Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿರತೆ ದಾಳಿಗೆ ಮತ್ತೊಂದು ಬಲಿ ; ಗ್ರಾಮಸ್ಥರ ಪ್ರತಿಭಟನೆ

Facebook
Twitter
Telegram
WhatsApp

ತಿ.ನರಸೀಪುರ.(ಡಿ.01):ತಿಂಗಳ ಹಿಂದೆಯಷ್ಟೇ ಚಿರತೆ ದಾಳಿಯಿಂದ ಎಂ.ಎಲ್.ಹುಂಡಿ ಗ್ರಾಮದ ಯುವಕನೊಬ್ಬ ಬಲಿಯಾದ ನೆನಪು ಮಾಸುವ ಮುನ್ನವೇ ಚಿರತೆ ಮತ್ತೊಂದು ಬಲಿಯನ್ನು ಪಡೆದಿದೆ.

ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ರಮೇಶ್ ನಾಯಕ ಎಂಬುವರ ಪುತ್ರಿ ಪಟ್ಟಣದ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಮೇಘನಾ (22) ಯುವತಿಯು ಚಿರತೆ ದಾಳಿಗೆ ತುತ್ತಾಗಿದ್ದು ,ತಾಲೂಕಿನಲ್ಲಿ ಚಿರತೆ ದಾಳಿ ನಿರಂತರ ಮುಂದುವರೆದಿದೆ.

ಯುವತಿ ಬಹಿರ್ದೆಸೆ ಹೋಗಿದ್ದ ಸಮಯದಲ್ಲಿ ಚಿರತೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಯುವತಿಯನ್ನು ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಈಗ ಮತ್ತೊಂದು ಬಡ ಜೀವ ಪ್ರಾಣ ಕಳೆದುಕೊಂಡಂತಾಗಿದೆ.

ಸಾರ್ವಜನಿಕ ಆಸ್ಪತ್ರೆ ಮುಂದೆ ಸಾರ್ವಜನಿಕರಿಂದ ಪ್ರತಿಭಟನೆ ಶುರುವಾಗುತಿದಂತೆ ಶಾಸಕ ಎಂ.ಅಶ್ವಿನ್ ಕುಮಾರ್ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆಗೆ ಕುಳಿತರು ಅಲ್ಲದೆ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು,ಅರಣ್ಯಾಧಿಕಾರಿಗಳು ಭೇಟಿ ನೀಡಬೇಕು ಎಂದು ಪಟ್ಟುಹಿಡಿದಿದ್ದಾರೆ.ಸ್ಥಳದಲ್ಲಿ ಡಿವೈಎಸ್ಪಿ ಗೋವಿಂದರಾಜು ಮೊಕ್ಕಂ ಹೊಡಿದ್ದು, ಪಿಎಸ್ಐ ತಿರುಮಲ್ಲೇಶ್ ಅಹಿತಕರ ಘಟನೆ ನೆಡಯದಂತೆ ಬಂದು ಬಸ್ತು ಏರ್ಪಡಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ನಗರಸಭೆಯ ಆಸ್ತಿ ಸೇರಿದಂತೆ ಇನ್ನಿತರೆ ತೆರಿಗೆಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಗೆ ಅವಕಾಶ : ಪೌರಾಯುಕ್ತೆ ಎಂ.ರೇಣುಕಾ

ಚಿತ್ರದುರ್ಗ. ಏ.19:  ಚಿತ್ರದುರ್ಗ ನಗರಸಭೆಯ ಆಸ್ತಿ ತೆರಿಗೆ, ನೀರಿನ ಕರ ಹಾಗೂ ಇತರೆ ಶುಲ್ಕಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಮೊಬೈಲ್ ಅಪ್ಲಿಕೇಷನ್‍ಗಳಾದ ಭೀಮ್, ಭಾರತ್ ಬಿಲ್ ಪೇ, ಫೋನ್

ಬಿಜೆಪಿ ನೇತೃತ್ವದ ಎನ್‍ಡಿಎ ಮತ್ತು ಕಾಂಗ್ರೆಸ್ ನೇತ್ರತ್ವದ ಇಂಡಿಯಾವನ್ನು ನಾವು ಸಮಾನವಾಗಿ ವಿರೋಧಿಸುತ್ತೇವೆ : ಸಂವಾದ ಕಾರ್ಯಕ್ರಮದಲ್ಲಿ ಕಾಮ್ರೇಡ್ ಕೆ.ರಾಧಾಕೃಷ್ಣ ಹೇಳಿಕೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 19 : “ದೇಶದಾದ್ಯಂತ ಇಂದು ಎರಡು ಒಕ್ಕೂಟಗಳು ಜನರ ಮುಂದಿವೆ. ಒಂದು ಬಿಜೆಪಿ ನೇತೃತ್ವದ ಎನ್‍ಡಿಎ ಮತ್ತು ಇನ್ನೊಂದು ಕಾಂಗ್ರೆಸ್ ನೇತ್ರತ್ವ ಇಂಡಿಯಾ. ಇವೆರಡನ್ನು ನಾವು ಸಮಾನವಾಗಿ ವಿರೋಧಿಸುತ್ತೇವೆ ಎಂದು

ಕಾರ್ಮಿಕರ ಭವಿಷ್ಯದ ದೃಷ್ಟಿಯಿಂದ ಈ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟಕ್ಕೆ ಬೆಂಬಲ : ಗೌಸ್ ಪೀರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 19 : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾಯ್ದೆ ಮತ್ತು ಸೆಸ್ ಕಾಯ್ದೆ

error: Content is protected !!