Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಾಣಿಜ್ಯ ಶಾಸ್ತ್ರ ಬಿಎಡ್, ಟಿಇಟಿ ಪದವೀಧರರಿಗೆ ಶಿಕ್ಷಕರ ನೇಮಕಾತಿಗೆ ಪರಿಗಣಿಸುವಂತೆ ಒತ್ತಾಯಿಸಿ ಶಾಸಕರಿಗೆ ಮನವಿ

Facebook
Twitter
Telegram
WhatsApp

 

ಕುರುಗೋಡು. ಡಿ.4

ವಾಣಿಜ್ಯ ಶಾಸ್ತ್ರ ಬಿ. ಎಡ್.ಮತ್ತು ಟಿಇಟಿ ಪದವಿದರರಿಗೆ ಶಿಕ್ಷಕರ ನೇಮಕಾತಿ ಅರ್ಹತೆಗೆ ಪರಿಗಣಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಎಂ. ಸೂಗೂರು ಭಾಗದ ಪದವಿ ವಿದ್ಯಾರ್ಥಿಗಳು ಶಾಸಕ ಎಂ. ಎಸ್. ಸೋಮಲಿಂಗಪ್ಪ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಪದವಿ ವಿದ್ಯಾರ್ಥಿ ಮುದಿಯಪ್ಪ ನಾಯಕ ಮಾತನಾಡಿ, ಬಿ. ಕಾಂ. ಮತ್ತು ಬಿ. ಬಿ. ಎಂ. ಪದವೀಧರರಿಗೆ 2015 ರಲ್ಲಿ ಬಿ ಎಡ್ ಪದವಿ ಮಾಡಲು ಅವಕಾಶ ಕಲ್ಪಿಸಿತ್ತು, ಅದರಂತೆ 2020 ರಿಂದ ಶಿಕ್ಷಕರ ಅರ್ಹತಾ ಪರೀಕ್ಷೆ ( ಸಮಾಜ ವಿಜ್ಞಾನ ) ಬರೆಯಲು ಅವಕಾಶ ಕೂಡ ನೀಡಲಾಯಿತು. ಅಲ್ಲಿಂದ 2022 ವರೆಗೆ ಎರಡು ಶಿಕ್ಷಕರ ನೇಮಕಾತಿ ನಡೆದಿದ್ದು, ಅವುಗಳಲ್ಲಿ ಅವಕಾಶ ನೀಡದೆ ವಂಚಿತರನ್ನಾಗಿ ಮಾಡಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

 

ಬಿಕಾಂ ಮತ್ತು ಬಿಬಿಎಂ ಪದವೀಧರರಿಗೆ 2022 ನೇಮಕಾತಿಗೆ ಪರಿಗಣಿಸುವಂತೆ ಧಾರವಾಡ ನ್ಯಾಯ ಪೀಠ ಆದೇಶ ಹೊರಡಿಸಿದರು ಇದನ್ನು ಸರ್ಕಾರ ಪರಿಗಣಿಸದೆ ಲೋಪ ವೆಸಗಿರುವುದು ಸರಿಯಲ್ಲ ಎಂದು ಕಿಡಿಕಾರಿದರು.

 

ಅಲ್ಲದೆ ಹರಿಯಾಣ ಮತ್ತು ಉತ್ತರ ಪ್ರದೇಶ ದಲ್ಲಿ ವಾಣಿಜ್ಯ ಪದವಿ ದರರಿಗೆ ಶಿಕ್ಷಕರ ನೇಮಕಾತಿಯಲ್ಲಿ ಅವಕಾಶ ನೀಡಿದೆ ಆದರೆ ಇಲ್ಲಿ ಜಾರಿಯಾಗದಿರುವುದು ನಿಜಕ್ಕೂ ದುರಂತ ಎಂದರು.2015 ರಿಂದ ಬಿಎಡ್ ಮತ್ತು 2020 ರಿಂದ ಟಿಇಟಿ ಯಲ್ಲಿ ಅವಕಾಶ ನೀಡಿ ನೇಮಕಾತಿ ಯಲ್ಲಿ ಅವಕಾಶ ನೀಡದಿರುವುದಕ್ಕೆ ಕಾರಣವಾದರೂ ಏನು ಎಂದು ಪ್ರಶ್ನಿಸಿದರು. ಮುಂಬರುವ ಪದವೀಧರ ಮತ್ತು ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಗಳಲ್ಲಿ ವಾಣಿಜ್ಯ ಶಾಸ್ತ್ರ ಪದವೀಧರರಿಗೆ ಅವಕಾಶ ನೀಡಬೇಕು ಒಂದು ವೇಳೆ ಇಲ್ಲವಾದಲ್ಲಿ ರಾಜ್ಯದ್ಯಂತ ಪದವೀಧರರಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪ್ರಾರಂಭದಲ್ಲಿ ಮುಖ್ಯ ರಸ್ತೆ ಯಿಂದ ಘೋಷಣೆ ಕೂಗುತ್ತಾ ಶಾಸಕರ ಮನೆ ತಲುಪಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವರಾಜ ಎಂ, ಹಜರತ್, ತಿಪ್ಪೇಸ್,ದೇವರಾಜ ಕೆ ಆರ್, ಜಡಿಯಪ್ಪ, ಸಿದ್ದು,ಇನ್ನು ಹಲವು ವಿದ್ಯಾರ್ಥಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

error: Content is protected !!