ನಾಳೆಯಿಂದ ಗೃಹಜ್ಯೋತಿ ಯೋಜನೆಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಕೆ ಹೇಗೆ..?

1 Min Read

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿನ ಗ್ಯಾರಂಟಿ ಯೋಜನೆಗಳು ಈಗಾಗಲೇ ಜಾರಿಯಾಗಿದೆ. ಅದರಲ್ಲಿ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆಯ ಸಮಯ ಆರಂಭಗೊಂಡಿದೆ. ನಾಳೆಯಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕಾಗಿದೆ. ಭಾನುವಾರ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದೆ.

ಗೃಹಜ್ಯೋತಿ ಯೋಜನೆ ಅಡಿ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ 200 ಯೂನಿಟ್ ವಿದ್ಯುತ್‌ ಉಚಿತವಾಗಿ ನೀಡುತ್ತೇವೆ ಎಂದು ಕಾಂಗ್ರೆಸ್ ಸರ್ಕಾರ ಹೇಳಿಕೆ ನೀಡಿತ್ತು. ಅದರಂತೆ ಈಗ ಉಚಿತ ವಿದ್ಯುತ್ ಗಾಗಿ ಅರ್ಜಿ ಆಹ್ವಾನ ಮಾಡಲು ಸಮಯ ನಿಗದಿ ಮಾಡಿದೆ.

ಅರ್ಜಿ ಸಲ್ಲಿಕೆಗೆ https://sevasindhugss.karnataka.gov.in ವೆಬ್ಸೈಟ್ ನಲ್ಲಿ ಭೇಟಿ ನೀಡಿ, ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಕಂಪ್ಯೂಟರ್, ಲ್ಯಾಪ್ ಟಾಪ್ ನಲ್ಲೂ ಸಲ್ಲಿಸಬಹುದು. ಸಹಾಯವಾಣಿ ಸಂಖ್ಯೆ 1912 ದೂರವಾಣಿ ಸಂಖ್ಯೆ ಮೂಲಕವೂ ಸಂಪರ್ಕಿಸಬಹುದಾಗಿದೆ.

Share This Article
Leave a Comment

Leave a Reply

Your email address will not be published. Required fields are marked *