ಶ್ರೀಕಾಂತ್ ಪೂಜಾರಿ ಬಂಧನ : ಬಿಜೆಪಿ ಪ್ರತಿಭಟನೆ.. ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ಏನು..?

 

ಬೆಂಗಳೂರು: ರಾಮ ಮಂದಿರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿದೆ. ಈ ಸಂಬಂಧ ಬಿಜೆಪಿ ನಾಯಕರು ಗರಂ ಆಗಿದ್ದಾರೆ. ಇಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಪ್ರತಿಭಟನೆ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್, ಪ್ರತಿಕ್ರಿಯೆ ನೀಡಿದ್ದಾರೆ. ಮಾಡಲಿ. ಅವರೆಲ್ಲಾ ಹೋಂ ಮಿನಿಸ್ಟರ್ ಗಳಾಗಿದ್ದಾಗ ಏನು ಮಾಡಿದ್ರು. ಕೇಸರಿ ಬಟ್ಟೆಗಳನ್ನ ಹಾಕಿಕೊಂಡು ಆಫೀಸರ್ಸ್ ಗಳಿಗೆಲ್ಲಾ ನಿಲ್ಲಿಸಿದ್ದರು. ಆ ಕೆಲಸ ನಾವೇನು ಮಾಡುವುದಕ್ಕೆ ಹೋಗಿಲ್ಲ ಎಂದಿದ್ದಾರೆ.

ಹೋಂ ಮಿನಿಸ್ಟರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ನಾವೂ ಯಾರಿಗೂ ತೊಂದರೆ ಕೊಡುವಂತ ಸಂಧರ್ಭ ಇಲ್ಲ. ಪೆಂಡಿಂಗ್ ಇದ್ದಂತ ಪ್ರಕರಣಗಳನ್ನ, ಯಾರ್ಯಾರು ದೇಶಕ್ಕೆ, ರಾಜ್ಯಕ್ಕೆ ಅಗೌರವ ಕೊಡುತ್ತಾ ಇದ್ದಾರೆ, ಅಶಾಂತಿ ಉಂಟು ಮಾಡುವವರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳುತ್ತಾ ಇದ್ದಾರೆ. ಎಲಕ್ಷನ್ ಹತ್ತಿರ ಬಂದಿದೆ. ಏಳು ತಿಂಗಳು ಅವರಿಗೆ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವುದಕ್ಕೆ ಆಗಿರಲಿಲ್ಲ. ಈಗ ಪಾಪ, ನಾವೂ ಬದುಕಿದ್ದೀವಿ ಅಂತ ತೋರಿಸಿಕೊಳ್ಳುವುದಕ್ಕೆ ಏನೋ ಮಾಡುವುದಕ್ಕೆ ಹೊರಟಿದ್ದಾರೆ. ಪಾಪ ತೋರಿಸಿಕೊಳ್ಳಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದಕ್ಕೆಲ್ಲ ಜನರು ಉತ್ತರ ಕೊಡುತ್ತಾರೆ, ನಾವೂ ಉತ್ತರ ಕೊಡುತ್ತೀವಿ.

ನಾವೂ ಯಾರು ಕೂಡ ಅವರ ತರ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿಲ್ಲ. ಹುಬ್ಬಳ್ಳಿಯಲ್ಲಿ ಎಷ್ಟು ಕೇಸ್ ಹಾಕಿದ್ದಾರೆ..?ಅಮಾಯಕರ ಮೇಲೆಲ್ಲ ಕೇಸ್ ಹಾಕಿದ್ದಾರೆ. ಆ ರೀತಿ ನಾವೂ ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

suddionenews

Recent Posts

ಬಜೆಟ್ ಲೆಕ್ಕಚಾರ ; ಜನರಿಗಿಂತ ಸಚಿವರಿಗೆ ನಿರೀಕ್ಷೆ, ತುಮಕೂರಿಗೆ ಹೆಚ್ಚು ಅನುದಾನ ತರುವ ತವಕ..!!

ಬಜೆಟ್ ಲೆಕ್ಕಚಾರ ; ಜನರಿಗಿಂತ ಸಚಿವರಿಗೆ ನಿರೀಕ್ಷೆ, ತುಮಕೂರಿಗೆ ಹೆಚ್ಚು ಅನುದಾನ ತರುವ ತವಕ..!! ಬೆಂಗಳೂರು; ಮಾರ್ಚ್ 7 ರಾಜ್ಯ…

2 hours ago

ನಿಂಬೆರಸ ಮತ್ತು ಅರಿಶಿನ ಬೆರೆಸಿದ ಪಾನೀಯ ಆರೋಗ್ಯಕ್ಕೆ ಎಷ್ಟೊಂದು ಪ್ರಯೋಜನ ಗೊತ್ತಾ ?

  ಸುದ್ದಿಒನ್ ಪ್ರತಿದಿನ ಬೆಳಿಗ್ಗೆ ನಿಂಬೆರಸ ಮತ್ತು ಅರಿಶಿನ ಬೆರೆಸಿದ ಪಾನೀಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನಿಂಬೆ ಮತ್ತು ಅರಿಶಿನ…

4 hours ago

ಈ ರಾಶಿಯವರು ಎಷ್ಟೇ ದುಡಿದರು ಹಣಕಾಸಿನ ಸಮಸ್ಯೆ ಬಗೆಹರಿಯುತ್ತಿಲ್ಲ

ಈ ರಾಶಿಯ ದಂಪತಿಗಳಿಗೆ ಸಂತಾನ ಭಾಗ್ಯ, ಈ ರಾಶಿಯವರು ಎಷ್ಟೇ ದುಡಿದರು ಹಣಕಾಸಿನ ಸಮಸ್ಯೆ ಬಗೆಹರಿಯುತ್ತಿಲ್ಲ, ಶನಿವಾರದ ರಾಶಿ ಭವಿಷ್ಯ…

7 hours ago

ಇ-ಖಾತಾ ಪಡೆಯಲು ಸಹಾಯವಾಣಿ ಸ್ಥಾಪನೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕರೆ

ಚಿತ್ರದುರ್ಗ. ಫೆ.21:  ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ, ಆದರೆ ಇದುವರೆಗೂ ಇ-ಖಾತಾ ಪಡೆಯದೇ ಇರುವ ಕಟ್ಟಡಗಳ…

17 hours ago

ಟೀಂ ಇಂಡಿಯಾ ಆಟಗಾರ ಚಹಲ್ ಹಾಗೂ ಧನುಶ್ರೀ ಡಿವೋರ್ಸ್ ಅಧಿಕೃತ : ಪರಿಹಾರ ಕೊಟ್ಟಿದ್ದು ಎಷ್ಟು ಕೋಟಿ..?

ಕಳೆದ ಕೆಲವು ದಿನಗಳಿಂದ ಟೀಂ ಇಂಡಿಯಾ ಆಟಗಾರ ಯಜುವೇಂದ್ರ ಚಹಾಲ್ ಹಾಗೂ ನಟಿ ಧನುಶ್ರೀ ಅವರ ಡಿವೋರ್ಸ್ ವಿಚಾರ ಸಿಕ್ಕಾಪಟ್ಟೆ…

18 hours ago

ಮೈಸೂರು ಚಾಮುಂಡಿ ಬೆಟ್ಟದಲ್ಲಿ ನಿಯಂತ್ರಣವಾಗ್ತಿಲ್ಲ ಬೆಂಕಿ ..!

ಮೈಸೂರು: ತಾಯಿ ಚಾಮುಂಡಿ ಬೆಟ್ಟದಲ್ಲಿ ಕಿಡಿಗೇಡಿಗಳಿಂದ ಅವಸ್ಥೆಯಾಗಿದೆ. ಮೊದಲೇ ಬಿಸಿಲಿಗೆ ಒಣಗಿದ ಬೆಟ್ಟಕ್ಕೆ ಕಿಡಿತಾಕಿಸಿದ್ದಾರೆ. ಇದೀಗ ಆ ಕಿಡಿ ಜೋರಾಗಿಯೇ…

18 hours ago