Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಐತಿಹಾಸಿಕ ಪ್ರಸಿದ್ಧಿ ಹೊರತುಪಡಿಸಿ ಯಾವ ದೃಷ್ಟಿಯಲ್ಲೂ ಅಭಿವೃದ್ದಿಯಾಗಿಲ್ಲ : ಡಾ.ಬಿ.ಎಲ್.ವೇಣು

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.09 : ಜನಪ್ರತಿನಿಧಿಗಳಾದವರಿಗೆ ಕ್ಷೇತ್ರದ ಅಭಿವೃದ್ದಿ ಬಗ್ಗೆ ಕಾಳಜಿ, ಕಳಕಳಿಯಿರಬೇಕೆಂದು ಮಾಜಿ ಸಂಸದ ಜನಾರ್ಧನಸ್ವಾಮಿ ಹೇಳಿದರು.

ಪ್ರಾದೇಶಿಕ ಭಾಷಾ ಗುಣಾತ್ಮಕ ಚಲನಚಿತ್ರಗಳ ಆಯ್ಕೆ ಸಮಿತಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರತಿಷ್ಠಿತ ರಾಜಾವೀರ ಮದಕರಿನಾಯಕ ಪ್ರಶಸ್ತಿಗೆ ಭಾಜನರಾಗಿರುವ ಸಾಹಿತಿ ಡಾ.ಬಿ.ಎಲ್.ವೇಣು ರವರನ್ನು ಚಿತ್ರದುರ್ಗದ ಅವರ ನಿವಾಸದಲ್ಲಿ ಗುರುವಾರ ಸನ್ಮಾನಿಸಿ ಮಾತನಾಡಿದರು.

2009 ರಲ್ಲಿ ನಾನು ಸಂಸದನಾದಾಗ ನಮ್ಮ ಪಕ್ಷ ಅಧಿಕಾರದಲ್ಲಿರಲಿಲ್ಲ. ವಿರೋಧ ಪಕ್ಷದಲ್ಲಿದ್ದುಕೊಂಡು ಸಾವಿರಾರು ಕೋಟಿ ರೂ.ಗಳ ಅನುದಾನ ತಂದಿದ್ದೇನೆ. ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗಕ್ಕೆ ಹಿಂದುಳಿದ ಪ್ರದೇಶ ಎಂಬ ಹಣೆಪಟ್ಟಿ ಅಂಟಿಕೊಂಡಿರುವುದನ್ನು ಅಳಿಸಿ ಹಾಕಬೇಕಾಗಿದೆ. ನೇರ ರೈಲು ಮಾರ್ಗ ಬೇಕು. ಏಳುಸುತ್ತಿನ ಚಿತ್ರದುರ್ಗದ ಕೋಟೆ ಹಾಳಾಗದಂತೆ ಸ್ಮಾರಕವನ್ನಾಗಿ ಸಂರಕ್ಷಿಸಬೇಕಿದೆ.

ಮುಖ್ಯವಾಗಿ ನೀರು, ಕೈಗಾರಿಕೆ ಇಲ್ಲದಿರುವುದು ಚಿತ್ರದುರ್ಗ ಜಿಲ್ಲೆ ಹಿಂದುಳಿಯಲು ಕಾರಣ. ನಮ್ಮ ಜಿಲ್ಲೆಯಲ್ಲೆ ಇದ್ದ ದಾವಣಗೆರೆ ಎಷ್ಟೊಂದು ಮುಂದುವರೆದಿದೆ. ಶಿವಮೊಗ್ಗ, ಬಳ್ಳಾರಿ, ತುಮಕೂರು ಈ ಜಿಲ್ಲೆಗಳನ್ನು ಯಾರು ಹಿಂದುಳಿದ ಜಿಲ್ಲೆ ಎಂದು ಕರೆಯುತ್ತಿಲ್ಲ. ಹಾಗಾಗಿ ಇಲ್ಲಿನ ಜನಪ್ರತಿನಿಧಿಗಳು ಜಿಲ್ಲೆಗೆ ಅಗತ್ಯವಾಗಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕಡೆ ಗಮನ ಕೊಡಬೇಕಿದೆ ಎಂದರು.

ಚಳ್ಳಕೆರೆ ಸಮೀಪ ಡಿ.ಆರ್.ಡಿ.ಓ. ಆಗಿದೆ. ಎಷ್ಟೋ ಮಂದಿಗೆ ಇನ್ನು ಇದರ ವಿಶೇಷತೆ ಗೊತ್ತಿಲ್ಲ. ಗುಣಮಟ್ಟದ ಶಿಕ್ಷಣಕ್ಕೆ ಜಿಲ್ಲೆಯಲ್ಲಿ ಎಲ್ಲರೂ ಒತ್ತು ಕೊಡಬೇಕು ಎಂದು ತಿಳಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸಾಹಿತಿ ಡಾ.ಬಿ.ಎಲ್.ವೇಣು ಚಿತ್ರದುರ್ಗ ಐತಿಹಾಸಿಕವಾಗಿ ಪ್ರಸಿದ್ದಿ ಪಡೆದಿದೆ ಎನ್ನುವುದನ್ನು ಬಿಟ್ಟರೆ ಬೇರೆ ಯಾವ ದೃಷ್ಟಿಯಲ್ಲೂ ಅಭಿವೃದ್ದಿಯಾಗಿಲ್ಲ. ಭದ್ರಾಮೇಲ್ದಂಡೆ ಯೋಜನೆಗಾಗಿ ಕಳೆದ ಮೂವತ್ತು ನಲವತ್ತು ವರ್ಷಗಳಿಂದಲೂ ಹೋರಾಟ ನಡೆಯುತ್ತಿದ್ದರೂ ಕಾಮಗಾರಿ ಮಾತ್ರ ಇನ್ನು ಪೂರ್ಣಗೊಂಡಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಜಿಲ್ಲೆಗೆ ನೀರು ಹರಿಯುತ್ತದೆ ಎನ್ನುವುದು ಯಾವ ಗ್ಯಾರೆಂಟಿ. ಚುನಾಯಿತ ಪ್ರತಿನಿಧಿಗಳಿಗೆ ಇಚ್ಚಾಶಕ್ತಿಯಿರಬೇಕು ಎಂದು ನುಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!