Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

Facebook
Twitter
Telegram
WhatsApp

 

ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ.

ಬಿಡುಗಡೆಯಾದ 4 ದಿನಕ್ಕೆ 54 ಕೋಟಿ ಕಲೆಕ್ಷನ್ ಆಗಿದೆ. ನೂರು ಕೋಟಿ ಕಲೆಕ್ಷನ್ ನತ್ತ ಮುನ್ನುಗುತ್ತದೆ ಚಿತ್ರತಂಡ ಹೇಳಿದೆ.

ಬುಕ್ ಮೈ ಶೋನಲ್ಲಿ 24 ಗಂಟೆಗಳಲ್ಲಿ 1,52,000 ಸಾವಿರ ಟಿಕೆಟ್ ಬುಕ್ ಆಗಿದೆ. ಗೋಟ್ ಮತ್ತು ಸ್ತ್ರೀ ಚಿತ್ರಗಳು ಗಿಂತಲೂ ಹೆಚ್ಚು ಬುಕ್ಕಾದ ಭಾರತದಲ್ಲಿ ಮೊದಲ ಸಿನಿಮಾ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ಇದೇ ಚಿತ್ರವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌ ಸಂಸ್ಥೆ ಬಿಡುಗಡೆ ಮಾಡಿದೆ ಬಿಡುಗಡೆಯಾದ ಎಲ್ಲಾ ಚಿತ್ರಮಂದಿರಗಳಲ್ಲು ಹೌಸ್ ಪುಲ್ ಕಲೆಕ್ಷನ್ ಕಾಣುತ್ತಿದೆ.

ಈ ಚಿತ್ರದಲ್ಲಿ ನಟ ಟೊವಿನೋ ಥಾಮಸ್‌ ಮೂರು ಶೇಡ್‌ಗಳಲ್ಲಿ ಅಭಿನಯಿಸಿದ್ದಾರೆ. ತಮಿಳು, ತೆಲುಗು ಮತ್ತು ಚಿತ್ರರಂಗದಲ್ಲಿ ಮೋಡಿ ಮಾಡಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ ಎಆರ್‌ಎಂ ಸಿನಿಮಾದಲ್ಲಿದ್ದಾರೆ.

ಚಿತ್ರದ ಸುತ್ತಲಿನ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ. ಮಹಿಳೆಯೋರ್ವರು ಕಥೆಯನ್ನು ವಿವರಿಸುತ್ತಾರೆ. ಹಿಂಸಾಚಾರ ಮತ್ತು ನಾಯಕನ ಪ್ರವೇಶವನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ. ಎಆರ್​​ಎಂ ಭರ್ಜರಿ ಆ್ಯಕ್ಷನ್​ ಸೀನ್​ಗಳೊಂದಿಗೆ ಅದ್ಭುತ ಸಿನಿಮೀಯ ಅನುಭವ ಚಿತ್ರದಲ್ಲಿಇದೆ.

ಉತ್ತರ ಕೇರಳದ ವಿವಿಧ ಸಮಯಾವಧಿಯಲ್ಲಿನ (1900, 1950 ಮತ್ತು 1990) ನಿರೂಪಣೆಗಳನ್ನು ಒಳಗೊಂಡಿದೆ. ಟೊವಿನೋ ಥಾಮಸ್​​​ ಮೂರು ವಿಭಿನ್ನ ಪಾತ್ರಗಳನ್ನು ಅಭಿನಸಿದ್ದಾರೆ.ಮಣಿಯನ್, ಕುಂಜಿಕ್ಕೆಲು ಮತ್ತು ಅಜಯನ್ ಎಂಬ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭೂಮಿಯ ಸಂಪತ್ತನ್ನು ರಕ್ಷಿಸುವ ಹೋರಾಟವಿದೆ. ಕೇರಳದ ಶ್ರೀಮಂತ ಸಂಸ್ಕೃತಿಯನ್ನು ಪ್ರದರ್ಶಿಸುತ್ತದೆ. ಒಂದು ಬಲವಾದ ಕಥೆಯೊಂದಿಗೆ ದೃಶ್ಯ ಚಮತ್ಕಾರವಿರಲಿದೆ ಎಂಬ ಭರವಸೆ ನೀಡಿದೆ.ಎಆರ್​​ಎಂ​​ ಟೊವಿನೋ ಥಾಮಸ್ ಅವರ 50ನೇ ಚಿತ್ರವಾಗಿದ್ದು, ಟ್ರೇಲರ್​ನಿಂದ ಸಾಕಷ್ಟು ಕುತೂಹಲ ಹುಟ್ಟಿಸಿದೆ‌. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುವ ನಿರೀಕ್ಷೆಯಿದೆ. ಭರ್ಜರಿ ಆ್ಯಕ್ಷನ್ ಸೀಕ್ವೆನ್ಸ್‌ ನಿರ್ವಹಿಸಲು ನಟ ಕಳರಿಪಯಟ್ಟುವಿನ ವ್ಯಾಪಕ ತರಬೇತಿ ಪಡೆದಿದ್ದರು. ಕಾಂತಾರ ಖ್ಯಾತಿಯ ವಿಕ್ರಮ್ ಮೂರ್ ಮತ್ತು ಫೀನಿಕ್ಸ್ ಪ್ರಭು ಸ್ಟಂಟ್ಸ್ ಸಂಯೋಜಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!