Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಮಟ್ಟದ ಗಂಗಾಮತ ಸಮಾಜದ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ

---Advertisement---

 

ಸುದ್ದಿಒನ್, ಚಿತ್ರದುರ್ಗ, (ಜು.04) : ಕರ್ನಾಟಕ ರಾಜ್ಯ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘವು 2022-23ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿಯ ಕಲಾ, ವಿಜ್ಞಾನ, ವಾಣಿಜ್ಯ ವಿಭಾಗದಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಗಳಿಸಿ, ಉತ್ತೀರ್ಣರಾದ ಗಂಗಾಮತ ಮತ್ತಿತರೇ ಪರ್ಯಾಯ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯ ವ್ಯಾಪ್ತಿಯಲ್ಲಿನ ಗಂಗಾಮತ ಮತ್ತೀತರೆ ಪರ್ಯಾಯ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳು 2023ರ ಜುಲೈ 20ರೊಳಗೆ ತಮ್ಮ ಅಂಕಪಟ್ಟಿಯ ಜೆರಾಕ್ಸ್ ಪ್ರತಿ ಹಾಗೂ ಜಾತಿ ಸರ್ಟಿಫಿಕೇಟ್ ಜೆರಾಕ್ಸ್ ಪ್ರತಿಗಳನ್ನು ಸ್ವವಿಳಾಸ ಮತ್ತು ಮೊಬೈಲ್, ದೂರವಾಣಿ ಸಂಖ್ಯೆಗಳೊಂದಿಗೆ ಖುದ್ದಾಗಿ ಅಥವಾ ವಾಟ್ಸಪ್ ಮೂಲಕ ಚಿತ್ರದುರ್ಗ ನಗರದ ಮದಕರಿ ವೃತ್ತದ ಗಾಂಗೇಯ ಕಾಂಪ್ಲೇಕ್ಸ್‍ನಲ್ಲಿರುವ ಜಿಲ್ಲಾ ಗಂಗಾಮತ ಸಂಘ ಹಾಗೂ ಗಂಗಾಮತನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳಿಗೆ ಅಥವಾ ಬೆಂಗಳೂರಿನ ನಗರ್‍ತರ್ ಪೇಟೆಯ ರಾಜ್ಯ ಗಂಗಾಮತ ಸಂಘದ ಕಚೇರಿ ವಿಳಾಸಕ್ಕೆ ಕಳುಹಿಸಬಹುದು.

ಜಿಲ್ಲಾ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಂಘದ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಉಪಾಧ್ಯಕ್ಷ ಬಿ.ಹನುಮಂತಪ್ಪ ಅವರ ಮೊಬೈಲ್ ಸಂಖ್ಯೆ 7259726367 ಹಾಗೂ ಜಿಲ್ಲಾ ಘಟಕದ ಕಾರ್ಯದರ್ಶಿ, ರಾಜ್ಯ ನಿರ್ದೇಶಕ ಪಿ.ಅಂಜನಮೂರ್ತಿ ಅವರ ಮೊಬೈಲ್ ಸಂಖ್ಯೆ 9481688300 ವಾಟ್ಸಪ್ ಸಂಖ್ಯೆಗಳಿಗೂ 2022-23ನೇ ಸಾಲಿನ ಅರ್ಜಿಗಳನ್ನು ಕಳುಹಿಸಬಹುದು ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಹನುಮಂತಪ್ಪ ತಿಳಿಸಿದ್ದಾರೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...