Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ಅಡಿಕೆ ಬೆಳೆಗಾರರಲ್ಲಿ ಸಂತಸ : ಏರಿದ ದರ, ಎಷ್ಟಿದೆ ಇಂದು..?

---Advertisement---

ದಾವಣಗೆರೆ ; ಬೇಸಿಗೆ ಹೆಚ್ಚಾಗಿದೆ. ಈ ಬೇಸಿಗೆಯಲ್ಲಿ ಅಡಿಕೆ ಗಿಡಗಳನ್ನ ಆರೋಗ್ಯವಾಗಿ ಇರುವಂತೆ ಕಾಪಾಡಿಕೊಳ್ಳುವುದೇ ಸಾಹಸದ ಕೆಲಸವಾಗಿರುತ್ತದೆ. ನೀರನ್ನ ಒದಗಿಸಿ, ಅಚ್ಚುಕಟ್ಟಾಗಿ ನೋಡಿಕೊಳ್ಳಬೇಕಾಗುತ್ತದೆ. ಇಂಥಹ ಸಮಯದಲ್ಲಿ ಅಡಿಕೆಯ ಬೆಲೆ ಏನಾದರೂ ಕಡಿಮೆಯಾಗಿ ಬಿಟ್ಟರೆ ರೈತರ ಬೇಸರವಂತು ಹೆಚ್ಚಾಗುತ್ತದೆ. ಇಂದು ದಾವಣಗೆರೆ ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆಯಾಗಿದೆ. ಗರಿಷ್ಠ ಬೆಲೆ 52,300 ರೂಪಾಯಿ ಆಗಿದೆ. ಹಾಗಾದ್ರೆ ಎಷ್ಟಕ್ಕೆ ಹೋಯ್ತು ಅನ್ನೋದರ ಮಾಹಿತಿ ಇಲ್ಲಿದೆ.

ಚನ್ನಗಿರಿ ರಾಶಿ ಅಡಿಕೆಯೂ ಪ್ರತಿ ಕ್ವಿಂಟಾಲ್ ಗೆ ಗರಿಷ್ಠ ಬೆಲೆ 52,300, ಕನಿಷ್ಠ ಬೆಲೆ 32,012, ಹಾಗೇ ಸರಾಸರಿ ಬೆಲೆ 49,669
ಬೆಟ್ಟೆ ಅಡಿಕೆ ದರ ಗರಿಷ್ಠ ಬೆಲೆ 25,287, ಕನಿಷ್ಠ ಬೆಲೆ 23,786, ಸರಾಸರಿ ಬೆಲೆ 24,536 ಇದೆ. ಸದ್ಯ ಅಡಿಕೆಯ ದರ ಏರಿಕೆಯಾಗುತ್ತಿರುವುದು ಅಡಿಕೆ ಬೆಳೆಗಾರರಲ್ಲಿ ಸಂತಸ ತಂದಿದೆ. ಜನವರಿ ಕೊನೆಯಲ್ಲಂತು 52 ಸಾವಿರಕ್ಕೆ ಬಂದು ನಿಂತಿತ್ತು. ಇನ್ನೆಲ್ಲಿ ಅಡಿಕೆ ಹೀಗೆ ಕಡಿಮೆಯಾಗಿ ಬಿಡುತ್ತದೋ ಎಂಬ ಆತಂಕ ರೈತರನ್ನು ಕಾಡಿತ್ತು. ಸದ್ಯ ಅಡಿಕೆಯ ಬೆಲೆ ಏರಿಕೆಯತ್ತ ಮುಖ ಮಾಡಿದೆ. ಈ ಮೂಲಕ ಫೆಬ್ರವರಿಯಲ್ಲಿ ಮತ್ತೆ 53 ಸಾವಿರ ರೂಪಾಯಿ ಗಡಿ ದಾಟಿತ್ತು. ಆದ್ರೆ ಕಳೆದ ವರ್ಷವೇ 55 ಸಾವಿರದ ತನಕ ಅಡಿಕೆ ಬೆಲೆ ರೀಚ್ ಆಗಿತ್ತು. 2023ರ ಜುಲೈನಲ್ಲಿ ಗರಿಷ್ಠ ಬೆಲೆ 57 ಸಾವಿರ ಗಡಿ ದಾಟಿತ್ತು. 2024ರ ಮೇ ತಿಂಗಳಲ್ಲಿ 55 ಸಾವಿರದ ಗಡಿ ದಾಟಿತ್ತು. ಮತ್ತೆ ಆ ದಿನಗಳು ಬರುತ್ತವೆ ಎಂಬ ನಿರೀಕ್ಷೆ ಎಲ್ಲಾ ರೈತರಿಗೂ ಇದೆ. ಹೀಗಾಗಿಯೇ ಅಡಿಕೆಯ ಫಸಲನ್ನ ಗಮನವಿಟ್ಟು, ಕಾಳಜಿಯಿಂದ ಕಾಪಾಡಿಕೊಳ್ಳುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment