ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ. ಮೇ. 27: 2025ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೇ 31 ಅರ್ಜಿ ಸಲ್ಲಿಸಲು ಕೊನೆಯ ದಿನ.
https://ksgeanews.blogspot.com ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು. ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ ಮತ್ತು ಅಗತ್ಯ ಮಾಹಿತಿಗಾಗಿ KSGEA NEWS ಯೂಟ್ಯೂಬ್ ಚಾನಲ್ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.
ವಿದ್ಯಾರ್ಥಿಯು 2025ರ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು. ವಿದ್ಯಾರ್ಥಿಯ ತಂದೆ, ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು. ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾನಿಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.

ಆನ್ಲೈನ್ ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಯ ಪಾಸ್ಪೋರ್ಟ್ ಭಾವಚಿತ್ರ ಮತ್ತು ದೃಢೀಕೃತ ಅಂಕಪಟ್ಟಿ, ಇಲಾಖೆಯ ಸೇವಾ ಧೃಢೀಕರಣ ಪತ್ರ, ಸಂಘದ ಜಿಲ್ಲಾ, ತಾಲ್ಲೂಕು, ಯೋಜನಾ ಶಾಖೆ ಅಧ್ಯಕ್ಷರು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ದೃಢೀಕರಣ ಪತ್ರ ಸೇರಿದಂತೆ ಎಲ್ಲ ದಾಖಲೆಗಳನ್ನು ಜೆಪಿಜಿ ಪಾರ್ಮೆಟ್ನಲ್ಲಿ 1 ಎಂಬಿಗೆ ಮೀರದಂತೆ ಅಪ್ಲೋಡ್ ಮಾಡಬೇಕು. ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೋಂದಾಯಿತ ಇ-ಮೇಲ್ಗೆ ಸ್ವೀಕೃತಿ ರವಾನೆಯಾಗಲಿದೆ. ಶೇಕಡಾವಾರು ಅಂಕಗಳನ್ನು ನಿರ್ಧರಿಸಿ, ಅರ್ಜಿಯನು ಪರಿಗಣಿಸುವ ನಿರ್ಧಾರ ಸಂಘದ್ದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 080-22354784/83 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್