ ಬರೆದಿರುವಂತಿದೆ. ಆದರೆ, ಆಕೆ ತನ್ನ ಮಗನನ್ನು ಕೊಲ್ಲುವ ಮುನ್ನ ಲಾಲಿ ಹಾಡುವ ಮೂಲಕ ಮಗನನ್ನು ಮಲಗಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಮನಸ್ಥಿತಿಯನ್ನು ಈ ಪತ್ರದ ಸಾಲುಗಳು ನಿರ್ಣಾಯಕ ಸಾಕ್ಷ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಗನನ್ನು ಪತಿ ಭೇಟಿಯಾಗುವುದು ಆಕೆಗೆ ಇಷ್ಟವಿರಲಿಲ್ಲ ಎಂದು ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, ಇದೇ ಕಾರಣದಿಂದ ಆಕೆ ಈ ಹಂತಕ್ಕೆ ಹೋಗಲು ಕಾರಣವಾಗಿತ್ತು. ‘ಕೊಲೆಗೂ ಮುನ್ನ ಆಕೆ ತನ್ನ ವೈದ್ಯರಾದ ಪೇರೆಂಟಲ್ ಥೆರಪಿಸ್ಟ್ ಜೊತೆ ಸಂಪರ್ಕದಲ್ಲಿದ್ದಳು. ಬಾಲಕನ ಸಾವಿನ ನಂತರ ಆಕೆ ಯಾರಿಗೆ ಕರೆ ಮಾಡಿದ್ದಾಳೆ ಎಂದು ತಿಳಿಯಲು ನಾವು ಕರೆ ವಿವರಗಳನ್ನು ಪರಿಶೀಲಿಸುತ್ತಿದ್ದೇವೆ,” ಎಂದು ಅಧಿಕಾರಿ ತಿಳಿಸಿದ್ದಾರೆ.

ಸುಚನಾ ಸೇಠ್-ವೆಂಕಟ್ ರಾಮನ್ ದಂಪತಿಯ ಭಿನ್ನಾಭಿಪ್ರಾಯದಿಂದ ವಿಚ್ಛೇದನ ಪಡೆದಿದ್ದರು. ಕೋರ್ಟ್ ಕೂಡ ದಂಪತಿಗೆ ವಿಚ್ಛೇದನ ನೀಡಿದೆ. ಆದರೆ ವಾರಕ್ಕೊಮ್ಮೆ ಮಗನನ್ನು ಭೇಟಿಯಾಗಲು ತಂದೆಗೆ ನ್ಯಾಯಾಲಯ ಅನುಮತಿ ನೀಡಿದೆ. ಸುಚನಾಗೆ ಇದು ಅಷ್ಟಾಗಿ ಇಷ್ಟವಾಗಲಿಲ್ಲ. ಭಾನುವಾರ ತನ್ನ ಮಗನನ್ನು ತಂದೆಯ ಬಳಿಗೆ ಕಳುಹಿಸಲು ಆಕೆಗೆ ಸುತರಾಂ ಇಷ್ಟವಿರಲಿಲ್ಲ. ಅದಕ್ಕಾಗಿಯೇ ಆಕೆ ತನ್ನ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...