Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇತಿಹಾಸ ಸೃಷ್ಟಿಸಿ ಹೊಸ ದಾಖಲೆ ಬರೆದ ಬಿಲ್ಲುಗಾರ್ತಿ ಅದಿತಿ ಗೋಪಿಚಂದ್ ಸ್ವಾಮಿ

Facebook
Twitter
Telegram
WhatsApp

 

ಭಾರತೀಯ ಮಹಿಳಾ ಬಿಲ್ಲುಗಾರ್ತಿ ಅದಿತಿ ಗೋಪಿಚಂದ್ ಸ್ವಾಮಿ ಹೊಸ ಇತಿಹಾಸ  ನಿರ್ಮಿಸಿದ್ದಾರೆ. ವಿಶ್ವ ಚಾಂಪಿಯನ್ ಪಟ್ಟಕ್ಕೇರಿದ ಅತ್ಯಂತ ಕಿರಿಯ ಬಿಲ್ಲುಗಾರ್ತಿ (17) ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ವಿಶ್ವ ದಾಖಲೆಯನ್ನು ಬರೆದಿದ್ದಾರೆ.

ಬರ್ಲಿನ್‌ನಲ್ಲಿ ನಡೆದ ವಿಶ್ವ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ ವಿಭಾಗದಲ್ಲಿ ಚಿನ್ನ ಗೆಲ್ಲುವ ಮೂಲಕ ಅವರು ಈ ಸಾಧನೆಗೆ ಪಾತ್ರರಾದರು.  ಬಿಲ್ಲುಗಾರಿಕೆಯಲ್ಲಿ ಭಾರತದ ಪರವಾಗಿ ಮೊದಲ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದರು.

ಇಂದು (ಆಗಸ್ಟ್ 5) ನಡೆದ ಫೈನಲ್ ನಲ್ಲಿ ಮೆಕ್ಸಿಕೋದ ಆಂಡ್ರಿಯಾ ಬೆಸೆರಾ ಅವರನ್ನು 149-47 ಅಂಕಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದು ವಿಶ್ವ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ್ದಾರೆ. ಇದೇ ಸ್ಪರ್ಧೆಯಲ್ಲಿ ಆಂಧ್ರಪ್ರದೇಶದ ಬಿಲ್ಲುಗಾರ್ತಿ ಜ್ಯೋತಿ ಸುರೇಖಾ ವೆನ್ನಮ್ ಮತ್ತು ಪರ್ನೀತ್ ಕೌರ್ ಅವರು ಶುಕ್ರವಾರ ಮಹಿಳೆಯರ ತಂಡ ವಿಭಾಗದಲ್ಲಿ ಚಿನ್ನ ಗೆದ್ದರು. ಇದಾದ ನಂತರ ಅದಿತಿ ಭಾರತಕ್ಕೆ ಮತ್ತೊಂದು ಚಿನ್ನ ತಂದುಕೊಟ್ಟರು.

ಈ ವರ್ಷ ಉತ್ತಮ ಫಾರ್ಮ್‌ನಲ್ಲಿರುವ ಅದಿತಿ ಕಳೆದ ತಿಂಗಳು ನಡೆದ ವಿಶ್ವ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ವೈಯಕ್ತಿಕ ಮತ್ತು ತಂಡ ವಿಭಾಗಗಳಲ್ಲಿ ಚಿನ್ನ ಗೆದ್ದಿದ್ದರು. ಕ್ವಾರ್ಟರ್ ಫೈನಲ್ ಶೂಟ್-ಆಫ್‌ನಲ್ಲಿ ಅದಿತಿ ನೆದರ್ಲೆಂಡ್ಸ್‌ನ ಸನ್ನೆ ಡಿ ಲಾಟ್ ಅವರನ್ನು ಸೋಲಿಸಿದರು. ಸೆಮಿಫೈನಲ್‌ನಲ್ಲಿ ಅದಿತಿ ಸಹ ಆಂಧ್ರದ ಹುಡುಗಿ ಜ್ಯೋತಿ ಸುರೇಖಾ ವಿರುದ್ಧ ಗೆದ್ದು ಫೈನಲ್ ತಲುಪಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.

ಈ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ : ಬಿ.ಎನ್. ಚಂದ್ರಪ್ಪ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕ್ಷೇತ್ರದ ಹದಿನೆಂಟುವರೆ ಲಕ್ಷ ಮತದಾರರು ಶುಕ್ರವಾರ ನಡೆದ ಚುನಾವಣೆಯಲ್ಲಿ ನನ್ನ ಭವಿಷ್ಯ ನಿರ್ಣಯಿಸುತ್ತಾರೆ.

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

error: Content is protected !!