ದಾವಣಗೆರೆ ಅಡಿಕೆ ಬೆಳೆಗಾರರಲ್ಲಿ ಸಂತಸ : ಏರಿದ ದರ, ಎಷ್ಟಿದೆ ಇಂದು..?

ದಾವಣಗೆರೆ ; ಬೇಸಿಗೆ ಹೆಚ್ಚಾಗಿದೆ. ಈ ಬೇಸಿಗೆಯಲ್ಲಿ ಅಡಿಕೆ ಗಿಡಗಳನ್ನ ಆರೋಗ್ಯವಾಗಿ ಇರುವಂತೆ ಕಾಪಾಡಿಕೊಳ್ಳುವುದೇ ಸಾಹಸದ ಕೆಲಸವಾಗಿರುತ್ತದೆ. ನೀರನ್ನ ಒದಗಿಸಿ, ಅಚ್ಚುಕಟ್ಟಾಗಿ ನೋಡಿಕೊಳ್ಳಬೇಕಾಗುತ್ತದೆ. ಇಂಥಹ ಸಮಯದಲ್ಲಿ ಅಡಿಕೆಯ ಬೆಲೆ ಏನಾದರೂ ಕಡಿಮೆಯಾಗಿ ಬಿಟ್ಟರೆ ರೈತರ ಬೇಸರವಂತು ಹೆಚ್ಚಾಗುತ್ತದೆ. ಇಂದು ದಾವಣಗೆರೆ ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆಯಾಗಿದೆ. ಗರಿಷ್ಠ ಬೆಲೆ 52,300 ರೂಪಾಯಿ ಆಗಿದೆ. ಹಾಗಾದ್ರೆ ಎಷ್ಟಕ್ಕೆ ಹೋಯ್ತು ಅನ್ನೋದರ ಮಾಹಿತಿ ಇಲ್ಲಿದೆ.

ಚನ್ನಗಿರಿ ರಾಶಿ ಅಡಿಕೆಯೂ ಪ್ರತಿ ಕ್ವಿಂಟಾಲ್ ಗೆ ಗರಿಷ್ಠ ಬೆಲೆ 52,300, ಕನಿಷ್ಠ ಬೆಲೆ 32,012, ಹಾಗೇ ಸರಾಸರಿ ಬೆಲೆ 49,669
ಬೆಟ್ಟೆ ಅಡಿಕೆ ದರ ಗರಿಷ್ಠ ಬೆಲೆ 25,287, ಕನಿಷ್ಠ ಬೆಲೆ 23,786, ಸರಾಸರಿ ಬೆಲೆ 24,536 ಇದೆ. ಸದ್ಯ ಅಡಿಕೆಯ ದರ ಏರಿಕೆಯಾಗುತ್ತಿರುವುದು ಅಡಿಕೆ ಬೆಳೆಗಾರರಲ್ಲಿ ಸಂತಸ ತಂದಿದೆ. ಜನವರಿ ಕೊನೆಯಲ್ಲಂತು 52 ಸಾವಿರಕ್ಕೆ ಬಂದು ನಿಂತಿತ್ತು. ಇನ್ನೆಲ್ಲಿ ಅಡಿಕೆ ಹೀಗೆ ಕಡಿಮೆಯಾಗಿ ಬಿಡುತ್ತದೋ ಎಂಬ ಆತಂಕ ರೈತರನ್ನು ಕಾಡಿತ್ತು. ಸದ್ಯ ಅಡಿಕೆಯ ಬೆಲೆ ಏರಿಕೆಯತ್ತ ಮುಖ ಮಾಡಿದೆ. ಈ ಮೂಲಕ ಫೆಬ್ರವರಿಯಲ್ಲಿ ಮತ್ತೆ 53 ಸಾವಿರ ರೂಪಾಯಿ ಗಡಿ ದಾಟಿತ್ತು. ಆದ್ರೆ ಕಳೆದ ವರ್ಷವೇ 55 ಸಾವಿರದ ತನಕ ಅಡಿಕೆ ಬೆಲೆ ರೀಚ್ ಆಗಿತ್ತು. 2023ರ ಜುಲೈನಲ್ಲಿ ಗರಿಷ್ಠ ಬೆಲೆ 57 ಸಾವಿರ ಗಡಿ ದಾಟಿತ್ತು. 2024ರ ಮೇ ತಿಂಗಳಲ್ಲಿ 55 ಸಾವಿರದ ಗಡಿ ದಾಟಿತ್ತು. ಮತ್ತೆ ಆ ದಿನಗಳು ಬರುತ್ತವೆ ಎಂಬ ನಿರೀಕ್ಷೆ ಎಲ್ಲಾ ರೈತರಿಗೂ ಇದೆ. ಹೀಗಾಗಿಯೇ ಅಡಿಕೆಯ ಫಸಲನ್ನ ಗಮನವಿಟ್ಟು, ಕಾಳಜಿಯಿಂದ ಕಾಪಾಡಿಕೊಳ್ಳುತ್ತಿದ್ದಾರೆ.

suddionenews

Recent Posts

ಸೋಮಶೇಖರ್, ಶಿವರಾಮ್ ಹೆಬ್ಬಾರ್ ಬಿಜೆಪಿಯಿಂದ ಉಚ್ಚಾಟನೆಗೊಳ್ಳುತ್ತಾರಾ..?

ಹುಬ್ಬಳ್ಳಿ; ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಬಿಜೆಪಿ ಪಕ್ಷದಲ್ಲಿಯೇ ಇದ್ರು ಕೂಡ ಕಾಂಗ್ರೆಸ್ ಪಕ್ಷದ ನಾಯಕರ ಜೊತೆಗೆ…

24 minutes ago

ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ರೇಟ್ ಎಷ್ಟಿದೆ ?

  ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 15 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಶನಿವಾರ, ಮಾರ್ಚ್. 15 ) ಹತ್ತಿ ಮಾರುಕಟ್ಟೆ…

2 hours ago

ಚಿತ್ರದುರ್ಗ ಪಿಎಸ್ಐ ಮೇಲೆ ಬಿಜೆಪಿ ನಾಯಕನಿಂದ ಹಲ್ಲೆ ಆರೋಪ

  ಚಿತ್ರದುರ್ಗ; ನಗರ ಠಾಣೆ ಪಿಎಸ್ಐ ಗಾದಿಲಿಂಗಪ್ಪ ಮೇಲೆ ತುಮಕೂರು ಜಿಲ್ಲೆಯ ಮಧುಗಿರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ…

3 hours ago

ರುದ್ರಪ್ಪ ಲಮಾಣಿ ದಿಢೀರನೇ ಬೆಂಗಳೂರಿಗೆ ಶಿಫ್ಟ್

  ಬೆಂಗಳೂರು; ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಈಗಾಗಲೇ…

3 hours ago

ಈ ರಾಶಿಯವರು ವ್ಯಾಪಾರ ವೈಹಿವಾಟಗಳಲ್ಲಿ ಮುನ್ನಡೆ ಸಾಧಿಸಲಿದ್ದಾರೆ

ಈ ರಾಶಿಯವರು ವ್ಯಾಪಾರ ವೈಹಿವಾಟಗಳಲ್ಲಿ ಮುನ್ನಡೆ ಸಾಧಿಸಲಿದ್ದಾರೆ, ಈ ರಾಶಿಯವರು ಸೋಲಿಲ್ಲದ ಸರದಾರನಾಗಿ ಮುಟ್ಟಿದ್ದೆಲ್ಲ ಚಿನ್ನ. ಶನಿವಾರದ ರಾಶಿ ಭವಿಷ್ಯ…

10 hours ago

ಹಿರಿಯೂರು ಬಳಿ ಉಪ ಸಭಾಪತಿಗೆ ಬೈಕ್ ಡಿಕ್ಕಿ : ಪ್ರಾಣಾಪಾಯದಿಂದ ಪಾರು

ಸುದ್ದಿಒನ್, ಹಿರಿಯೂರು, ಮಾರ್ಚ್. 14 : ತಾಲ್ಲೂಕಿನ ಜವಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿಯವರು…

19 hours ago