Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಬ್ಬಕ್ಕೆ ಊರಿಗೆ ಹೋಗುವ ಪ್ಲ್ಯಾನ್ ಇದೆಯಾ? KSRTC ಟಿಕೆಟ್ ಬುಕ್ಕಿಂಗ್‌ನಲ್ಲಿ ಸಿಗಲಿದೆ ಭರ್ಜರಿ ರಿಯಾಯಿತಿ

---Advertisement---

ಓಣಂ ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ತೆರಳುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಸಿಹಿಸುದ್ದಿ ನೀಡಿದೆ. ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಆಗಸ್ಟ್ 20ರಿಂದ 26ರವರೆಗೆ ಬೆಂಗಳೂರಿನಿಂದ ಕೇರಳದ ವಿವಿಧ ನಗರಗಳಿಗೆ 90 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಿಸಲು KSRTC ನಿರ್ಧರಿಸಿದೆ.ಓಣಂ ಹಬ್ಬಕ್ಕಾಗಿ ಬೆಂಗಳೂರಿನಿಂದ ಕೇರಳಕ್ಕೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ವಿಶೇಷ ಬಸ್‌ಗಳ ಜೊತೆಗೆ ಟಿಕೆಟ್ ಬುಕ್ಕಿಂಗ್‌ನಲ್ಲೂ ರಿಯಾಯಿತಿ ನೀಡಲಾಗಿದೆ.

ಒಂದೇ ಬಾರಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಮಂದಿ ಪ್ರಯಾಣಿಕರು ಟಿಕೆಟ್ ಕಾಯ್ದಿರಿಸಿದರೆ ಶೇ.5ರಷ್ಟು ರಿಯಾಯಿತಿ ಪಡೆಯಬಹುದು. ಅದೇ ರೀತಿ, ಹೋಗುವ ಮತ್ತು ಹಿಂದಿರುಗುವ ಪ್ರಯಾಣಕ್ಕೆ ಒಟ್ಟಿಗೆ ಟಿಕೆಟ್ ಬುಕ್ ಮಾಡಿದರೆ ರಿಟರ್ನ್ ಜರ್ನಿಗೆ ಶೇ.10ರಷ್ಟು ರಿಯಾಯಿತಿ ಲಭ್ಯವಾಗಲಿದೆ.ಬೆಂಗಳೂರಿನ ಮೈಸೂರು ರಸ್ತೆ ಹಾಗೂ ಶಾಂತಿನಗರ ನಿಲ್ದಾಣಗಳಿಂದ ಕೇರಳದ ಕಣ್ಣೂರು, ಕೋಯಿಕ್ಕೋಡ್, ಎರ್ನಾಕುಲಂ, ಪಾಲಕ್ಕಾಡ್, ತ್ರಿಶೂರ್, ಕೊಟ್ಟಾಯಂ ಹಾಗೂ ತಿರುವನಂತಪುರ ಸೇರಿದಂತೆ ಪ್ರಮುಖ ನಗರಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ.

ಓಣಂ ಹಬ್ಬದ ಬಳಿಕ ಆಗಸ್ಟ್ 30ರಂದು ಕೇರಳದಿಂದ ಬೆಂಗಳೂರಿಗೆ ಪ್ರಯಾಣಿಸುವವರಿಗಾಗಿ ವಿಶೇಷ ಬಸ್‌ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ.ಪ್ರಯಾಣಿಕರು ಆನ್‌ಲೈನ್ ಮೂಲಕ ಅಥವಾ ಕೇರಳ ಸೇರಿದಂತೆ ನೆರೆ ರಾಜ್ಯಗಳ ಪ್ರಮುಖ ನಗರಗಳಲ್ಲಿರುವ KSRTC ಮುಂಗಡ ಟಿಕೆಟ್ ಕೌಂಟರ್‌ಗಳಲ್ಲಿ ಟಿಕೆಟ್ ಕಾಯ್ದಿರಿಸಬಹುದಾಗಿದೆ.ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಮುಂಗಡವಾಗಿ ಟಿಕೆಟ್ ಕಾಯ್ದಿರಿಸುವಂತೆ ಸಾರಿಗೆ ಸಂಸ್ಥೆ ಸೂಚಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now