ನಿಮಗೆ ನಮಾಜ್ ಮಾಡಲು ಅವಕಾಶ ಕೊಟ್ಟಿಲ್ಲವಾ..? : ಮಸೀದಿ ಪರ ವಕೀಲನಿಗೆ ಸುಪ್ರೀಂ ಪ್ರಶ್ನೆ

ನವದೆಹಲಿ: ಜ್ಞಾನವ್ಯಾಪಿ ಮಸೀದಿ ಸರ್ವೆ ಪ್ರಶ್ನಿಸಿ ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದ್ದು, ಇಂದು ಕೂಡ ಅರ್ಜಿಯ ವಿಚಾರಣೆ ನಡೆದಿದೆ. ಈ ವೇಳೆ ಮಸೀದಿ ಪರ ವಕೀಲರಿಗೆ ಸುಪ್ರೀಂ ಕೋರ್ಟ್ ಒಂದಷ್ಟು ಪ್ರಶ್ನೆಗಳನ್ನು ಕೇಳಿದೆ. ಇವು ಸಂಕೀರ್ಣವಾದ ಸಾಮಾಜಿಕ ಸಮಸ್ಯೆಗಳು ಎಂದು ಸುಪ್ರೀಂ ತಿಳಿಸಿದೆ.

ಮಾನವನ ಯಾವುದೇ ಪರಿಹಾರ ಪರಿಪೂರ್ಣವಾಗುವುದಿಲ್ಲ. ಆದರೆ ಶಾಂತಿ ಕಾಪಾಡಿಕೊಳ್ಳುವುದು ನಮ್ಮ ಆದೇಶವಾಗಿದೆ. ಮಧ್ಯಂತರ ಆದೇಶ ಸದ್ಯಕ್ಕೆ ನೋವು ಕಡಿಮೆ ಮಾಡಬಹುದು ಎಂದಿರುವ ಸುಪ್ರೀಂ ಮಸೀದಿ ಸರ್ವೆ ವರ್ಷದ ದಿ ಸೋರಿಕೆಯಾಗಿರುವುದಕ್ಕೆ ಗರಂ ಆಗಿದೆ.

ಈ ಬಗ್ಗೆ ಎಚ್ಚರಿಕೆ ನೀಡಿದ್ದು, ಯಾವುದೇ ಕಾರಣಕ್ಕೂ ವರದಿ ಸೋರಿಕೆಯಾಗಬಾರದು. ಆಯೋಗದ ಸರ್ವೆ ವರದಿ ಕೋರ್ಟ್ ಗೆ ಮಾತ್ರ ಸಲ್ಲಿಕೆಯಾಗಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾ. ಡಿ ವೈ ಚಂದ್ರಚೂಡ್ ನಿರ್ದೇಶನ ಮಾಡಿದ್ದಾರೆ.

ಇದೇ ವೇಳೆ ಮಸೀದಿ ಪರ ವಕೀಲ ವಾದ ಮಾಡಿದ್ದು, ಮಸೀದಿ ಒಳಗೆ ನಮಗೆ ಮಿತಿಗಳನ್ನು ಹೇರಿದ್ದಾರೆ ಎಂದಾಗ ಸುಪ್ರೀಂ ಕೋರ್ಟ್ ನಿಮಗೆ ನಮಾಜ್ ಗೆ ಅವಕಾಶ ಮಾಡಿಕೊಡಲಾಗಿದೆ ತಾನೆ ಎಂದು ಕೋರ್ಟ್ ಪ್ರಶ್ನಿಸಿದೆ. ಇದಕ್ಕೆ ಮಸೀದಿ ಪರ ವಾದ ಮಾಡಿದ ವಕೀಲ, ನಮಾಜ್ ಗೆ ಅವಕಾಶ ನೀಡಲಾಗಿದೆ. ಆದರೆ ವುಜು ಪ್ರದೇಶವನ್ನು ಸೀಲ್ ಮಾಡಲಾಗಿದೆ. ನಮಾಜ್ ಗಾಗಿ ಉಪಯೋಗಿಸುವ ಒಂದು ಕೊಳ ಅದು. ವುಜು ಕೊಳವನ್ನು ಸೀಲ್ ಮಾಡಲಾಗಿದೆ. ವುಜು ಸ್ಥಳಕ್ಕೆ ಕಬ್ಬಿಣದ ಗೇಟ್ ಗಳನ್ನು ಹಾಕಿದ್ದಾರೆಂದು ವಕೀಲ ಅಹ್ಮದಿ ವಾದ ಮಾಡಿದ್ದಾರೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

3 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

4 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago