Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅದ್ಯಾವ ಮುಖ ಇಟ್ಟುಕೊಂಡು ಬೆಂಗಳೂರಿಗೆ ಬರುತ್ತಿದ್ದೀರಿ? : ನಿತಿನ್ ಗಡ್ಕರಿ ಪ್ರಶ್ನಿಸಿದ ಜೆಡಿಎಸ್

Facebook
Twitter
Telegram
WhatsApp

ಬೆಂಗಳೂರು: 40% ಕಮಿಷನ್ ಸರ್ಕಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬರುತ್ತಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ @nitin_gadkari ಅವರಿಗೆ ಸ್ವಾಗತ! ಪ್ರಧಾನಿ @narendramodi ಬಂದಾಗ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಅಭಿವೃದ್ಧಿ ಪಡಿಸಿದ್ದ ರಸ್ತೆ ಕಿತ್ತು ಹೋದ ಸಂಗತಿ ರಾಜ್ಯದ ಜನತೆಗೆ ಗೊತ್ತಿದೆ. ಇಂತಹ ಲಜ್ಜೆಗೆಟ್ಟ ಸರ್ಕಾರಕ್ಕೆ, ಅದೇ ಪಕ್ಷದ ರಸ್ತೆ ಸಾರಿಗೆ ಹಾಗೂ ಹೆದ್ದಾರಿಯ ಕೇಂದ್ರ ಸಚಿವರಾಗಿರುವ ತಾವು ಯಾವ ಸಲಹೆ ಕೊಡಲು ಬಯಸುತ್ತೀರಿ? ಎಂದು ಟ್ವೀಟ್ ಮಾಡುವ ಮೂಲಕ ಪ್ರಶ್ನೆ ಕೇಳಿದೆ.

ಬೆಂಗಳೂರು-ಮೈಸೂರು ದಶಪಥ ಮುಖ್ಯ ಹೆದ್ದಾರಿಯು ಮಳೆಯ ಕಾರಣದಿಂದ ಜಲಾವೃತಗೊಂಡಾಗ ಜನರ ಸಂಕಷ್ಟ ಆಲಿಸಲು ಬಾರದ ಕೇಂದ್ರ ಸಚಿವರೆ, ಅದ್ಯಾವ ಮುಖ ಇಟ್ಟುಕೊಂಡು ಬೆಂಗಳೂರಿಗೆ ಬರುತ್ತಿದ್ದೀರಿ? ಈಗ ಅದೇ ರಸ್ತೆ ಕಾಮಗಾರಿಯ ವೈಮಾನಿಕ ಸಮೀಕ್ಷೆ ಮಾಡಲು ಬಂದಿರುವ ತಮಗೆ ಅಲ್ಲಿನ ಅಸಮರ್ಪಕತೆ ವಿಷಯಗಳು ತಿಳಿದಿಲ್ಲವೆ?

ಸುರಕ್ಷತೆಗಿಂತ ಅಸುರಕ್ಷತೆಯೇ ಹೆಚ್ಚಾಗಿರುವ ಈ ರಸ್ತೆಯಲ್ಲಿ ಸಿಸಿಟಿವಿಗಳು ಯಾಕೆ ಅಳವಡಿಕೆಯಾಗಿಲ್ಲ? ಇವೇ ಕಾರಣಗಳಿಂದ ಸಂಭವಿಸಿರುವ ಹತ್ತಾರು ಅಪಘಾತಗಳಿಗೆ ಯಾರು ಜವಾಬ್ದಾರರು? ಅಪಘಾತ ತಡೆ ಸಂಬಂಧ ಪೆಟ್ರೋಲಿಂಗ್ ಯಾಕೆ ಇನ್ನೂ ಆರಂಭವಾಗಿಲ್ಲ? ಸರ್ವೀಸ್ ರಸ್ತೆಯಲ್ಲಿ ವೇಗ ಮಿತಿಗಾಗಿ ವೈಜ್ಞಾನಿಕವಾಗಿ ಹಂಪ್ ಗಳನ್ನು ನಿರ್ಮಿಸಿಲ್ಲ?

ಇದೇ ದಶಪಥ ರಸ್ತೆಯ ಭೂಸ್ವಾಧೀನ ಪ್ರಕ್ರಿಯೆಗೆ ಅಂದಿನ ಮುಖ್ಯಮಂತ್ರಿಗಳಾಗಿದ್ದ @hd_kumaraswamy ಅವರು ಮಾಡಿದ ಸಭೆಗಳು, ನೀಡಿದ ನೆರವು ಮರೆತುಬಿಟ್ರಾ? ಇದೆಲ್ಲ ಹೋಗಲಿ, ನೀವು ಮಾಡಿರುವ ಕೆಲಸವಾದರೂ ನೆಟ್ಟಗಿದೆಯಾ?.

ಬಿಜೆಪಿ ಆಡಳಿತ ಬಂದ ನಂತರ ಈ ಯೋಜನೆಗೆ ಅವೈಜ್ಞಾನಿಕವಾಗಿ ಭೂಸ್ವಾಧೀನ ಪಡಿಸಿಕೊಂಡು ಲೂಟಿ ಹೊಡೆದ ವಿಷಯಗಳು ತಮಗೆ ತಿಳಿದಿಲ್ಲವೇ, @nitin_gadkari ಅವರೆ? ಅಥವಾ 40% ಕಮಿಷನ್ ಹೊಡೆಯುವ ದಂಧೆಯಲ್ಲಿ ನಿರತರಾಗಿರುವ ನಿಮ್ಮದೇ ರಾಜ್ಯ ಸರ್ಕಾರದಿಂದ ತಮಗೂ ಏನಾದರೂ ಪಾಲು ಸಿಕ್ಕಿದೆಯಾ?

ಈ ರಸ್ತೆಯ ಕಾಮಗಾರಿಗೆ ಸಂಬಂಧಿಸಿದ ಮಹತ್ವದ ಕಾರ್ಯಗಳಿಗೆ ಅನುಕೂಲವಾಗುವ ಹಲವು ನಿರ್ಧಾಗಳನ್ನು ತೆಗೆದುಕೊಂಡಿದ್ದು ಅಂದಿನ ಮುಖ್ಯಮಂತ್ರಿ @hd_kumaraswamy ಅವರು. ವೈಮಾನಿನ ಸಮೀಕ್ಷೆಗೆ ಬಂದಿರುವ ಗಡ್ಕರಿ ಅವರೆ, ಈ ರಸ್ತೆ ಕಾಮಗಾರಿಯಲ್ಲಿ ನಡೆದ ಅಕ್ರಮದ ಬಗ್ಗೆ ತುಟಿ ಬಿಚ್ಚುತ್ತೀರೋ? ಎಂದು ಸರಣಿ ಪ್ರಶ್ನೆಗಳನ್ನು ಕೇಳಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!