6ನೇ ತರಗತಿಯಿಂದಲೇ ಓಬವ್ವ ಆತ್ಮರಕ್ಷಣೆ ಕಲೆ : ಕೋಟಾ ಶ್ರೀನಿವಾಸ ಪೂಜಾರಿ

suddionenews
1 Min Read

6ನೇ ತರಗತಿಯಿಂದಲೇ ಓಬವ್ವ ಆತ್ಮರಕ್ಷಣೆ ಕಲೆ : ಕೋಟಾ ಶ್ರೀನಿವಾಸ ಪೂಜಾರಿ

ವಿದ್ಯಾರ್ಥಿನಿಯರಿಗಾಗಿ ಶಾಲೆಯಲ್ಲಿ ಓಬವ್ವ ಆತ್ಮರಕ್ಷಣೆ ಕಲೆ ತರಬೇತಿಯನ್ನು ನೀಡಲಾಗುತ್ತದೆ. ಆ ತರಬೇತಿಯನ್ನು ಈ ವರ್ಷ ಆರನೇ ತರಗತಿಯಿಂದಲೇ ಆರಂಭಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಈ ತರಬೇತಿಯನ್ನು ಹಿಂದೆ ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿನಿಯರಿಗೆ ಮಾತ್ರ ನೀಡಲಾಗುತ್ತಿತ್ತು. ಈ ವರ್ಷದಿಂದ ಆರನೇ ತರಗತಿಯಿಂದಲೇ ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆ ತರಬೇತಿ ನೀಡಲಾಗುತ್ತದೆ. ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನ 24 ಸಾವಿರ ವಿದ್ಯಾರ್ಥಿನಿಯರಿಗೆ ಓಬವ್ವ ಆತ್ಮ ರಕ್ಷಣೆ ಕಲೆ ತರಬೇತಿ ನೀಡಲಾಗುತ್ತಿದೆ. ಈ ಸಾಲಿನಲ್ಲಿ ಪ್ರಿ ಮೆಟ್ರಿಕ್‌ ವಿದ್ಯಾರ್ಥಿನಿಯರು ಸೇರಿ ಒಟ್ಟು 50 ಸಾವಿರ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಲಾಗುವುದು. ಇದಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಖರ್ಚಾಗುತ್ತದೆ ಎಂದು ಹೇಳಿದರು.

ಕರ್ನಾಟಕ ವಸತಿ ಸಂಸ್ಥೆಯ 300 ಶಾಲೆಗಳಲ್ಲಿ ತಲಾ 100 ವಿದ್ಯಾರ್ಥಿನಿಯರಂತೆ ಒಟ್ಟು 30 ಸಾವಿರ ವಿದ್ಯಾರ್ಥಿನಿಯರು ಆತ್ಮ ರಕ್ಷಣಾ ಕಲೆ ತರಬೇತಿ ಪಡೆದಿದ್ದಾರೆ. ಈ ಸಾಲಿನಲ್ಲಿ ಹೆಚ್ಚುವರಿಯಾಗಿ 520 ವಸತಿ ಶಾಲೆಗಳ 82 ಸಾವಿರ ವಿದ್ಯಾರ್ಥಿನಿಯರು ತರಬೇತಿಗೆ ಒಳಪಡುತ್ತಾರೆ. ಒಟ್ಟು 1.15 ಲಕ್ಷ ವಿದ್ಯಾರ್ಥಿನಿಯರು ತರಬೇತಿ ಪಡೆಯಲಿದ್ದಾರೆ. ಇದರ ಅಂದಾಜು ವೆಚ್ಚ ₹17 ಕೋಟಿ ಆಗಲಿದೆ ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *