ಸರ್ಕಾರಿ ಕೆಲಸಕ್ಕೆ ಹೋಗಬೇಕೆಂದು ಅದೆಷ್ಟೋ ಜನ ಹಗಲು ರಾತ್ರಿ ಎನ್ನದೇ ಕಷ್ಟ ಪಟ್ಟು ಓದುತ್ತಾ ಇರುತ್ತಾರೆ. ಇದೀಗ ಅಂತವರಿಗಾಗಿ ಸರ್ಕಾರಿ ಕೆಲಸಗಳು ತೆರೆದುಕೊಂಡಿವೆ. ಅದರಲ್ಲೂ ಕೋರ್ಟ್ ನಲ್ಲಿ ಕೆಲಸ ಮಾಡುವವರಿಗಾಗಿ ಇಲ್ಲಿದೆ ಮಾಹಿತಿ. ಸುಪ್ರೀಂ ಕೋರ್ಟ್ ಆಫ್ ಇಂಡಿಯಾ ಹೊಸ ಉದ್ಯೋಗಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಿದೆ. ನ್ಯಾಯಾಲಯವು ಈ ಸಂಬಂಧ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಕಿರಿಯ ನ್ಯಾಯಾಲಯ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ ಮಾಡಿದೆ. 241 ಹುದ್ದೆಗಳು ಬಾಕಿ ಇದಾವೆ. 18 ರಿಂದ 30 ವರ್ಷ ವಯಸ್ಸಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಇನ್ನು ಈ ಹುದ್ದೆಗಳೊಗೆ ಅರ್ಜಿ ಸಲ್ಲಿಕೆ ಮಾಡುವವರು ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಜೊತೆಗೆ ಇಂಗ್ಲಿಷ್ ಟೈಪಿಂಗ್ ಸ್ಪೀಡ್ ಬರಬೇಕು. 35 ಡಬ್ಲ್ಯುಪಿಎಂ ಕಂಪ್ಯೂಟರ್ ಜ್ಞಾನ ಇರಬೇಕು. ಲಿಖಿತ ಪರೀಕ್ಷೆ, ಕಂಪ್ಯೂಟರ್ ಜ್ಞಾನ, ಟೈಪಿಂಗ್, ಡಿಸ್ಟ್ರಿಪ್ಟಿವ್ ಟೈಪ್ ಪೇಪರ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇನ್ನು ಈ ಹುದ್ದೆಗಳಿಗೆ 72,040 ರೂಪಾಯಿ ವೇತನ ಇರಲಿದೆ. ಅರ್ಜಿ ಸಲ್ಲಿಕೆಗೆ ಇಂದಿನಿಂದ ಅರ್ಜಿ ಆಹ್ವಾನ ಮಾಡಲಾಗಿದೆ. 03 ಮಾರ್ಚ್ 2025 ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕವಾಗಿದೆ. ಅಷ್ಟರೊಳಗೆ ಆಸಕ್ತರು ಅರ್ಜಿ ಸಲ್ಲಿಕೆ ಮಾಡಬೇಕು. ಜನರಲ್, ಓಬಿಸಿ ಕೆಟಗರಿಗೆ ಅರ್ಜಿ ಶುಲ್ಕವನ್ನು 1000 ರೂಪಾಯಿ ನಿಗದಿ ಮಾಡಲಾಗಿದೆ. ಹಾಗೇ ಎಸ್ಸಿ,ಎಸ್ಟಿ, ಮಾಜಿ ಸೈನಿಕರಿಗೆ 250 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಹೀಗಾಗಿ ಮಾರ್ಚ್ 3 ಒಳಗೆ ಅರ್ಜಿ ಸಲ್ಲಿಕೆ ಮಾಡಿ.
ಮಂಗಳೂರು: ಸತ್ಯ ಖ್ಯತಿ ಗೌತಮಿ ಜಾದವ್ ಈ ಬಾರಿಯ ಬಿಗ್ ಬಾಸ್ ಗೆ ಬಂದಿದ್ದು, ಮತ್ತಷ್ಟು ಖ್ಯಾತಿಯನ್ನು ಪಡೆದಿದ್ದಾರೆ. ಬರುವಾಗಲೇ…
ಚಿತ್ರದುರ್ಗ. ಫೆ.05: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ…
ಚಿತ್ರದುರ್ಗ.ಫೆ.05: ಜಿಲ್ಲಾಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಆಯುಷ್ಮಾನ್ ಭಾರತ ಆರೋಗ್ಯ ಯೋಜನೆಯಡಿ ಸೂಕ್ತ ಚಿಕಿತ್ಸೆ ನೀಡಬೇಕು. ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಮೂಲಭೂತ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರ ಅವರನ್ನು ಕೆಳಗೆ ಇಳಿಸಬೇಕೆಂದು ಯತ್ನಾಳ್ ಬಣ ಪ್ರಯತ್ನ ಪಡುತ್ತಿದೆ. ಇದರ ನಡುವೆ…