Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪ್ಪು ಹುಟ್ಟುಹಬ್ಬ : ಅಭಿಮಾನಿಗಳಿಗೆ ಒಂದು ಕಡೆ ಸಂಭ್ರಮ.. ಮತ್ತೊಂದು ಕಡೆ ಅಪ್ಪು ಇಲ್ಲದ ಬೇಸರ..!

Facebook
Twitter
Telegram
WhatsApp

 

 

ಇಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಹುಟ್ಟುಹಬ್ಬ. 48ನೇ ವರ್ಷದ ಹುಟ್ಟುಹಬ್ಬ. ಅವರಿಲ್ಲದೆ ಅಭಿಮಾನಿಗಳೇ ಆಚರಿಸುತ್ತಿರುವ ಎರಡನೇಯ ಹುಟ್ಟುಹಬ್ಬ. ವಿಧಿಯ ಕರೆಗೆ ಅಪ್ಪು ಹೊರಟು ಹೋಗಿ ಒಂದು ವರ್ಷದ ಮೇಲಾಯ್ತು. ಆದ್ರೆ ಅಭಿಮಾನಿಗಳು ಅವರಿಗಾಗಿ ತಮ್ಮ ಅಭಿಮಾನವನ್ನು ಮರೆತಿಲ್ಲ. ಅವರ ಸಮಾಧಿಯ ಬಳಿಯೇ ಅವರನ್ನು ಕಾಣುತ್ತಿದ್ದಾರೆ.

ನಿನ್ನೆ ಮಧ್ಯರಾತ್ರಿಯಿಂದಾನೇ ಅಪ್ಪು ಅಭಿಮಾನಿಗಳು ಅವರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ. ಫಲ, ಪುಷ್ಪಗಲನ್ನು ತಂದು ಅಪ್ಪು ಅವರ ಬಳಿ ಇಟ್ಟು, ನಮಸ್ಕಾರ ಮಾಡಿ, ಶುಭಕೋರುತ್ತಿದ್ದಾರೆ. ಇನ್ನು ಬೆಳಗ್ಗೆ ಕೂಡ ಅಭಿಮಾನಿಗಳೆಲ್ಲ ಸಮಾಧಿ ಬಳಿ ಸಾಲುಗಟ್ಟಿ ನಿಂತಿದ್ದಾರೆ.

ಕುಟುಂಬಸ್ಥರು ಈಗಾಗಲೇ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಜೊತೆಗೆ ಅಪ್ಪು ಅಭಿಮಾನಿಗಳಿಗಾಗಿ ಗಿಡಗಳನ್ನು ನೀಡುತ್ತಿದ್ದಾರೆ. ಅಪ್ಪು ಸಮಾಧಿಗೆ ಬಂದು ಪೂಜೆ ಸಲ್ಲಿಸಿ, ರಾಜ್‍ಕುಮಾರ್ ಅವರ ಸಮಾಧಿ ಬಳಿ ಬಂದು ಗಿಡಗಳನ್ನು ತೆಗೆದುಕೊಂಡು ಸಾಗುತ್ತಿದ್ದಾರೆ. ಸುಮಾರು ಹತ್ತು ಸಾವಿರ ಗಿಡಗಳನ್ನು ದೊಡ್ಮನೆ ಕುಟುಂಬ ಹಂಚಿಕೆ ಮಾಡ್ತಾ ಇದೆ.

ಆದ್ರೆ ಅಪ್ಪು ಕಳೆದುಕೊಂಡು ಒಂದು ವರ್ಷ ನಾಲ್ಕು ತಿಂಗಳು. ಆ ನೋವಿನಲ್ಲಿಯೇ ಕರ್ನಾಟಕದ ಜನತೆ ದಿನದೂಡಿ ಬಿಟ್ಟರು. ಆದರೂ ಅಪ್ಪು ನಮ್ಮೊಂದಿಗಿಲ್ಲ ಅಂತ ಅನ್ನಿಸೋದೆ ಇಲ್ಲ. ಅವರ ಸಿನಿಮಾ, ಅವರ ಮಾತುಗಳೇ ಎಲ್ಲರಿಗೂ ಸ್ಪೂರ್ತಿ. ಅವರ ಸಮಾಧಿ ನೋಡಿದಾಗ, ಅವರ ಫೋಟೋಗೆ ಹಾರ ಹಾಕಿರುವುದನ್ನು ನೋಡಿದಾಗಲೇ ಅಪ್ಪು ಇಲ್ಲ ಎಂಬ ಬೇಸರ ಕಾಡುತ್ತೆ. ಜೊತೆಗಿರದ ಜೀವ ಎಂದಿಗಿಂತ ಜೀವಂತ ಎಂಬ ಮಾತಿನಂತೆ ಸದಾ ಅಭಿಮಾನಿಗಳ ಮನದಲ್ಲಿ ಜೀವಂತವಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!