Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

LIVE Updates : ಸೇನಾ ಹೆಲಿಕಾಪ್ಟರ್ ಪತನ : ಬಿಪಿನ್ ರಾವತ್ ಸ್ಥಿತಿ ಗಂಭೀರ; 13 ಮಂದಿ ಸಾವು

Facebook
Twitter
Telegram
WhatsApp

ಸುದ್ದಿಒನ್ ನ್ಯೂಸ್ ಡೆಸ್ಕ್ 

ನವದೆಹಲಿ, (ಡಿ.08) : ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಅವರಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತಮಿಳುನಾಡಿನ ಕುನೂರ್ ಬಳಿ ಗುಡ್ಡಗಾಡು ಪ್ರದೇಶದಲ್ಲಿ ನೀಲಗಿರಿ ಜಿಲ್ಲೆಯ ಕೂನೂರು ಬಳಿಯ ಕಟ್ಟೇರಿ-ನಂಚಪ್ಪಂಚತ್ರಂ ಪ್ರದೇಶದಲ್ಲಿ ಹೆಲಿಕಾಪ್ಟರ್ ಬುಧವಾರ ಪತನಗೊಂಡಿದೆ.

ಅಪಘಾತದಲ್ಲಿ 14 ಮಂದಿ ಪೈಕಿ 13 ಮಂದಿ ಸಾವನ್ನಪ್ಪಿದ್ದಾರೆ. ಜನರಲ್ ರಾವತ್ ಪ್ರಸ್ತುತ ವೆಲ್ಲಿಂಗ್ಟನ್‌ನ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೇಕಡಾ 90 ರಷ್ಟು ಸುಟ್ಟಿರುವ ಬಿಪಿನ್ ರಾವತ್ ಅವರಿಗೆ ಮೂವರು ವೈದ್ಯರು ತುರ್ತಾಗಿ ಚಿಕಿತ್ಸೆ ನೀಡುತ್ತಿದ್ದಾರೆ. ಸೇನಾ ಅಧಿಕಾರಿಗಳು ಚಿಕಿತ್ಸೆಯ ವಿವರಗಳನ್ನು ಗೌಪ್ಯವಾಗಿಟ್ಟಿದ್ದಾರೆ. ಅಪಘಾತದಲ್ಲಿ ಪತ್ನಿ ಮಧುಲಿಕಾ ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದಾರೆ. ಮೃತದೇಹಗಳು ಗುರುತು ಸಿಗದ ಸ್ಥಿತಿಯಲ್ಲಿರುವುದರಿಂದ ಡಿಎನ್‌ಎ ಪರೀಕ್ಷೆ ಮೂಲಕ ಗುರುತಿಸಲಾಗುವುದು.

ಪಿಟಿಐ ವರದಿಯ ಪ್ರಕಾರ, ಭಾರೀ ಮಂಜಿನ ಕಾರಣ ಹವಾಮಾನ ವೈಪರೀತ್ಯಗಳಿಂದ ಹೆಲಿಕಾಪ್ಟರ್ ಅರಣ್ಯ ಪ್ರದೇಶದಲ್ಲಿ ಪತನಗೊಂಡಿದೆ ಎಂದು ವರದಿಯಾಗಿದೆ.
ಕೆಲವು ಹಿರಿಯ ಅಧಿಕಾರಿಗಳನ್ನು ಹೊತ್ತ ಹೆಲಿಕಾಪ್ಟರ್ ಕೊಯಮತ್ತೂರಿನ ಸೂಲೂರಿನಿಂದ ವೆಲ್ಲಿಂಗ್‌ಟನ್‌ನ ಡಿಫೆನ್ಸ್ ಸ್ಟಾಫ್ ಕಾಲೇಜಿಗೆ ತೆರಳುತ್ತಿತ್ತು, ಅಲ್ಲಿ ಜನರಲ್ ರಾವತ್, ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಿರ್ಧರಿಸಲಾಗಿತ್ತು. ಅಪಘಾತದ ಕುರಿತು ನ್ಯಾಯಾಲಯದ ವಿಚಾರಣೆಗೆ ಆದೇಶಿಸಲಾಗಿದೆ ಎಂದು ಐಎಎಫ್ ಹೇಳಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!