Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ ಜೊತೆಗೆ ವಾಗ್ವಾದ : ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಹೆಸರು ಪ್ರಸ್ತಾಪಿಸಿದ ಬಿಜೆಪಿ ರಾಜ್ಯ ವಕ್ತಾರ..!

---Advertisement---

ಬೆಂಗಳೂರು: ಗೋವಿಂದ ಕಾರಜೋಳ ಅವರ ಮೇಲೆ ಚಿತ್ರದುರ್ಗದಲ್ಲಿ ಮಾತಿನ ಚಕಮಕಿ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ, ಬಿಜೆಪಿ ರಾಜ್ಯ ವಕ್ತಾರ ಮತ್ತು ಮಾಜಿ ಶಾಸಕ ಪಿ ರಾಜೀವ್ ಅವರು ಪ್ರತಿಕ್ರಿಯೆ ನೀಡಿದ್ದು, ಹಲ್ಲೆ‌ ನಡೆಸುವುದಕ್ಕೆ ದುಷ್ಟ ಪ್ರೇರಣೆ ನೀಡಿ, ಒಳ ಸಂಚನ್ನು ಮಾಡಲಾಗಿದೆ. ಇದರ ಹಿಂದೆ ಡಾ. ಹೆಚ್ ಸಿ ಮಹದೇವಪ್ಪ ಹಾಗೂ ಪ್ರಿಯಾಂಕ್ ಖರ್ಗೆ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

ದಲಿತರಿಗೆ ಮೀಸಲಿಟ್ಟ ಹಣವನ್ನು ಈ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ. ಇದು ದಲಿತರಿಗೆ ಅರ್ಥವಾದರೆ ದೊಡ್ಡ ಕ್ರಾಂತಿಯಾಗುವ ಭಯ ಕಾಂಗ್ರೆಸ್ ಸರ್ಕಾರವನ್ನು ಕಾಡುತ್ತಿದೆ. ದಲಿತರಿಗೆ ಈ ವಿಚಾರ ಗೊತ್ತಾಗಬಾರದು, ಯಾರೂ ಈ ವಿಚಾರವನ್ನು ತಿಳಿಸಬಾರದು ಎಂಬ ದುರುದ್ದೇಶದೊಂದಿಗೆ ಕಾಂಗ್ರೆಸ್ ಪಕ್ಷವು ಗೋವಿಂದ ಕಾರಜೋಳರ ಹಲ್ಲೆಗೆ ಪ್ರೇರಣೆ ನೀಡಿದೆ ಎಂದು ಆರೋಪಿಸಿದೆ.

ಗೃಹಜ್ಯೋತಿ ಯೋಜನೆಯಡಿ ಎಸ್‍ಇಪಿಟಿಎಸ್‍ಪಿಯಡಿ 2,400 ಕೋಟಿ ಇಟ್ಟಿದ್ದಾರೆ. ಅದೇರೀತಿ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆಯಡಿ 2,800 ಕೋಟಿ ಇಟ್ಟಿದ್ದಾರೆ. ಈ 2,800 ಕೋಟಿ ಹಣದಲ್ಲಿ ಶೇ 90 ದಲಿತರಿಗೆ ಪ್ರಯೋಜನ ಸಿಗುತ್ತದೆ. ಹಾಗಿದ್ದರೆ 2400 ಕೋಟಿಯನ್ನು ಮತ್ತೆ ಇಟ್ಟಿದ್ಯಾಕೆ. ಇದೆಲ್ಲವೂ ದಲಿತ ಸಮುದಾಯ, ದಲಿತ ಮುಖಂಡರಿಗೆ ತಿಳಿದರೆ ಈ ಸರಕಾರವು ಸುಮಾರು 10 ಸಾವಿರ ಕೋಟಿ ಹಣವನ್ನು ದಲಿತ ಸಮುದಾಯಕ್ಕಾಗಿ ಮತ್ತೆ ಕೊಡಬೇಕಾಗುತ್ತದೆ. ಅದೇ ಭಯ ಸಿದ್ದರಾಮಯ್ಯರನ್ನೂ ಕಾಡುತ್ತಿದೆ. ದಲಿತರು ಜಾಗೃತ ಆಗಬಾರದು. ಈ ಸಂಬಂಧ ತಿಳಿವಳಿಕೆ ಕೊಡುವ ಕೆಲಸವನ್ನು ಮಾಡಬಾರದೆಂಬ ಉದ್ದೇಶದಿಂದ ಭಯ ಹುಟ್ಟಿಸಲು ಮಾಜಿ ಉಪ ಮುಖ್ಯಮಂತ್ರಿಗಳು ಮತ್ತು ದಲಿತ ಸಮುದಾಯದ ದೊಡ್ಡ ನಾಯಕ ಗೋವಿಂದ ಕಾರಜೋಳ ಅವರ ಮೇಲೆ ಹಲ್ಲೆ ಮಾಡಿ, ಆ ಮೂಲಕ ದಲಿತ ಜಾಗೃತ ಮನಸ್ಸುಗಳಿಗೆ ಸಂದೇಶ ಕೊಡಲು ಹೊರಟಿದ್ದರು ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment