Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದ ಮತದಾರರಿಗೆ ಪ್ರಧಾನಿಯಿಂದ ಮನವಿ ಪತ್ರ : ಅದರಲ್ಲಿ ಅಂತದ್ದೇನಿದೆ..?

Facebook
Twitter
Telegram
WhatsApp

ನವದೆಹಲಿ: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೇ ಶುರುವಾಗಿದೆ. ನಾಳೆ ಬೆಳಗ್ಗೆ 7 ಗಂಟೆಗೆ 224 ಮತಗಟ್ಟೆಗಳಲ್ಲಿಯೂ ಮತದಾನ ಆರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಸಾಕಷ್ಟು ಬಾರಿ ಬಂದು ತಮ್ಮ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿ ಹೋಗಿದ್ದಾರೆ. ಈಗ ಮತದಾರರಿಗೆ ಪತ್ರದ ಮೂಲಕ ಮನವಿಯೊಂದನ್ನು ಮಾಡಿದ್ದಾರೆ.

“ಕರ್ನಾಟಕದ ನನ್ನ ಸಹೋದರ ಸಹೋದರಿಯರೇ ನಮಸ್ಕಾರ. ಕರ್ನಾಟಕದ ಸಾಂಸ್ಕೃತಿಕ ಪರಂಪರೆಯು ಇಡೀ ದೇಶಕ್ಕೆ ಹಾಗೂ ನನಗೆ ವೈಯಕ್ತಿಕವಾಗಿ ಪ್ರೇರಣೆಯಾಗಿದೆ‌. ಜಗಜ್ಯೋತಿ ಬಸವೇಶ್ವರರು, ನಾಡಗೌಡ ಕೆಂಪೇಗೌಡರು, ಒನಕೆ ಓಬವ್ವ, ಕನಕದಾಸರಂತಹ ಮಹನೀಯರನ್ನು ನೀಡಿದ ದೇಶವಿದು. ಕರ್ನಾಟಕ ಜನರ ಕನಸು ನನ್ನ ಕನಸು, ನಿಮ್ಮ ಸಂಕಲ್ಪ ನನ್ನದೇ ಸಂಕಲ್ಪ.

ಇವೆಲ್ಲವನ್ನೂ ಸಾಕಾರಗೊಳಿಸಬೇಕು ಎಂದರೆ ಒಟ್ಟಾಗಿ ಕೈಜೋಡಿಸಬೇಕು. ಆಗ ಯಾವ ಶಕ್ತಿಯೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಕರ್ನಾಟಕದ ಉಜ್ವಲ ಭವಿಷ್ಯ, ಅದರಲ್ಲೂ ನಿಮ್ಮ ಕುಟುಂಬ ಮತ್ತು ಯುವಜನರಿಗಾಗಿ ಮನವಿ ಮಾಡುತ್ತಿದ್ದೇನೆ. ಜವಬ್ದಾರಿಯುತ ಮತದಾರಾದ ನೀವೂ ತಪ್ಪದೇ ಮೇ 10ರಂದು ಮತದಾನ ಮಾಡುವಂತೆ ಕೋರುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!