Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಯುಪಡೆಯಲ್ಲಿ ‘ಅಗ್ನಿವೀರ್ ವಾಯು’ ಹುದ್ದೆಗೆ ಅರ್ಜಿ ಆಹ್ವಾನ

Agniveer
---Advertisement---

ಚಿತ್ರದುರ್ಗ. ಜುಲೈ. 21: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಪಡೆಯಲ್ಲಿ ‘ಅಗ್ನಿವೀರ್ ವಾಯು’ (02/2027) ಹುದ್ದೆಗಳ ಆಯ್ಕೆ ಪರೀಕ್ಷೆಗೆ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 26 ಕೊನೆಯ ದಿನ.

 

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 01 ಜುಲೈ 2005 ರಿಂದ 01 ಜನವರಿ 2010 ರ ನಡುವೆ ಜನಿಸಿರಬೇಕು ಹಾಗೂ ನೋಂದಣಿ ದಿನಾಂಕದ ವೇಳೆಗೆ ಗರಿಷ್ಠ 22 ವರ್ಷ ಮೀರಬಾರದು. ವಿಜ್ಞಾನ ವಿಭಾಗದ ಅಭ್ಯರ್ಥಿಗಳು ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್ ವಿಷಯಗಳೊಂದಿಗೆ 10+2/ಪಿಯುಸಿಯಲ್ಲಿ ಕನಿಷ್ಠ ಶೇ. 50 ಅಂಕ ಗಳಿಸಿರಬೇಕು (ಇಂಗ್ಲಿಷ್‍ನಲ್ಲಿ ಕನಿಷ್ಠ ಶೇ. 50 ಅಂಕ ಕಡ್ಡಾಯ) ಅಥವಾ ಶೇ. 50 ಅಂಕಗಳೊಂದಿಗೆ 3 ವರ್ಷಗಳ ಎಂಜಿನಿಯರಿಂಗ್ ಡಿಪ್ಲೊಮಾ/ 2 ವರ್ಷಗಳ ವೃತ್ತಿಪರ ಕೋರ್ಸ್ ಪೂರ್ಣಗೊಳಿಸಿರಬೇಕು. ಇತರ ವಿಭಾಗದ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಕನಿಷ್ಠ ಶೇ. 50 ಅಂಕ ಹಾಗೂ ಇಂಗ್ಲಿಷ್‍ನಲ್ಲಿ ಶೇ. 50 ಅಂಕಗಳೊಂದಿಗೆ ಪಿಯುಸಿ/10+2 ಅಥವಾ 2 ವರ್ಷಗಳ ವೃತ್ತಿಪರ ಕೋರ್ಸ್ ಪೂರ್ಣಗೊಳಿಸಿರಬೇಕು.

 

ಅರ್ಜಿಯೊಂದಿಗೆ ಶೈಕ್ಷಣಿಕ ಪ್ರಮಾಣ ಪತ್ರ, ಆಧಾರ್/ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ, ದೈಹಿಕ ಸಾಮಥ್ರ್ಯ ಪ್ರಮಾಣ ಪತ್ರ ಹಾಗೂ ಭಾವಚಿತ್ರಗಳನ್ನು ಸಲ್ಲಿಸಬೇಕಿರುತ್ತದೆ. ಅರ್ಹ ಅಭ್ಯರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು
https://iafrecruitment.edcil.co.in
ವೆಬ್‍ಸೈಟ್‍ಗೆ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರ, ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08194-295108, ಮೊಬೈಲ್ ಸಂಖ್ಯೆ 9945587060, 7022459064 ಅನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now