Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಶಿಕ್ಷಕರ ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಚಿವ ಮಧು ಬಂಗಾರಪ್ಪನವರಿಗೆ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಡಿಸೆಂಬರ್.15 : ಬೆಳಗಾವಿಯ ಸುವರ್ಣ ಸೌಧದಲ್ಲಿ ಹತ್ತು ದಿನಗಳ ಕಾಲ ನಡೆದ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ರಾಜ್ಯ ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಮುಖಾಂತರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪನವರನ್ನು ಭೇಟಿ ಮಾಡಿ ರಾಜ್ಯದ 33 ಜಿಲ್ಲೆಗಳಲ್ಲಿ ಖಾಲಿಯಿರುವ ವೃತ್ತಿ ಶಿಕ್ಷಣ ವಿಷಯ ಪರಿವೀಕ್ಷಕರ ಹುದ್ದೆಗೆ ಬಡ್ತಿ ನೀಡುವುದು, ಜಿಲ್ಲಾ ಹಂತದಲ್ಲಿ ವೃತ್ತಿ ಶಿಕ್ಷಣ ಶಿಕ್ಷಕರು ಗ್ರೇಡ್-2, ವೃತ್ತಿ ಶಿಕ್ಷಣ ಶಿಕ್ಷಕರ ಜೇಷ್ಟತಾ ಪಟ್ಟಿ ಸಿದ್ದಪಡಿಸುವುದು. ಜೇಷ್ಠತೆ ಹಾಗೂ ರೋಸ್ಟರ್ ಪ್ರಕಾರ ಗೈಡ್-1 ವೃತ್ತಿ ಶಿಕ್ಷಣ ಶಿಕ್ಷಕರ ಹುದ್ದೆಗೆ ಬಡ್ತಿ, ವೇತನ ತಾರತಮ್ಯ ನಿವಾರಿಸುವಂತೆ ಮನವಿ ಸಲ್ಲಿಸಲಾಯಿತು.

ಮನವಿ ಸ್ವೀಕರಿಸಿದ ಸಚಿವರು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರಾದ ಶ್ರೀಮತಿ ಬಿ.ಬಿ.ಕಾವೇರಿ ಈ ಸಂದರ್ಭದಲ್ಲಿದ್ದರು.

ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಗೌರವಾಧ್ಯಕ್ಷ ಬಿ.ಎನ್.ರಾಮರೆಡ್ಡಿ, ಎಸ್.ವಾಸು, ಚಿತ್ರದುರ್ಗ ಡಿ.ಡಿ.ಪಿ.ಐ. ಕಚೇರಿಯ ವಿಷಯ ಪರಿವೀಕ್ಷಕ ಎಸ್.ಟಿ.ಮಹಾಲಿಂಗಪ್ಪ, ಬತುಲ್ ಅಕ್ಬರ್, ಕೆ.ಎಚ್.ಎಂ.ವಿಶ್ವನಾಥ, ನಾಗಪ್ಪ, ಸೋಮಣ್ಣನವರ್, ಜಿ.ಎಸ್.ನರೇಗಲ್, ಶ್ರೀಮತಿ ಯು.ಟಿ.ಉಂಡೆಕಾರ್ ಇನ್ನು ಮುಂತಾದವರು ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...