ನಾಳೆ ಚಿತ್ರದುರ್ಗಕ್ಕೆ ಸಚಿವ ಎಸ್. ಮಧು ಬಂಗಾರಪ್ಪ ಆಗಮನ :  ವಿಶ್ವಮಾನವ ವಿದ್ಯಾಸಂಸ್ಥೆಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿ

1 Min Read

ಚಿತ್ರದುರ್ಗ ಡಿ. 30 :  ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಡಿ. 31 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಅಂದು ಸಂಜೆ ಶಿವಮೊಗ್ಗದಿಂದ ಹೊರಟು ಸಂಜೆ 04 ಗಂಟೆಗೆ ತಾಲ್ಲೂಕಿನ ಸೀಬಾರ ಗುತ್ತಿನಾಡಿಗೆ ಆಗಮಿಸಲಿದ್ದು, ವಿಶ್ವಮಾನವ ಸಾಂಸ್ಕøತಿಕ ವಿದ್ಯಾಸಂಸ್ಥೆ ವತಿಯಿಂದ ಏರ್ಪಡಿಸಿರುವ ರಜತ ಮಹೋತ್ಸವ ಹಾಗೂ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು.  ಬಳಿಕ ಸಂಜೆ 05 ಗಂಟೆಗೆ ಸಿರಿಗೆರೆಗೆ ತೆರಳಿ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಿರುವ ತರಳಬಾಳು ಕ್ರೀಡಾಮೇಳದ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.  ಸಚಿವರು ಅದೇ ದಿನ ಸಂಜೆ 06 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks