Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಮಾಜಿ ಸಚಿವ ಹಾಗೂ ಮಾದಿಗ ಸಮುದಾಯದ ಮುಖಂಡರ ನಡುವೆ ವಾಗ್ವಾದ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.18 :
ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಯುತ್ತಿದ್ದ ವೇಳೆ ಮಾದಿಗ ಸಮಾಜದ ಮುಖಂಡರು ಮಾಜಿ ಸಚಿವ ಗೋವಿಂದ ಕಾರಜೋಳ ಅವರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಸರ್ಕಾರದ ವೈಫಲ್ಯದ ಕುರಿತು ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದರು. ಈ ವೇಳೆ ಏಕಾಏಕಿ ಒಳ ನುಗ್ಗಿದ ಭ್ರಷ್ಠಾಚಾರ ನಿರ್ಮೂಲನ ಸಮಿತಿ ಹಾಗೂ ಮಾದಿಗ ಹೋರಾಟ ಸಮಿತಿ ಮುಖಂಡರು ಗೋವಿಂದ ಕಾರಜೋಳ  ಅವರನ್ನು ತರಾಟೆಗೆ ತೆಗೆದುಕೊಂಡಿದ್ದು ದಲಿತರಿಗೆ ಬಿಜೆಪಿ ಹಾಗೂ ಮಾಜಿ ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಅವರಿಂದ ಅನ್ಯಾಯವಾಗಿದೆ ಎಂದು ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲದೆ ಪತ್ರಿಕಾ ಗೋಷ್ಠಿ ಮಧ್ಯೆಯೇ ಮಾಜಿ ಸಚಿವ ಗೋವಿಂದ ಕಾರಜೋಳ ಮತ್ತು ಮುಖಂಡರ ನಡುವೆ ವಾಗ್ವಾದ ಸಹ ನಡೆದಿದ್ದು ಮೊದಲು ಹೊರಗೆ ಹೋಗುವಂತೆ ಗೋವಿಂದ ಕಾರಜೋಳ ಬೈದು ರೇಗಾಡಿದ್ದು ನಿಮಗೆ ಅನ್ಯಾಯವಾಗಿದ್ದರೆ ಆಮೇಲೆ ಬಂದು ಕೇಳಿ ಎಂದು ಹೇಳಿದ ಬೈದು ಕಳುಹಿಸಿದ್ದಾರೆ.

ಅಷ್ಟೇ ಅಲ್ಲದೆ ಗೂಂಡಾಗಿರಿ ಮಾಡುತ್ತಿದ್ದೀರಾ ಎಂದು ಕೂಗಾಡಿದ ಗೋವಿಂದ ಕಾರಜೋಳ ಅವರು ಇಂದೊಂದು ಗೂಂಡಾ ರಾಜ್ಯವಾಗಿದ್ದು ಸಿದ್ದರಾಮಯ್ಯ ಅವರು ಕೂಡಲೇ ಗಲಾಟೆ ಮಾಡಿದವರನ್ನು ಸಂಜೆಯೊಳಗೆ ಬಂಧಿಸಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದು ಈ ಬಗ್ಗೆ ಡಿಜಿಪಿಗೂ ಸಹ ಸ್ಥಳದಲ್ಲೆ ಕರೆ ಮಾಡಿದ ಗೋವಿಂದ ಕಾರಜೋಳ ಅವರು ನಿಮ್ಮ ಎಸ್ಪಿ ಅವರು ಕರೆ ಸ್ಬೀಕರಿಸುತ್ತಿಲ್ಲ ಪತ್ರಿಕಾಗೋಷ್ಠಿ ವೇಳೆ ಗೂಂಡಾಗಳು ದಾಂದಲೆ ಮಾಡಿದ್ದಾರೆ ಹಾಗಾಗಿ ಈ ಕೂಡಲೇ ದಾಂದಲೆ ಮಾಡಿದವರನ್ನ ಬಂದಿಸಬೇಕು ಇಲ್ಲದಿದ್ದಲ್ಲಿ ಡಿಸಿ ಕಚೇರಿ ಬಳಿ ನಾನು ಧರಣಿ ಕೂರುತ್ತೇನೆ ಎಂದು ಡಿಜಿಪಿಗೆ  ಗೋವಿಂದ ಕಾರಜೋಳ ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!