Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಸಿವಿನಿಂದ ಸಾವನ್ನಪ್ಪಿರುವವರ ವರದಿ ಬೇಕು : ಸರ್ಕಾರಕ್ಕೆ ಸುಪ್ರೀಂ ತರಾಟೆ..!

Facebook
Twitter
Telegram
WhatsApp

ನವದೆಹಲಿ: ದೇಶವನ್ನ ಹಸಿವು ಮುಕ್ತ ಮಾಡಬೇಕು ಅನ್ನೋದೆ ಎಲ್ಲರ ಆಸೆ. ಆದ್ರೆ ಅದು ಸಾಧ್ಯವಾಗಿದೆಯಾ..? ಸುಪ್ರೀಂ ಕೋರ್ಟ್ ಗೆ ಕೂಡ ಈ ಅನುಮಾನ ದಟ್ಟವಾಗಿದೆ. ಹೀಗಾಗಿಯೇ ಈ ಬಗ್ಗೆ ಸರ್ಕಾರಕ್ಕೆ ವರದಿ ಕೇಳಿದೆ.

2015-16 ರಲ್ಲಿ ಹಸಿವಿನಿಂದ ಸಾವನ್ನಪ್ಪಿರುವವರ ವರದಿಯನ್ನು ನೀಡದಿರುವ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಸಿಜೆಐ ಎನ್ ವಿ ರಮಣ ಅವರ ನೇತೃತ್ವದಲ್ಲಿ, ದೇಶದಲ್ಲಿ ಹಸಿವಿನಿಂದ ಸಾವನ್ನಪ್ಪಿದವರ ಇತ್ತೀಚಿನ ದತ್ತಾಂಶವನ್ನ ಒದಗಿಸಿ ಎಂದು ಕೇಳಿದೆ.

ದೇಶದಲ್ಲಿ ಹಸಿವಿನಿಂದ ಸಾವು ಸಂಭವಿಸಿಲ್ಲ ಎಂದು ನೀವೂ ಹೇಳುತ್ತೀರಾ..? ನಾವೂ ಆ ಹೇಳಿಕೆಯನ್ನು ನಂಬಬಹುದೇ..? ಹಸಿವಿನಿಂದ ಸಾವನ್ನಪ್ಪಿರುವ ವರದಿಯನ್ನ ರಾಜ್ಯ ಸರ್ಕಾರಗಳು ಕೂಡ ಮಾಡಿಲ್ಲ. ಜನರು ಹಸಿವಿನಿಂದ ಬಳಲಬಾರದು, ಸಾಯಬಾರದು ಎಂಬುದು ನಮ್ಮ ಉದ್ದೇಶ. ನೋಡಲ್ ಯೋಜನೆಯನ್ನು ರೂಪಿಸಲು ನೀವೂ ನಿಮ್ಮ ಅಧಿಕಾರಿಗಳೊಂದಿಗೆ ಚರ್ಚಿಸಬೇಕು.‌ ಪರಿಹಾರದ ಮಾರ್ಗವನ್ನ ಗುರುತಿಸಬೇಕಾಗಿದೆ ಎಂದು ಕೋರ್ಟ್ ಸಲಹೆ ನೀಡಿದೆ.

ವಿಚಾರಣೆಯ ಬಳಿಕ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಎರಡು ವಾರಗಳಿಗೆ ಮುಂದೂಡಿಕೆ ಮಾಡಿದೆ. ಅಲ್ಲಿಯವರೆಗೂ ಅಪೌಷ್ಟಿಕತೆ, ಹಸಿವು ಮತ್ತು ಇತರ ವಿಷಯಗಳು ಕುರಿತು ರಾಜ್ಯಗಳು ಹೆಚ್ಚುವರಿ ಅಫಿಡವಿಟ್‌ಗಳನ್ನು ಸಲ್ಲಿಸಬಹುದು ಎಂದು ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!