Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಶ್ರೀಕಾಂತ್ ಪೂಜಾರಿ ಬಂಧನ : ಬಿಜೆಪಿ ಪ್ರತಿಭಟನೆ.. ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ಏನು..?

ಡಿಕೆ ಶಿವಕುಮಾರ್
---Advertisement---

 

ಬೆಂಗಳೂರು: ರಾಮ ಮಂದಿರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿದೆ. ಈ ಸಂಬಂಧ ಬಿಜೆಪಿ ನಾಯಕರು ಗರಂ ಆಗಿದ್ದಾರೆ. ಇಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಪ್ರತಿಭಟನೆ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್, ಪ್ರತಿಕ್ರಿಯೆ ನೀಡಿದ್ದಾರೆ. ಮಾಡಲಿ. ಅವರೆಲ್ಲಾ ಹೋಂ ಮಿನಿಸ್ಟರ್ ಗಳಾಗಿದ್ದಾಗ ಏನು ಮಾಡಿದ್ರು. ಕೇಸರಿ ಬಟ್ಟೆಗಳನ್ನ ಹಾಕಿಕೊಂಡು ಆಫೀಸರ್ಸ್ ಗಳಿಗೆಲ್ಲಾ ನಿಲ್ಲಿಸಿದ್ದರು. ಆ ಕೆಲಸ ನಾವೇನು ಮಾಡುವುದಕ್ಕೆ ಹೋಗಿಲ್ಲ ಎಂದಿದ್ದಾರೆ.

ಹೋಂ ಮಿನಿಸ್ಟರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ನಾವೂ ಯಾರಿಗೂ ತೊಂದರೆ ಕೊಡುವಂತ ಸಂಧರ್ಭ ಇಲ್ಲ. ಪೆಂಡಿಂಗ್ ಇದ್ದಂತ ಪ್ರಕರಣಗಳನ್ನ, ಯಾರ್ಯಾರು ದೇಶಕ್ಕೆ, ರಾಜ್ಯಕ್ಕೆ ಅಗೌರವ ಕೊಡುತ್ತಾ ಇದ್ದಾರೆ, ಅಶಾಂತಿ ಉಂಟು ಮಾಡುವವರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳುತ್ತಾ ಇದ್ದಾರೆ. ಎಲಕ್ಷನ್ ಹತ್ತಿರ ಬಂದಿದೆ. ಏಳು ತಿಂಗಳು ಅವರಿಗೆ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವುದಕ್ಕೆ ಆಗಿರಲಿಲ್ಲ. ಈಗ ಪಾಪ, ನಾವೂ ಬದುಕಿದ್ದೀವಿ ಅಂತ ತೋರಿಸಿಕೊಳ್ಳುವುದಕ್ಕೆ ಏನೋ ಮಾಡುವುದಕ್ಕೆ ಹೊರಟಿದ್ದಾರೆ. ಪಾಪ ತೋರಿಸಿಕೊಳ್ಳಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದಕ್ಕೆಲ್ಲ ಜನರು ಉತ್ತರ ಕೊಡುತ್ತಾರೆ, ನಾವೂ ಉತ್ತರ ಕೊಡುತ್ತೀವಿ.

ನಾವೂ ಯಾರು ಕೂಡ ಅವರ ತರ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿಲ್ಲ. ಹುಬ್ಬಳ್ಳಿಯಲ್ಲಿ ಎಷ್ಟು ಕೇಸ್ ಹಾಕಿದ್ದಾರೆ..?ಅಮಾಯಕರ ಮೇಲೆಲ್ಲ ಕೇಸ್ ಹಾಕಿದ್ದಾರೆ. ಆ ರೀತಿ ನಾವೂ ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...