Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸನಾತನ ಧರ್ಮದ ಬಗ್ಗೆ ಚರ್ಚೆ ಹುಟ್ಟು ಹಾಕಿದ್ದ ಉದಯನಿಧಿ ಸ್ಟಾಲಿಮ್ ಕಡೆಯಿಂದ ಮತ್ತೊಂದು ವಿಡಿಯೋ..!

Facebook
Twitter
Telegram
WhatsApp

ಚೆನ್ನೈ: ಇತ್ತಿಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸನಾತನ ಧರ್ಮದ ವಿಚಾರವಾಗಿ ಸಾಕಷ್ಟು ಚರ್ಚೆಯಾಗಿತ್ತಿದೆ. ಅದರಲ್ಲೂ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾಗೆ ಹೋಲಿಕೆ ಮಾಡಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಇದೀಗ ಉದಯನಿಧಿ ಸ್ಟಾಲಿನ್ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಕಟ್ಟರ್ ಹಿಂದೂ ವಿರೋಧಿ ಎಂದೇ ಖ್ಯಾತಿ ಪಡೆದಿರುವ ತಮಿಳುನಾಡಿನ ಮಾಜಿ ಸಿಎಂ ಕರುಣಾನಿಧಿ ಮಾತನಾಡಿರುವ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ‘ಹಿಂದುಳಿದ ಜಾತಿಗಳಿಗೆ ಮೇಲ್ವರ್ಗದವರು ವಿದ್ಯೆಯನ್ನು ನಿರಾಕರಿಸಿದರು. ವಿದ್ಯೆ ಕಲಿತರೆ ನಿಮಗೆ ಶಾಪ ತಟ್ಟಲಿದೆ ಎಂದು ಬೆದರಿಕೆ ಹಾಕಿದ್ದರು. ಅದಕ್ಕೆ ನಾವ್ಯಾರು ಹೆದರಲಿಲ್ಲ‌. ವಿದ್ಯೆ ಕಲಿಯಬೇಕು ಎಂದುಕೊಂಡಿರೋ ಕೆಳಜಾತಿಯ ಜನ ನರಕಕ್ಕೆ ಹೋಗಲಿದ್ದಾರೆ ಎಂದು ಹೆದರಿಸಿದ್ರು. ಒಂದು ವೇಳೆ ಯಾರಾದರೂ ಅವರಿಗೆ ಗೊತ್ತಿಲ್ಲದೆ ವಿದ್ಯೆ ಕಲಿತರೆ ಅಂಥವರ ನಾಲಿಗೆ ಕತ್ತರಿಸುತ್ತಿದ್ದರು.

ಕತ್ತರಿಸಿ ನಾಲಿಗೆಯನ್ನು ಸುಟ್ಟು ಹಾಕುತ್ತಿದ್ದರು. ಅದು ಅಂದು ಮಾತ್ರವಲ್ಲ, ಇಂದು ಕೂಡ ಮನುಧರ್ಮವನ್ನು ಪಾಲಿಸುವವರು ಅದನ್ನೇ ಹೇಳುತ್ತದೆ. ಹೀಗಾಗಿ ಪೆರಿಯಾರ್ ಮನುಧರ್ಮ ಶಾಸ್ತ್ರವನ್ನು ಸುಟ್ಟರು, ಅಂಬೇಡ್ಜರ್ ವಿರುದ್ಧ ಹೋರಾಟ ನಡೆಸಿದರು ಎಂದು ಕರುಣಾನಿಧಿ ಅವರು ಮಾತಾಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು : ಕೋರ್ ಕಮಿಟಿಯಲ್ಲಿ ತೀರ್ಮಾನ

ಹುಬ್ಬಳ್ಳಿ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಜಿ.ಟಿ ದೇವೇಗೌಡರ ನೇತೃತ್ವದ ಕೋರ್ ಕಮಿಟಿಯಲ್ಲಿ ಈ ಸಂಬಂಧ ನಿರ್ಧಾರವಾಗಿದ್ದು, ಅಮಾನತು ಮಾಡಲಾಗಿದೆ. ಈ ಸಂಬಂಧ

ಬಿಜೆಪಿ ನಾಯಕನಿಗೆ ಮಾತ್ರ ಪೆನ್ ಡ್ರೈವ್ ಕೊಟ್ಟಿದ್ದೆ : ಶಾಕಿಂಗ್ ವಿಡಿಯೋ ಬಿಟ್ಟ ಡ್ರೈವರ್ ಕಾರ್ತಿಕ್

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನೇ ದಿನೇ ಹಲವು ವಿಚಾರಗಳು ಹೊರಗೆ ಬರುತ್ತಿವೆ. ನಿನ್ನೆಯಷ್ಟೇ ವಕೀಲ, ಬಿಜೆಪಿ ನಾಯಕ ದೇವರಾಜೇಗೌಡ, ಪೆನ್ ಡ್ರೈವ್ ವಿಚಾರವಾಗಿ ಮಾತನಾಡಿ, ಕಾರ್ತಿಕ್ ಬಳಿ ಪೆನ್ ಡ್ರೈವ್

error: Content is protected !!