Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈಗ ಕ್ಷಮೆ ಕೇಳಿ, ಗೆದ್ದ ಬಳಿಕ ತುಳಿಯುತ್ತಾರೆ : ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಆಕ್ರೋಶ

Facebook
Twitter
Telegram
WhatsApp

 

ಹುಬ್ಬಳ್ಳಿ: ಬಿಜೆಪಿಯಿಂದ ಈ ಬಾರಿಯು ಪ್ರಹ್ಲಾದ್ ಜೋಶಿ ಅವರಿಗೆ ಟಿಕೆಟ್ ನೀಡಲಾಗಿದೆ. ಆದರೆ ಇದಕ್ಕೆ ವಿರೋಧ ಕೇಳಿ ಬಂದಿತ್ತು. ಅಭ್ಯರ್ಥಿಯನ್ನು ಬದಲಾಯಿಸಬೇಕೆಂದು ಒತ್ತಾಯಿಸಿದರು. ಅದಕ್ಕೆಂದೆ ಸಮಯಾವಕಾಶವನ್ನು ನೀಡಿದ್ದರು. ಆದರೆ ಗಡುವು ಮುಗಿದಿದ್ದು, ಇದೀಗ ಅವರನ್ನು ಸೋಲಿಸುವುದೇ ನಮ್ಮ ಗುರಿ ಎಂದು ದಿಂಗಾಲೇಶ್ವರ ಶ್ರೀಗಳು ಶಪಥ ಮಾಡಿದ್ದಾರೆ.

 

ದಿಂಗಾಲೇಶ್ವರ ಶ್ರೀಗಳು ಮಾತನಾಡಿದ್ದು, ಲಿಂಗಾಯತ ವಿರೋಧಿ ಆಗಿರುವ ಪ್ರಹ್ಲಾದ ಜೋಶಿ ಅವರನ್ನು ಈ ಕ್ಷೇತ್ರದಿಂದ ಬದಲಾಯಿಸಬೇಕೆಂದು ನೀಡಿದ್ದ ಗಡುವು ಮುಗಿದಿದೆ. ಯಾವುದೇ ಕಾರಣಕ್ಕೂ ಬದಲಾವಣೆ ಸಾಧ್ಯವಿಲ್ಲ ಎಂದು ಬಿಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆಮ ಹೀಗಾಗಿ ಪ್ರಹ್ಲಾದ್ ಜೋಶಿ ಅವರನ್ನು ಸೋಲಿಸುವುದೆರ ನಮ್ಮ ಗುರಿಯಾಗಿದೆ. ಮಾರ್ಚ್ 31ರ ತನಕ ಗಡುವು ಕೊಡಲಾಗಿತ್ತು. ಆದರೆ ಈಗ ನಮ್ಮ ಗಡುವು ಮುಗಿದಿದೆ. ಹೀಗಾಗಿ ನಮ್ಮ ನಿಲುವು ಕೂಡ ಅಚಲವಾಗಿದೆ. ಅವರನ್ನು ಸೋಲಿಸಲು ಚಿಂತನ ಮಂಥನ ನಡೆಸಲಾಗುತ್ತಿದೆ ಎಂದಿದ್ದಾರೆ.

ಪ್ರಹ್ಲಾದ ಜೋಶಿ ಅವರು ಈ ಹಿಂದೆಯೇ ನಮ್ಮ ಬಳಿ ಎರಡು ಬಾರಿ ಕ್ಷಮೆ ಕೇಳಿದ್ದಾರೆ. ಆಗ ನಾವೂ ಕೂಡ ಕ್ಷಮಾಧಾನ ಮಾಡಿದ್ದೆವು. ಗೆದ್ದು ಬಂದ ನಂತರ ಎಲ್ಲಾ ಸ್ವಾಮೀಜಿಗಳನ್ನು, ನಾಯಕರನ್ನು, ನೌಕರರನ್ನು, ವ್ಯಾಪಾರಿಗಳನ್ನು, ಜನ ಪ್ರತಿನಿಧಿಗಳನ್ನು ತುಳಿಯುವ ಕೆಲಸ ಮಾಡುತ್ತಾರೆ. ಹೀಗಾಗಿ ಮತದಾರ ಪ್ರಭುಗಳು, ನಮ್ಮ ಹಿತೈಷಿಗಳು ಈ ಲೋಕಸಭಾ ಚುನಾವಣೆಯಲ್ಲಿ ತಾವೂ ಸ್ಪರ್ಧಿಸಿ, ಪ್ರಹ್ಲಾದ ಜೋಶಿ ಅವರನ್ನು ಸೋಲಿಸಿ ಎಂದಿದ್ದಕ್ಕೆ ಅವರ ಮಾತನ್ನು ಕೇಳುವ ಪರಿಸ್ಥಿತಿ ಬಂದಿದೆ ಎಂದು ದಿಂಗಾಲೇಶ್ವರ ಶ್ರೀಗಳು ಹೇಳಿದ್ದಾರೆ. ಈ ಮೂಲಕ ಪ್ರಹ್ಲಾದ ಜೋಶಿ ವಿರುದ್ಧ ದಿಂಗಾಲೇಶ್ವರ ಶ್ರೀಗಳು ಸ್ಪರ್ಧಿಸುವುದು ಖಚಿತವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

ಪ್ರಜ್ವಲ್ ಹಾಗೂ ರೇವಣ್ಣ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಿ : ಗೀತಾ ನಂದಿನಿಗೌಡ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ

error: Content is protected !!