ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ, ಜೂನ್. 27 : ಕರ್ನಾಟಕ ರಾಜ್ಯ ಅಲಕ್ಷಿತ ಸಣ್ಣ ಸಮುದಾಯಗಳ ಮಹಾವೇದಿಕೆ (ರಿ) ಯಿಂದ ಪ್ರತಿವರ್ಷದಂತೆ ಈ ವರ್ಷವೂ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 85 ರಷ್ಟು ಹಾಗೂ ಪಿ.ಯು.ಸಿಯಲ್ಲಿ ಶೇ.80 ಕ್ಕಿಂತಲೂ ಹೆಚ್ಚು ಅಂಕಗಳಿಸಿರುವ ಹಿಂದುಳಿದ ಸಣ್ಣ ಸಮುದಾಯಗಳಿಗೆ ಸೇರಿರುವ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಜುಲೈ 10 ಕಡೆ ದಿನಾಂಕವಾಗಿದ್ದು, ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ನಕಲು, ಭಾವಚಿತ್ರ ಹಾಗೂ ವಿಳಾಸ ದೃಢೀಕರಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು. ಜೊತೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ವಿಶೇಷ ಪುರಸ್ಕಾರವೂ ಇರುವುದು.
ಅರ್ಜಿಗಳನ್ನು ನೇರವಾಗಿ ಅಥವ ಅಂಚೆ, ಕೋರಿಯರ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿಳಾಸ; ಟಿ.ತಿಪ್ಪೇಸ್ವಾಮಿ ಸಂಪಿಗೆ, ಅಧ್ಯಕ್ಷರು, ಅಲಕ್ಷಿತ ಸಣ್ಣ ಸಮುದಾಯಗಳ ಮಹಾವೇದಿಕೆ (ರಿ), ಕನ್ನಡ ಸಂಪಿಗೆ ನಿಲಯ, ವೇಮನ ನಗರ, ಪ್ರಸಾದ್ ಆಸ್ಪತ್ರೆ ಬಳಿ, ಚಳ್ಳಕೆರೆ ರಸ್ತೆ, ಚಿತ್ರದುರ್ಗ-577501. ವಿವರಗಳಿಗೆ ಮೊಬೈಲ್ ಸಂಖ್ಯೆ; 9731338670 ಸಂಪರ್ಕಿಸಲು ಕೋರಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್