Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ವಂಚನೆ ಕೇಸ್ ನಲ್ಲಿ ಅರೆಸ್ಟ್.. ಸೋಷಿಯಲ್ ಮೀಡಿಯಾದಲ್ಲಿ ಫೇಮಸ್.. ಮೈತುಂಬಾ ಗೋಲ್ಡ್ : ಬಿಗ್ ಬಾಸ್ ಬಂದವರ ಹಿನ್ನೆಲೆ ಏನು..?

---Advertisement---

ಬಿಗ್ ಬಾಸ್ ಕನ್ನಡ ಸೀಸನ್ 11 ಇಂದಿನಿಂದ ಅಧಿಕೃತವಾಗಿ ಚಾಲನೆ ಸಿಗುತ್ತಿದೆ. ಅದಕ್ಕೂ ಮುನ್ನ ನಿನ್ನೆ ದಿನವೇ ರಾಜಾರಾಣಿ ರಿಲೋಡೆಡ್ ಕಾರ್ಯಕ್ರಮದಲ್ಲಿ ಒಂದಷ್ಟು ಸ್ಪರ್ಧಿಗಳ ಹೆಸರನ್ನು ಅನೌನ್ಸ್ ಮಾಡಲಾಗಿದೆ. ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಇಂಥದ್ದೊಂದು ಪ್ರಯತ್ನ ಈ ಬಾರಿಯ ಬಿಗ್ ಬಾಸ್ ನಲ್ಲಿ ನಡೆದಿದೆ. ಬಿಗ್ ಬಾಸ್ ಸ್ಪರ್ಧಿಗಳು ಅನೌನ್ಸ್ ಆದ ಕೂಡಲೇ ಅವರ ಹಿಸ್ಟರಿಯನ್ನು ಹುಡುಕುತ್ತಾ ಹೊರಟಿದ್ದಾರೆ ವೀಕ್ಷಕರು. ಯಾರೆಲ್ಲಾ ಆಯ್ಕೆಯಾಗಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

ಈ ಬಾರಿಯ ಬಿಗ್ ಬಾಸ್ ಗೆ ಗೋಲ್ಡ್ ಸುರೇಶ್ ಕೂಡ ಬಂದಿದ್ದಾರೆ. ಈ ಗೋಲ್ಡ್ ಸುರೇಶ್, ಬೆಳಗಾವಿಯ ಅಥಣಿ ತಾಲೂಕಿನ ಕುಗ್ರಾಮದವರು. ಬೆಂಗಳೂರಿಗೆ ಬಂದು ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದವ, ಕೆಲಸ ಬಿಟ್ಟು ಸ್ವಂತ ಕ್ರಿಯೇಟಿವ್ ಇಂಟಿರಿಯರ್ ಶುರು ಮಾಡಿ ಸಾಧಿಸಿ ತೋರೊಸಿದ್ದಾರೆ. ಸದಾ ಮೈಮೇಲೆ ಕೆಜಿಗಟ್ಟಲೇ ಚಿನ್ನವಿರುವ ಕಾರಣ ಗೋಲ್ಡ್ ಸುರೇಶ್ ಎಂದೇ ಖ್ಯಾತಿ ಪಡೆದಿದ್ದಾರೆ.

ಚೈತ್ರಾ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಒಂದು ಕಾಲದಲ್ಲಿ ಭಾಷಣದ ಮಾಡುವ ಮೂಲಕವೇ ಖ್ಯಾತಿ ಪಡೆದಿದ್ದರು. ಜೋರು ಧ್ವನಿ. ಕೆಲ ವಿವಾದಗಳಿಗೆ ಸಿಲುಕಿ, ವಂಚನೆ ಪ್ರಕರಣದಲ್ಲಿ ಜೈಲು ಸೇರಿ ಬಂದ ಮೇಲೆ ಸೈಲೆಂಟ್ ಆಗಿದ್ದರು. ಈಗ ಬಿಗ್ ಬಾಸ್ ಮನೆಗೆ ಬರ್ತಿದ್ದಾರೆ.

ಇತ್ತೀಚೆಗೆ ವಿವಾದಾತ್ಮಕ ಆರೋಪಗಳಿಂದ ವಕೀಲ ಜಗದೀಶ್ ಭಾರೀ ಸುದ್ದಿ ಆಗುತ್ತಿದ್ದಾರೆ. ಮಾಧ್ಯಮಗಳ ಮುಂದೆ ತಮ್ಮ ಹೇಳಿಕೆಗಳಿಂದ ಗಮನ ಸೆಳೆಯುತ್ತಾ ಬರುತ್ತಿದ್ದಾರೆ. ಇತ್ತೀಚೆಗೆ ನಟ ದರ್ಶನ್ ಬಿಡುಗಡೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ ಸುದ್ದಿ ಮಾಡಿದ್ದರು. ಶಾಸಕರಾದ ಮುನಿರತ್ನ ವಿರುದ್ಧವೂ ಸಾಕಷ್ಟು ಆರೋಪಗಳನ್ನು ಮಾಡಿದ್ದರು. ಜಗದೀಶ್ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...