Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕೊನೆಯ ಓವರ್ ನಲ್ಲಿ ಅರ್ಷದೀಪ್ ಮ್ಯಾಜಿಕ್ | 4-1 ಅಂತರದಿಂದ ಸರಣಿ ವಶಪಡಿಸಿಕೊಂಡ ಭಾರತ

---Advertisement---

ಸುದ್ದಿಒನ್, ಬೆಂಗಳೂರು, ಡಿ.03 :ಐದನೇ ಟಿ20ಯಲ್ಲಿ ಟೀಂ ಇಂಡಿಯಾ ಜಯಭೇರಿ ಬಾರಿಸಿತು. ಕೊನೆಯ 

ಓವರ್ ನಲ್ಲಿ ಆಸೀಸ್ ಗೆಲುವಿಗೆ 10 ರನ್ ಬೇಕಿದ್ದಾಗ ಆರ್ಷದೀಪ್ ಮ್ಯಾಜಿಕ್ ಮಾಡಿದರು. 6 ಎಸೆತಗಳಲ್ಲಿ ವಿಕೆಟ್ ಪಡೆದು ಕೇವಲ ಮೂರು ರನ್ ನೀಡಿ ಟೀಂ ಇಂಡಿಯಾ ಗೆಲುವಿಗೆ ಕಾರಣರಾದರು. ಈ ಗೆಲುವಿನೊಂದಿಗೆ ಭಾರತ 5 ಪಂದ್ಯಗಳ ಸರಣಿಯನ್ನು 4-1 ಅಂತರದಿಂದ ವಶಪಡಿಸಿಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆಸೀಸ್ ಬೌಲರ್‌ಗಳ ಅಬ್ಬರದಿಂದ ಭಾರತ ನಿಗಧಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿತು.

ಭಾರತದ ಇನ್ನಿಂಗ್ಸ್‌ನಲ್ಲಿ ಶ್ರೇಯಸ್ ಅಯ್ಯರ್ (53) ಮಾತ್ರ ಅರ್ಧಶತಕ ದಾಖಲಿಸಿದರು.
ಯಶಸ್ವಿ (21), ಜಿತೇಶ್ ಶರ್ಮಾ (24) ಮತ್ತು ಅಕ್ಷರ್ ಪಟೇಲ್ (31) ಸಾಧಾರಣ ಸ್ಕೋರ್ ಗಳಿಸಿದರು. ಆಸೀಸ್ ಬೌಲರ್‌ಗಳಲ್ಲಿ ಬೆಹ್ರೆನ್‌ಡಾರ್ಫ್ ಮತ್ತು ಡುಶುಯಿಸ್ ತಲಾ 2 ವಿಕೆಟ್ ಪಡೆದರು. ಆರೋನ್ ಹಾರ್ಡಿ, ನಾಥನ್ ಇಲಿಸ್ ಮತ್ತು ತನ್ವೀರ್ ಸಂಗ ತಲಾ ಒಂದು ವಿಕೆಟ್ ಪಡೆದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...